ಭೂತಾನ್ ನಿಂದ ಅಡಕೆ ಆಮದು ಮಾಡಿದರೂ ರೈತರಿಗೆ ಆತಂಕ ಬೇಡ: ಆರಗ ಜ್ಞಾನೇಂದ್ರ
Team Udayavani, Sep 30, 2022, 1:00 PM IST
ಬೆಂಗಳೂರು: ನೆರೆಯ ದೇಶ ಭೂತಾನ್ ನಿಂದ 17 ಸಾವಿರ ಟನ್ ಹಸಿ ಅಡಕೆ ಆಮದು ಮಾಡಿಕೊಳ್ಳಲು ಅವಕಾಶ ನೀಡಿದ ಕೇಂದ್ರದ ನಿರ್ಧಾರದಿಂದ, ದೇಶಿಯ ಅಡಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಚಿವರು, ಪ್ರಸ್ತುತ ನಮ್ಮ ದೇಶದಿಂದ ಭೂತಾನ್ ದೇಶಕ್ಕೆ, ಸಂಸ್ಕರಿತ ಅಡಕೆ ಉತ್ಪನ್ನಗಳು, ಆಮದು ಪ್ರಮಾಣಕ್ಕಿಂತ ಹೆಚ್ಚು ರಫ್ತು ಆಗುತ್ತಿದ್ದು, ಭೂತಾನ್ ನಿಂದ ಕೇವಲ ಹಸಿ ಅಡಕೆಗೆ ಮಾತ್ರ ಅನುಮತಿ ನೀಡಲಾಗಿದೆ ಎಂದರು.
ನೆರೆಯ ಭೂತಾನ್ ದೇಶವು, ಭಾರತದ ಪರಂಪರಾಗತ ಮಿತ್ರ ದೇಶವಾಗಿದ್ದು, ಉಭಯ ದೇಶಗಳ ನಡುವೆ ಉತ್ತಮ ವಾಣಿಜ್ಯ ವಹಿವಾಟು ನಡೆಸಲಾಗುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ:ನಾಗರ ಹಾವಿಗೆ ಮುತ್ತಿಡಲು ಹೋಗಿ ಕಚ್ಚಿಸಿಕೊಂಡ ಉರಗ ರಕ್ಷಕ!
ಅಡಕೆ ಮಾರುಕಟ್ಟೆಯಲ್ಲಿ, ಸ್ಥಿರತೆಯನ್ನು ಕಾಯ್ದುಕೊಳ್ಳಲು, ಕೇಂದ್ರ ಸರಕಾರದ ಜತೆಗೆ ಸತತ ಸಂಪರ್ಕದಲ್ಲಿದ್ದು, ಭೂತಾನ್ ಅಡಕೆ ಆಮದು ವಿಚಾರವಾಗಿಯೂ, ಮಾತುಕತೆ ನಡೆಸಲಾಗುವುದು. ಬೆಳೆಗಾರರಿಗೆ ಯಾವುದೇ ಗೊಂದಲ ಆತಂಕ ಬೇಡ. ಈ ವಿಚಾರ ಕುರಿತು ಕೇಂದ್ರಕ್ಕೆ ಮನವರಿಕೆ ಮಾಡಿಕೊಡಲು ಲೋಕಸಭಾ ಸದಸ್ಯರ ನೇತೃತ್ವದಲ್ಲಿ ನಿಯೋಗವೊಂದನ್ನು ಕೊಂಡೊಯ್ಯಲಾಗುವುದು ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ