ಕಚ್ಚಿದ ಬೃಹತ್ ಹಾವನ್ನು ತುಂಡು ತುಂಡು ಮಾಡಿ ಪ್ರಾಣ ಬಿಟ್ಟ ರೈತ
Team Udayavani, Oct 16, 2018, 1:34 PM IST
ಮಂಡ್ಯ: ರೈತನೊಬ್ಬ ತನಗೆ ಕಡಿದ ವಿಷಕಾರಿ ಹಾವನ್ನು ತುಂಡು ತುಂಡು ಮಾಡಿ ಪ್ರಾಣ ಬಿಟ್ಟ ದಾರುಣ ಘಟನೆ ಮಳವಳ್ಳಿ ತಾಲೂಕಿನ ಯತ್ತಂಬಾಡಿ ಗ್ರಾಮದಲ್ಲಿ ನಡೆದಿದೆ.
ದೊಡ್ಡಚೆನ್ನೀಪುರ ಗ್ರಾಮದ ನಿವಾಸಿಯಾಗಿರುವ ಪುಟ್ಟಮಾದು(35) ಮೃತ ದುರ್ದೈವಿ.
ರೇಷ್ಮೆ ಹುಳು ಸಾಕಾಣಿಕೆ ಮಾಡುತ್ತಿದ್ದ ಪುಟ್ಟಮಾದು ಅವರು ಸೋಮವಾರ ಬೆಳಗ್ಗೆ ರೇಷ್ಮೆ ಹುಳುವಿಗೆ ಹಿಪ್ಪುನೇರಳೆ ಸೊಪ್ಪು ತರಲು ತೋಟಕ್ಕೆ ತೆರಳಿದ್ದ ವೇಳೆ ವಿಷಪೂರಿತ ಕೊಳಕುಮಂಡಲ ಹಾವು ಪುಟ್ಟಮಾದುವಿಗೆ ಕಡಿದಿದೆ.
ಪುಟ್ಟಮಾದು ಅವರು ಈ ವೇಳೆ ಉಡುದಾರವನ್ನು ಬಳಸಿ ಕೊಂಡು ಹಾವು ಕಡಿದ ಮೇಲ್ಬಾಗದಲ್ಲಿ ಕಾಲಿಗೆ ಕಟ್ಟಿಕೊಂಡಿದ್ದಾರೆ. ಕೈಯಲ್ಲಿದ್ದ ಮಚ್ಚಿನ್ನು ಬಳಸಿ ಹಾವನ್ನು ತುಂಡು ತುಂಡಾಗಿ ಕತ್ತರಿಸಿ ಕೊಂದಿದ್ದಾರೆ.
ಈ ವೇಳೆ ಜೋರಾಗಿ ಕೂಗಿಕೊಂಡಿದ್ದು,ಸುತ್ತಮುತ್ತಲಿನ ಜಮೀನಿನಲ್ಲಿದ್ದವರು ನೆರವಿಗೆ ಧಾವಿಸಿದ್ದಾರೆ. ಕೂಡಲೆ ಹಲಗೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ವಿಷವೇರಿ ಪುಟ್ಟಮಾದು ಕೊನೆಯುಸಿರೆಳೆದಿದ್ದಾರೆ.
ಹಲಗೂರು ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ