ಡಿ.1ರಿಂದ ಫಾಸ್ಟ್‌ ಟ್ಯಾಗ್‌ ಕಡ್ಡಾಯ


Team Udayavani, Nov 24, 2019, 3:00 AM IST

Udayavani Kannada Newspaper

ಬೆಂಗಳೂರು: ಡಿಸೆಂಬರ್‌ 1ರಿಂದ ಕಡ್ಡಾಯವಾಗಿ ದೇಶಾದ್ಯಂತ ಫಾಸ್ಟ್‌ ಟ್ಯಾಗ್‌ ಟೋಲ್‌ ಸೇವೆ ಜಾರಿಯಾಗಲಿದ್ದು, ಎಲ್ಲ ಹಳೆಯ ಮತ್ತು ಹೊಸ ವಾಹನಗಳಿಗೆ ಫಾಸ್ಟ್‌ ಟ್ಯಾಗ್‌ ಕಡ್ಡಾಯಗೊಳಿಸಲಾಗಿದೆ ಎಂದು ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಧಾನ ವ್ಯವಸ್ಥಾಪಕ ಶ್ರೀಧರ್‌ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಒಟ್ಟು 39 ರಾಷ್ಟ್ರೀಯ ಟೋಲ್‌ ಪ್ಲಾಜಾಗಳಿದ್ದು, ಎಲ್ಲ ಪ್ಲಾಜಾಗಳಲ್ಲಿ ಸಾಫ್ಟ್ ವೇರ್‌ ಮತ್ತು ಫಾಸ್ಟ್‌ ಟ್ಯಾಗ್‌ ಯಂತ್ರಗಳನ್ನು ಅಳವಡಿಸಲಾಗಿದೆ. ಇನ್ನುಳಿದಂತೆ ರಾಜ್ಯ ಸರ್ಕಾರದ ಕೆಆರ್‌ಐಡಿಎಲ್‌ ಅಧೀನದ 90 ಪ್ಲಾಜಾಗಳಿದ್ದು, ಇವುಗಳಿಗೂ ಫಾಸ್ಟ್‌ ಟ್ಯಾಗ್‌ ಅಳವಡಿಸಲು ಮಾತುಕತೆ ನಡೆಯುತ್ತಿದೆ. 2020ರ ಏಪ್ರಿಲ್‌ ಅಂತ್ಯಕ್ಕೆ ರಾಜ್ಯದ ಎಲ್ಲ ಟೋಲ್‌ ಪ್ಲಾಜಾಗಳು ಫಾಸ್ಟ್‌ ಟ್ಯಾಗ್‌ ಅಳವಡಿಸಿಕೊಳ್ಳಲಿವೆ ಎಂದರು.

ಫಾಸ್ಟ್‌ ಟ್ಯಾಗ್‌ ಅನ್ನು ಅಮೆಜಾನ್‌, ಎಸ್‌ಬಿಐ, ಐಸಿಐಸಿಐ, ಆಕ್ಸಿಸ್‌, ಪೆಟಿಎಂ ವ್ಯಾಲೆಟ್‌ , ಎಚ್‌ಡಿಎಫ್ಸಿ, ಕರೂರ್‌ ವೈಶ್ಯ, ಕೊಟ್ಯಾಕ್‌ ಮಹಿಂದ್ರಾ, ಫೆಡರಲ್‌, ಪಂಜಾಬ್‌ ನ್ಯಾಶನಲ್‌, ಸಿಂಡಿಕೇಟ್‌ , ಯೂನಿಯನ್‌ ಬ್ಯಾಂಕ್‌ ಸೇರಿ ಒಟ್ಟು 22 ಬ್ಯಾಂಕ್‌ಗಳ 28,500 ಮಾರಾಟ ಕೇಂದ್ರಗಳಿಂದ ಖರೀದಿಸಬಹುದು ಎಂದರು. ಇದು ಸುಂಕವಸೂಲಾತಿ ಕೇಂದ್ರದಲ್ಲಿ ದಟ್ಟಣೆಯ ತಡೆರಹಿತ ಸಂಚಾರವನ್ನು ಸುಗಮವಾಗಿಸುತ್ತದಲ್ಲದೆ, ಇಂಧನ ಉಳಿಸಿ, ಮಾಲಿನ್ಯ ತಡೆಯುತ್ತದೆ.

ಗ್ರಾಹಕರು ಶೇ.2.5 ಕ್ಯಾಶ್‌ ಬ್ಯಾಕ್‌ ಕೊಡುಗೆ ಪಡೆಯಬಹುದು ಎಂದು ತಿಳಿಸಿದರು. ಕ್ಯಾಶ್‌ ಲೇನ್‌ ಆಗಿ ಕೇವಲ ಒಂದು ಲೇನ್‌ ಅನ್ನು ಮಾತ್ರ ಅನುಮತಿ ನೀಡಲಾಗುವುದು. ಸರ್ಕಾರಿ ಗೆಜೆಟ್‌ ಪ್ರಕಾರ ರಾಷ್ಟ್ರೀಯ ಹೆದ್ದಾರಿ ಟೋಲ್‌ ಪ್ಲಾಜಾದಲ್ಲಿ ಯಾವುದೇ ವಾಹನವು ಫಾಸ್ಟ್‌ ಟ್ಯಾಗ್‌ ಇಲ್ಲದೆ ಫಾಸ್ಟ್‌ ಟ್ಯಾಗ್‌ ಲೇನ್‌ಗೆ ಪ್ರವೇಶಿಸುತ್ತಿದ್ದರೆ ಅದು ಅನ್ವಯವಾಗುವ ಶುಲ್ಕವನ್ನು ದ್ವಿಗುಣವಾಗಿ ಪಾವತಿಸಬೇಕಾಗುತ್ತದೆ ಎಂದರು.

ಹತ್ತಿರದ ಮಾರಾಟದ ಸ್ಥಳವನ್ನು ಕಂಡುಹಿಡಿಯಲು ಪ್ಲೇ ಸ್ಟೋರ್‌ ನಲ್ಲಿ ಫಾಸ್ಟ್‌ ಟ್ಯಾಗ್‌ ಆ್ಯಪ್‌ ಅನ್ನು ಡೌನ್‌ ಲೋಡ್‌ ಮಾಡಬಹುದು ಅಥವಾ ಅಥವಾ ರಾಷ್ಟ್ರೀಯ ಹೆದ್ದಾರಿ ಸಹಾಯವಾಣಿ ಸಂಖ್ಯೆ 1033ಗೆ ಕರೆ ಮಾಡಿ ಹತ್ತಿರದ ಮಾರಾಟ ಸ್ಥಳವನ್ನು ತಿಳಿದುಕೊಳ್ಳಬಹುದು ಎಂದು ತಿಳಿಸಿದರು.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.