ಕೌಟುಂಬಿಕ ದೌರ್ಜನ್ಯ ಕರ್ನಾಟಕದಲ್ಲೇ ಅಧಿಕ


Team Udayavani, May 9, 2022, 9:48 AM IST

1family

ಬೆಂಗಳೂರು: ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಮಹಿಳೆಯರ ಮೇಲಿನ ಕೌಟುಂಬಿಕ ದೌರ್ಜನ್ಯ ಕರ್ನಾಟಕದಲ್ಲೇ ಹೆಚ್ಚು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

ಕೇಂದ್ರ ಸರ್ಕಾರವು 2019-21ರ ಅವಧಿಯಲ್ಲಿ ನಡೆಸಿರುವ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯ ಪ್ರಕಾರ, ರಾಜ್ಯದ ಶೇ.48ರಷ್ಟು ವಿವಾಹಿತ ಮಹಿಳೆ ಯರು(18-49ರ ವಯೋಮಾನ) ತಮ್ಮ ಮೇಲೆ ಪತಿ ಯಿಂದ ದೈಹಿಕ, ಭಾವನಾತ್ಮಕ ಹಾಗೂ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿವೆ ಎಂದು ಹೇಳಿಕೊಂಡಿದ್ದಾರೆ.

ಪತಿಯಿಂದ ಕಿರುಕುಳ, ಹಿಂಸಾಚಾರ ಅನುಭವಿಸುತ್ತಿರುವುದಾಗಿ ಹೇಳಿರುವವವರ ಪೈಕಿ ಕರ್ನಾಟದ ಮಹಿಳೆಯರೇ(ಶೇ.48) ಹೆಚ್ಚಿದ್ದರೆ, ಬಿಹಾರವು(ಶೇ.43) ಎರಡನೇ ಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿ ತೆಲಂಗಾಣ (ಶೇ.41), ಮಣಿಪುರ(ಶೇ.40), ತಮಿಳು ನಾಡು (ಶೇ.40), ಉತ್ತರಪ್ರದೇಶ(ಶೇ.39)ಗಳಿವೆ. ವಿಶೇಷವೆಂದರೆ, ಬಹುತೇಕ ಮಂದಿ ಮದುವೆಯಾದ ಮೊದಲ 2 ವರ್ಷದೊಳಗೇ ಪತಿಯಿಂದ ಹಿಂಸೆಗೆ ಒಳಗಾಗುತ್ತಿರುವುದಾಗಿ ಹೇಳಿದ್ದಾರೆ.

ದೂರುಗಳ ಸಂಖ್ಯೆ ಹೆಚ್ಚಳ

ಈ ವರದಿಗೆ ಪುಷ್ಟಿ ನೀಡುವಂತೆ ರಾಜ್ಯ ಮಹಿಳಾ ಆಯೋಗಕ್ಕೆ ಸಲ್ಲಿಕೆಯಾದ ದೂರುಗಳು ಪೈಕಿಯೂ ಕೌಟುಂಬಿಕ ದೌರ್ಜನ್ಯದ ಆರೋಪಗಳೇ ಹೆಚ್ಚಿರುವುದು ಸ್ಪಷ್ಟವಾಗಿದೆ. 2020ರ ಮಾರ್ಚ್‌ನಿಂದ 22ರ ಏಪ್ರಿಲ್‌ವರೆಗೆ 1,107 ಕೌಟುಂಬಿಕ ದೌರ್ಜನ್ಯ ದೂರುಗಳು ಬಂದಿವೆ. ಈ ವರ್ಷದ ಏಪ್ರಿಲ್‌ವೊಂದರಲ್ಲೇ 35 ಮಂದಿ ಇಂಥ ದೂರುಗಳನ್ನು ನೀಡಿದ್ದಾರೆಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ತಿಳಿಸಿದ್ದಾರೆ.

ಈ ಹಿಂದೆ, 2018ರಲ್ಲಿ ಆಗಿನ ಸರ್ಕಾರ ಮಹಿಳಾ ಮತ್ತು ಮಕ್ಕಳ ಸುರಕ್ಷತೆ ಸಂಬಂಧ ನೇಮಕ ಮಾಡಿದ್ದ ಕಾಂಗ್ರೆಸ್‌ ನಾಯಕ ವಿ.ಎಸ್‌.ಉಗ್ರಪ್ಪ ನೇತೃತ್ವದ ಸಮಿತಿಯು, 6 ಸಾವಿರ ಪುಟಗಳ ವರದಿ ಸಲ್ಲಿಸಿತ್ತು. ಮಹಿಳಾ ದೌರ್ಜನ್ಯ ತಡೆಗೆ ತುರ್ತಾಗಿ ರಾಷ್ಟ್ರೀಯ ನೀತಿ ರೂಪಿಸುವಂತೆ ಶಿಫಾರಸು ಮಾಡಿತ್ತು. ಈಗ ಹೊರಬಿದ್ದಿರುವ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ ಕುರಿತು ಪ್ರತಿಕ್ರಿಯಿಸಿರುವ ಉಗ್ರಪ್ಪ ಅವರು, “ತ್ವರಿತಗತಿ ತೀರ್ಪು, ಸರ್ಕಾರಗಳು, ಸಂಘ- ಸಂಸ್ಥೆಗಳು, ಮಠಾಧೀಶರು, ವಿಚಾರವಂತರಿಂದ ಜನಜಾಗೃತಿಯಂಥ ಕ್ರಮ ಕೈಗೊಂಡರಷ್ಟೇ ಇಂಥ ಸಮಸ್ಯೆಗಳಿಗೆ ಪರಿಹಾರ ಸಾಧ್ಯ’ ಎಂದಿದ್ದಾರೆ.

ಇದನ್ನೂ ಓದಿ:ಪಿಎಸ್‌ಐ ನೇಮಕ ಪ್ರಕರಣ: ಸ್ಟ್ರಾಂಗ್‌ರೂಮ್‌ ಉಸ್ತುವಾರಿಯಲ್ಲೇ ಅಕ್ರಮ

ರಕ್ತಸಂಬಂಧದ ವಿವಾಹ: ರಾಜ್ಯಕ್ಕೆ 2ನೇ ಸ್ಥಾನ

ಭಾರತ ದಲ್ಲಿ ಶೇ.11ರಷ್ಟು ಮಂದಿ ರಕ್ತಸಂಬಂಧಿಗಳನ್ನೇ ವಿವಾಹವಾಗುತ್ತಿದ್ದಾರೆ ಎಂದು ಸಮೀಕ್ಷಾ ವರದಿ ಹೇಳಿದೆ. ಈ ವಿಚಾರದಲ್ಲಿ ಕರ್ನಾಟಕವು ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಇಲ್ಲಿ ಶೇ.27ರಷ್ಟು ಮಂದಿ ತೀರಾ ಹತ್ತಿರದ ಸಂಬಂಧಿಕರನ್ನೇ ಮದುವೆಯಾಗಿದ್ದಾರೆ. ಈ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ತಮಿಳುನಾಡು (ಶೇ.28) ಪಡೆದಿದೆ.

ಮದ್ಯದಾಸರು ಹಳಿಗಳಲ್ಲೇ ಹೆಚ್ಚು ಮದ್ಯಪಾನ ಮಾಡುವುದರಲ್ಲಿ (15 ವರ್ಷ ಮೇಲ್ಪಟ್ಟವರು) ನಗರ ಪ್ರದೇಶಗಳ ಬದಲಿಗೆ ಹಳ್ಳಿಗರೇ ಮುಂದು ಎಂದಿದೆ ಈ ಸಮೀಕ್ಷೆ. ರಾಜ್ಯದಲ್ಲಿ ಸರಾಸರಿ ಶೇ.16.6ರಷ್ಟು ಮಂದಿ ಮದ್ಯದಾಸರಾಗಿದ್ದಾರೆ. ನಗರಪ್ರದೇಶಗಳ ಶೇ.15.4ರಷ್ಟು ಪುರುಷರು ಮದ್ಯಪಾನ ಮಾಡುವವರಾಗಿದ್ದರೆ, ಮಹಿಳೆಯರ ಪ್ರಮಾಣ ಶೇ.0.9 ಆಗಿದೆ. ಆದರೆ, ಗ್ರಾಮೀಣ ಪ್ರದೇಶಗಳಲ್ಲಿ ಶೇ.17.4ರಷ್ಟು ಪುರುಷರು, ಶೇ.1ರಷ್ಟು ಮಹಿಳೆಯರು ಮದ್ಯದಾಸರು ಎಂಬ ವಿಚಾರ ಬೆಳಕಿಗೆ ಬಂದಿದೆ.

ಇಂದಿನ ಜೀವನ ಶೈಲಿ, ವೃತ್ತಿ ಒತ್ತಡದಿಂದಾಗಿ ಸಣ್ಣಪುಟ್ಟ ಮನಸ್ತಾಪಗಳೇ ದೊಡ್ಡದಾಗಿ ಪತಿ-ಪತ್ನಿ ನಡುವೆ ಬಿರುಕು ಮೂಡಿಸುತ್ತಿವೆ. ಅಹಂ ಬಿಟ್ಟು ಪರಸ್ಪರ ಕುಳಿತು ಮಾತುಕತೆ ನಡೆಸಿ ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಪ್ರಮೀಳಾ ನಾಯ್ಡು, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ

-ಹಲೀಮತ್ಸಅದಿಯಾ

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.