ಭಯ ಬೇಡ, ದೂರುದಾರರ ಹೆಸರನ್ನು ಗೌಪ್ಯವಾಗಿಡುವೆವು…


Team Udayavani, Nov 25, 2020, 5:15 AM IST

ಭಯ ಬೇಡ, ದೂರುದಾರರ ಹೆಸರನ್ನು ಗೌಪ್ಯವಾಗಿಡುವೆವು…

ಸಾಂದರ್ಭಿಕ ಚಿತ್ರ

ಶಾಲೆ-ತರಗತಿಗಳಿಂದ ಮಕ್ಕಳು ದೂರವಾಗಿ 9 ತಿಂಗಳುಗಳೇ ಕಳೆದಿದ್ದು, ಮನೆಗಳ ನಾಲ್ಕು ಗೋಡೆಗಳಿಗೆ ಸೀಮಿತವಾಗಿರುವ ಮಕ್ಕಳನ್ನು ನಿಯಂತ್ರಿಸುವುದೇ ಸವಾಲಾಗಿದೆ. ಮಕ್ಕಳ ವಿಚಾರದಲ್ಲಿ ಪೋಷಕರಲ್ಲಿ ಮೂಡಿರುವ ಆತಂಕ ಹಾಗೂ ಪ್ರಶ್ನೆಗಳಿಗೆ ಸಂಬಂಧಪಟ್ಟ ಇಲಾಖೆ ಹಾಗೂ ತಜ್ಞರಿಂದ ಪರಿಹಾರ ಒದಗಿಸಲು “ಉದಯವಾಣಿ’ ವೇದಿಕೆ ಕಲ್ಪಿಸಿದೆ.

ಆನ್‌ಲೈನ್‌ ಶಿಕ್ಷಣದ ಹೆಸರಿನಲ್ಲಿ ಶುಲ್ಕ ಪಡೆಯುವುದು ಅಥವಾ ಹೆಚ್ಚುವರಿ ಶುಲ್ಕ ಪಡೆಯುವ ಬಗ್ಗೆ ದೂರು ನೀಡಿದರೆ ಅಂಥ‌ವರ ಹೆಸರನ್ನು ಗೌಪ್ಯವಾಗಿಡಲಾಗುತ್ತದೆಯೇ? ಹೆಸರು ಗೌಪ್ಯವಾಗಿಟ್ಟರೆ ಪೋಷಕರಿಗೆ ಧೈರ್ಯ ಬರುತ್ತದೆ. ಇಲ್ಲವಾದರೆ ಮುಂದೆ ಮಕ್ಕಳಿಗೂ ಇದರಿಂದ ಸಮಸ್ಯೆ ಆಗಬಹುದಲ್ಲವೇ?
– ಸತೀಶ್‌ ಬಿ ನಾಗಸಂದ್ರ, ಬೆಂಗಳೂರು.

ಉತ್ತರ: ಖಾಸಗಿ ಶಾಲೆಗಳ ಹೆಚ್ಚುವರಿ ಶುಲ್ಕದ ಬಗ್ಗೆ ದೂರು ನೀಡಿರುವ ಪಾಲಕ, ಪೋಷಕರು ಯಾವುದೇ ರೀತಿಯಲ್ಲೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ದೂರು ನೀಡಿರುವ ಪಾಲಕ, ಪೋಷಕರ ಹೆಸರನ್ನು ಗೌಪ್ಯವಾಗಿಡಲು ಅವಕಾಶವಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಯಾವುದೇ ಸಮಸ್ಯೆ ಆಗದಂತೆ ಪಾಲಕರೇ ಮುನ್ನೆಚ್ಚರಿಕೆ ವಹಿಸಿ, ಹೆಸರು ಗೌಪ್ಯವಾಗಿಡಬೇಕು ಎಂದು ಉಲ್ಲೇಖೀಸಿದರೆ, ಗೌಪ್ಯವಾಗಿಡುತ್ತೇವೆ. ದೂರು ನೀಡಿದರೆ ಆ ಶಾಲೆಯಲ್ಲಿ ಮಕ್ಕಳಿಗೆ ಮುಂದೆ ಸಮಸ್ಯೆಯಾಗಬಹುದು ಎಂಬ ಯಾವುದೇ ಆತಂಕ ಬೇಡ.
– ಸುರೇಶ್‌ ಕುಮಾರ್‌, ಶಿಕ್ಷಣ ಸಚಿವ

ಮಕ್ಕಳು ಮನೆಯಲ್ಲೆ ಕುಳಿತು ಮಾನಸಿಕ ಖನ್ನತೆಗೆ ಒಳಗಾಗಿದ್ದಾರೆ. ಇವರನ್ನು ಸದಾ ಸಂತೋಷವಾಗಿಡಲು ಏನೇನು ಮಾಡಬೇಕು.?
– ಮಹಾಂತೇಶ ರಾಜಗೋಳಿ, ಬೈಲಹೊಂಗಲ , ಬೆಳಗಾವಿ

ಉತ್ತರ: ಖನ್ನತೆಗೊಳಗಾಗಿರುವ ಮಕ್ಕಳನ್ನು ಒಂಟಿಯಾಗಿರಲು ಬಿಡಬೇಡಿ. ಪೋಷಕರೇ ಸ್ನೇಹಿತರಾಗುವ ಮೂಲಕ ಮುಕ್ತವಾಗಿ ಮಾತನಾಡಿಸಿ. ವೀಡಿಯೊ ಕಾಲ್‌ ಮೂಲಕ ಆತ್ಮೀಯರು, ಸ್ನೇಹಿತರು, ಸಂಬಂಧಿಕರನ್ನು ಮಾತನಾಡಲು ಅವಕಾಶ ಮಾಡಿಕೊಡಿ. ಹೊಸತನ, ಬದಲಾಣೆಯು ಖನ್ನತೆಯನ್ನು ದೂರ ಮಾಡಿ ಸಂತೋಷವನ್ನು ಹೆಚ್ಚಿಸುತ್ತದೆ. ಶಾಲೆ ಮುಚ್ಚಿರುವುದರಿಂದ ಪಠ್ಯೇತರ, ಜೀವನಕ್ಕೆ ಮೌಲ್ಯಯುತವಾದ ಅಂಶಗಳ ಕಲಿಕೆಗೆ ಸಮಯ ಮತ್ತು ಅವಕಾಶಗಳು ಹೆಚ್ಚಿದೆ. ಹೊಸ ವಿಷಯ, ಕೌಶಲ್ಯ, ಕೆಲಸವನ್ನು ಯಶಸ್ವಿಯಾಗಿ ಕಲಿತುಕೊಂಡಾಗ ದೇಹದಲ್ಲಿ ಧನಾತ್ಮಕ ಮತ್ತು ಸಂತೋಷ ನೀಡುವ ಹಾರ್ಮೋನುಗಳು ಉತ್ಪತ್ತಿಯಾಗುತ್ತವೆ. ದಿನಚರಿ ಸಿದ್ಧಪಡಿಸಿ, ಯೋಗ ಧ್ಯಾನ, ಒಳಾಂಗಣ ಆಟಗಳಿಗೆ ಆದ್ಯತೆ ಇರಲಿ.
– ಡಾ| ಪಿ. ರಜನಿ,  ಉಪ ನಿರ್ದೇಶಕರು, ಮಾನಸಿಕ ಆರೋಗ್ಯ, ಆರೋಗ್ಯ ಇಲಾಖೆ

ಮಕ್ಕಳು ಆನ್‌ಲೈನ್‌ ತರಗತಿ ನೆಪದಲ್ಲಿ ಆನ್‌ಲೈನ್‌ ಗೇಮ್‌ಗಳ ದಾಸರಾಗುತ್ತಿದ್ದಾರೆ. ಆನ್‌ಲೈನ್‌ ಗೇಮ್‌ ನಿಷೇಧ ಮಾಡಬಾರದೇ?
– ಮುತ್ತುರಾಜ್‌, ದೊಡ್ಡಬಳ್ಳಾಪುರ, ಬೆಂ. ಗ್ರಾಮಾಂತರ.

ಉತ್ತರ: ಹೌದು, ಶಾಲಾ ಮಕ್ಕಳು ಆನ್‌ಲೈನ್‌ ಪಾಠ ಕಲಿಕೆ ಸಂದರ್ಭ ಆನ್‌ಲೈನ್‌ ಗೇಮ್‌ಗಳಿಗೆ ಆಕರ್ಷಿತರಾಗಿ ಆನ್‌ಲೈನ್‌ ಆಟದಲ್ಲಿ ಹೆಚ್ಚು ಮಗ್ನರಾಗುತ್ತಿರುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ. ಈ ಬಗ್ಗೆ ನ. 27ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರೊಂದಿಗೂ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು.
– ಜೆ.ಸಿ. ಮಾಧುಸ್ವಾಮಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.