ಅಪಘಾತ; ತಂದೆ ಮಗ ಸಾವು,ಸುದ್ದಿ ಕೇಳಿ ತಾತನೂ ಹೃದಯಾಘಾತದಿಂದ ಸಾವು
Team Udayavani, May 13, 2018, 4:11 PM IST
ದಾವಣಗೆರೆ: ಚನ್ನಗಿರಿಯ ಗುಲ್ಲಹಳ್ಳಿ ಬಳಿ ನಡೆದ ಭೀಕರ ಅಪಘಾತದಲ್ಲಿ ತಂದೆ ಮಗ ಸಾವನ್ನಪ್ಪಿದ ದುರ್ಘಟನೆ ನಡೆದು ಕೆಲ ಹೊತ್ತಲ್ಲೇ ವಿಷಯ ತಿಳಿದು ತಾತನೂ ಹೃದಯಾಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ ಭಾನುವಾರ ನಡೆದಿದೆ.
ಬೊಲೆರೊ ವಾಹನ ಢಿಕ್ಕಿಯಾದ ಪರಿಣಾಮ ಬೈಕ್ನಲ್ಲಿ ತೆರಳುತ್ತಿದ್ದ ಶಾಮಿಯಾನ ಅಂಗಡಿಯ ಮಾಲೀಕ 55 ವರ್ಷದ ಅಸ್ಲಮ್ ಮತ್ತು 23 ವರ್ಷದ ಪುತ್ರ ಖಲೀಲ್ ಅಸ್ಲಮ್ ಅವರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಈ ವಿಚಾರ ತಿಳಿದು ಮನೆಯಲ್ಲಿದ್ದ ಅಸ್ಲಮ್ ಅವರ ತಂದೆ 77 ವರ್ಷದ ಸೈಯದ್ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೂವರ ಸಾವಿನಿಂದ ಕುಟುಂಬದವರ ಆಕೃಂದನ ಮುಗಿಲು ಮುಟ್ಟಿದೆ.
ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೊಲೆರೋ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು