ಮ್ಯಾನ್ಹೋಲ್ನಲ್ಲಿ ಮೃತಪಟ್ಟ ಕುಟುಂಬದವರಿಗೆ ಉದ್ಯೋಗ
Team Udayavani, Mar 11, 2017, 8:29 AM IST
ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ಮ್ಯಾನ್ಹೋಲ್ನಲ್ಲಿ ಬಿದ್ದು ಮೃತಪಟ್ಟ ಮೂವರ ಕುಟುಂಬಗಳಿಗೆ ತಲಾ 10 ಲಕ್ಷ ರೂ.ಪರಿಹಾರ ತಲುಪಿಸಲಾಗಿದೆ. ಆ ಕುಟುಂಬದ ಸದಸ್ಯರಿಗೆ ಮಾನವೀಯತೆ ಆಧಾರದ ಮೇಲೆ ಉದ್ಯೋಗ
ಕೊಡುವ ಬಗ್ಗೆಯೂ ಪರಿಶೀಲಿಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ಮ್ಯಾನ್ ಹೋಲ್ಗಳಿಗೆ ಕಾರ್ಮಿಕರನ್ನು ಇಳಿಸಿ ಸ್ವತ್ಛ ಮಾಡಿಸೋದು ತಪ್ಪು. ಇನ್ಮು ಮುಂದೆ ಮ್ಯಾನ್ಹೋಲ್ ಸ್ವತ್ಛಗೊಳಿಸುವಾಗ ಪೊಲೀಸ್, ಆ್ಯಂಬುಲೆನ್ಸ್, ಅಗ್ನಿಶಾಮಕ ಸಿಬ್ಬಂದಿ ಸ್ಥಳದಲ್ಲಿರಬೇಕು. ಸ್ವತ್ಛತೆ ಮಾಡುವ ಸಿಬ್ಬಂದಿ ಮದ್ಯಪಾನ ಮಾಡಿರಬಾರದು. ಸಿಬ್ಬಂದಿಗೆ ಆಮ್ಲಜನಕ ಕಿಟ್ ಒದಗಿಸಬೇಕು ಎಂಬುದನ್ನು ಕಡ್ಡಾಯಗೊಳಿಸಿ ನಿಯಮಾವಳಿ ರೂಪಿಸಲಾಧಿಗುವುದು. ಈ ಬಗ್ಗೆ ಜಲಮಂಡಳಿ ಹಾಗೂ ಬಿಬಿಎಂಪಿ ಅಧಿಕಾರಿಗಳ ಜತೆ ಚರ್ಚಿಸಲಾಗುವುದು ಎಂದರು.
ಶೈಕ್ಷಣಿಕ ಉದ್ದೇಶಕ್ಕಾಗಿ ಪರಿಶಿಷ್ಟ ಜಾತಿ ಮತ್ತು ಪಂಡಗದ ವಿದ್ಯಾರ್ಥಿಗಳು ಬ್ಯಾಂಕುಗಳಲ್ಲಿ ಸಾಲ ಪಡೆದಿರುವ ಕುರಿತ
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಆ ಬಗ್ಗೆ ಮಾಹಿತಿ ಪಡೆದು ವಿದ್ಯಾರ್ಥಿಗಳು ಬಿಪಿಎಲ್ ಕುಟುಂಬಗಳಿಗೆ ಸೇರಿದ್ದವರಾಗಿದ್ದರೆ ಸಾಲ
ಮನ್ನಾ ಅಥವಾ ಸರ್ಕಾರವೇ ಭರಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಹೇಳಿದರು.
ಬಜೆಟ್ ನಂತರ ಜಾತಿ ಗಣತಿ ವರದಿ
ರಾಜ್ಯ ಬಜೆಟ್ ಹಾಗೂ ಎರಡು ಕ್ಷೇತ್ರಗಳ ಉಪ ಚುನಾವಣೆ ನಂತರ ಏಪ್ರಿಲ್ ತಿಂಗಳ ಅಂತ್ಯಕ್ಕೆ ಬಹುವಿವಾದಿತ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ (ಜಾತಿ ಸಮೀಕ್ಷೆ) ವರದಿ ಬಿಡುಗಡೆ ಮಾಡಲಾಗುವುದು. ಬಿಜೆಪಿ ಮತ್ತು ಜೆಡಿಎಸ್ ಸಹ ವರದಿ ಪರವಾಗಿದೆ.
ಕಾಂಗ್ರೆಸ್ ಪಕ್ಷದಲ್ಲೇ ವರದಿ ಬಗ್ಗೆ ಅಪಸ್ವರ ಎತ್ತಿರುವವರಿಗೂ ವಾಸ್ತವಾಂಶ ಮನವರಿಕೆ ಮಾಡಿಕೊಡಲಾಗುತ್ತಿದೆ ಎಂದು ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ