ಸರ್ಕಾರಕ್ಕೆ ಕೊನೆಗೂ ಜ್ಞಾನೋದಯವಾಗಿದೆ: ಕುರುಬೂರು ಶಾಂತಕುಮಾರ್
Team Udayavani, Nov 19, 2021, 10:27 AM IST
ಬೆಂಗಳೂರು: ಒಂದು ವರ್ಷದ ನಂತರ ಜ್ಞಾನೋದಯವಾಗಿ ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ರದ್ದು ಮಾಡಿದೆ. ಇಂದು ದೇಶದ ರೈತ ಸಮುದಾಯಕ್ಕೆ ಜಯ ಸಿಕ್ಕಿದೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಅಭಿಪ್ರಾಯ ಪಟ್ಟಿದ್ದಾರೆ.
ಮೂರು ಕೃಷಿ ಕಾಯ್ದೆಗಳನ್ನು ವಾಪಾಸ್ ಪಡೆಯುವ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ ಬಳಿಕ ಅವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.
ಈಗಾಗಲೇ 670ಕ್ಕೂ ಹೆಚ್ಚು ಮಂದಿ ರೈತರು ಈ ಹೋರಾಟದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಚಳಿ, ಮಳೆ, ಗಾಳಿ ಲೆಕ್ಕಿಸದೆ ಹೋರಾಟ ಮಾಡಿದ್ದಾರೆ. ಅವರ ಆತ್ಮಕ್ಕೆ ಈ ಜಯವನ್ನು ಅರ್ಪಣೆ ಮಾಡುತ್ತೇವೆ. ಪ್ರಜಾಪ್ರಭುತ್ವದಲ್ಲಿ ರೈತರನ್ನು ದಮನ ಮಾಡುವ ಕೆಲಸ ಮಾಡುವ ಸರ್ಕಾರಗಳಿಗೆ ಇದು ಎಚ್ಚರಿಕೆ ಗಂಟೆ ಎಂದು ತೋರಿಸಿದ್ದೇವೆ. ಮುಂದಿನ ದಿನಗಳಲ್ಲಿ ಕನಿಷ್ಠ ಬೆಂಬಲ ಬೆಲೆಗೆ ಖಾತ್ರಿ ಕೊಡುವ ಕಾಯ್ದೆಯನ್ನು ಜಾರಿ ಮಾಡಲು ಹೋರಾಡುತ್ತೇವೆ ಎಂದು ಕುರುಬೂರು ಶಾಂತಕುಮಾರ್ ಹೇಳಿದರು.
ಜನಾಂದೋಲನಕ್ಕೆ ಸಿಕ್ಕ ಜಯ: ಬಡಗಲಪುರ ನಾಗೇಂದ್ರ
ರೈತ ಮುಖಂಡ ಬಡಗಲಪುರ ನಾಗೇಂದ್ರ ಮಾತನಾಡಿ, ಸರ್ಕಾರ ಕೃಷಿ ಕಾಯ್ದೆಗಳನ್ನು ಕೊನೆಗೂ ವಾಪಾಸ್ ಪಡೆದಿದೆ. ಚಳುವಳಿಗಳಿಗೆ ಜಯ ಯಾವತ್ತೂ ಇದೆ ಎಂಬ ಸಾಬೀತಾಗಿದೆ. ಜಾತಿ, ಭಾಷೆ, ಧರ್ಮ, ಗಡಿ ಮೀರಿ ರೈತರು ಒಂದಾಗಿ ಪ್ರತಿಭಟನೆ ನಡೆಸಿದ್ದರು. 541 ಸಂಘಟನೆಗಳು ದೊಡ್ಡ ಹೋರಾಟ ನಡೆಸಿದ್ದು, ಸರ್ಕಾರ ಮೊಂಡಾಟ ಬಿಟ್ಟು ಕೊನಗೂ ರೈತ ಹೋರಾಟಕ್ಕೆ ಮಣಿದು ಕೃಷಿ ಕಾಯ್ದೆ ಹಿಂಪಡೆದಿದೆ. ಇದು ಜನಾಂದೋಲನಕ್ಕೆ ಸಿಕ್ಕ ಜಯ ಎಂದ ಬಣ್ಣಿಸಿದರು.
ಇದನ್ನೂ ಓದಿ:ಮೂರು ಕೃಷಿ ಕಾಯ್ದೆಗಳನ್ನು ವಾಪಾಸ್ ಪಡೆದ ಕೇಂದ್ರ ಸರ್ಕಾರ: ಪ್ರತಿಭಟನೆ ಕೈಬಿಡಲು ಮೋದಿ ಮನವಿ
ಆದರೆ ಪ್ರಧಾನಿ ಮೋದಿಯವರು ಬೆಂಬಲ ಬೆಲೆ ಖಾತ್ರಿ ಮಾಡುವವ ಕಾಯ್ದೆ ಬಗ್ಗೆ ಮಾತಾಡಿಲ್ಲ, ಹೀಗಾಗಿ ಅದರ ಬಗ್ಗೆ ಹೋರಾಟ ನಡೆಸುತ್ತೇವೆ. ಅದರ ಹೋರಾಟದ ದಿಕ್ಕಿನ ಬಗ್ಗೆ ಮುಂದೆ ನಿರ್ಧರಿಸುತ್ತೇವೆ ಎಂದರು.
ಕೃಷಿ ಕಾಯ್ದೆಗಳನ್ನು ನಿರ್ಧಾರದ ಹಿಂದೆ ರಾಜಕೀಯ ಉದ್ದೇಶ ಇರಬಹುದು. ಇತ್ತೀಚೆಗೆ ನಡೆದ ಹಲವು ಉಪಚುನಾವಣೆಗಳಲ್ಲಿ ಬಿಜೆಪಿಗೆ ಸೋಲಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಸೋಲು ತಪ್ಪಿಸಲು ಸರ್ಕಾರ ಈ ನಿರ್ಧಾರ ಮಾಡಿರಬಹುದು ಎಂದು ಬಡಗಲಪುರ ನಾಗೇಂದ್ರ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ