21ರಂದು ಸಿಎಂ ನಿವಾಸಕ್ಕೆ ರೈತರ ಮುತ್ತಿಗೆ
Team Udayavani, Jul 18, 2019, 3:00 AM IST
ಹುಬ್ಬಳ್ಳಿ: ಅಖಂಡ ಕರ್ನಾಟಕ ರೈತ ಸಂಘಟನೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಹುತಾತ್ಮ ದಿನವಾದ ಜು.21ರಂದು ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಸಂಘದ ಉಪಾಧ್ಯಕ್ಷ ಸಿದ್ದನಗೌಡ ಪಾಟೀಲ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರೈತರ ಸಾಲಮನ್ನಾ, ಬರ ಪರಿಹಾರ, ಬೆಳೆ ವಿಮೆ ಹಣ ರೈತರ ಖಾತೆಗೆ ಜಮಾ, ಹಳ್ಳಿ ಕೆರೆಗಳ ಹೂಳೆತ್ತುವುದು ಸೇರಿ ಇನ್ನಿತರೆ ಬೇಡಿಕೆಗಳನ್ನು ಸಂಘದ ಸಂಸ್ಥಾಪಕ ಬಾಬಾಗೌಡ ಪಾಟೀಲ ನೇತೃತ್ವದಲ್ಲಿ ಜು.21ರಂದು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಮುಖ್ಯಮಂತ್ರಿ ನಿವಾಸಕ್ಕೆ ಜಾಥಾದಲ್ಲಿ ತೆರಳಿ ಮುತ್ತಿಗೆ ಹಾಕಲಾಗುವುದು.
ಬೀದರ, ಬಾಗಲಕೋಟೆ, ವಿಜಯಪುರ, ಚಿತ್ರದುರ್ಗ, ಬಳ್ಳಾರಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆ ಸೇರಿ ಇನ್ನಿತರೆ ಜಿಲ್ಲೆಗಳ ಸುಮಾರು ಐದು ಸಾವಿರ ರೈತರು ಪಾಲ್ಗೊಳ್ಳಲಿದ್ದಾರೆ ಎಂದರು.