ಸಾಲ ಮನ್ನಾ ನಿರೀಕ್ಷೆಯಲ್ಲಿ ಸ್ತ್ರೀ ಸಂಘಗಳು


Team Udayavani, May 23, 2018, 6:00 AM IST

40.jpg

ಕೋಲಾರ: ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರಕಾರ ಅಧಿಕಾರ ಚುಕ್ಕಾಣಿ ಹಿಡಿಯಲು ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಸಾಲ ಮನ್ನಾ ಕುರಿತು ನಿರೀಕ್ಷೆಗಳು ಹೆಚ್ಚಾಗುತ್ತಿವೆ. ಅದರಲ್ಲೂ, ಕೋಲಾರದ ಮಹಿಳಾ ಸ್ವ-ಸಹಾಯ ಸಂಘಗಳು ಕುಮಾರಸ್ವಾಮಿಯವರು ಸಾಲಮನ್ನಾ ಮಾಡಿಯೇ ತೀರುತ್ತಾರೆ ಎಂಬ ನಂಬಿಕೆಯಲ್ಲಿದ್ದಾರೆ.

ಸಿದ್ದರಾಮಯ್ಯ ನೇತೃತ್ವದ ಸರಕಾರ ಮಹಿಳೆಯರ ಸ್ವಾವಲಂಬನೆಗಾಗಿ ಶೂನ್ಯ ಬಡ್ಡಿಯಲ್ಲಿ ಸಾಲ ನೀಡಲು ಮುಂದಾಗಿತ್ತು. ಅದರಂತೆ ರಾಜ್ಯದಲ್ಲಿನ ಸಹಕಾರ ಬ್ಯಾಂಕ್‌ಗಳ ಮೂಲಕ 5 ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಶೂನ್ಯ ಬಡ್ಡಿಯಲ್ಲಿ ವಿವಿಧ ಗೃಹೋಪಯೋಗಿ ಉದ್ದಿಮೆಗಳ ಆರ್ಥಿಕ ಚಟುವಟಿಕೆಗಳಿಗಾಗಿ 1,116 ಕೋಟಿ ರೂ. ಸಾಲ ಮಂಜೂರು ಮಾಡಲಾಗಿದೆ. ಈ ಪೈಕಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿಯೇ ಡಿಸಿಸಿ ಬ್ಯಾಂಕ್‌ ಮೂಲಕ ಸುಮಾರು 2.5 ಲಕ್ಷ ಮಹಿಳೆಯರಿಗೆ ಸುಮಾರು 583.45 ಕೋಟಿ ರೂ. ಶೂನ್ಯ ಬಡ್ಡಿಯಲ್ಲಿ ಸಾಲ ವಿತರಿಸಲಾಗಿದೆ.
ಸಾಲ ಮನ್ನಾ ವಾಗ್ಧಾನ: ಈ ಬಾರಿಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಬಿಜೆಪಿಯವರು ಬಿಡುಗಡೆ ಮಾಡಿದ್ದ ಪ್ರಣಾಳಿಕೆಯಲ್ಲಿ ಸಾಲಮನ್ನಾ ವಿಚಾರ ಪ್ರಸ್ತಾಪವಾಗಿತ್ತು. ಅದರಲ್ಲೂ ಕುಮಾರಸ್ವಾಮಿಯವರು ಚುನಾವಣಾ ಪ್ರಚಾರ ಮಾಡಿದ ಎಲ್ಲಾ ಕಡೆ ತಾವು ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ  ರೈತರ ಬೆಳೆ ಸಾಲ ಹಾಗೂ ಸ್ತ್ರೀಶಕ್ತಿ ಸಂಘಗಳಿಗೆ ನೀಡಿರುವ ಸಾಲವನ್ನು ಮನ್ನಾ ಮಾಡುವುದಾಗಿ 
ಪ್ರಕಟಿಸಿದ್ದರು. ಮೂರೇ ದಿನ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಒಂದು ಲಕ್ಷ ರೂ. ವರೆಗಿನ ಸಾಲವನ್ನು ಮನ್ನಾ ಮಾಡುವುದಾಗಿ ವಾಗ್ಧಾನ ಮಾಡಿ, ರಾಜ್ಯದ ಜನತೆಯನ್ನು ಆಕರ್ಷಿಸುವ ಕೆಲಸ ಮಾಡಿದ್ದರು. 

ಈ ಮಧ್ಯೆ, ಕುಮಾರಸ್ವಾಮಿಯವರು ಮಂಗಳವಾರ ಶೃಂಗೇರಿಯಲ್ಲಿ ಮಾತನಾಡಿ, ತಮಗೆ ಪೂರ್ಣ ಬಹುಮತ ಬಾರದ ಕಾರಣ ಸಾಲ ಮನ್ನಾ ಯೋಜನೆಯನ್ನು ಸಂಪೂರ್ಣವಾಗಿ ಜಾರಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿರು ವುದು ಸಾಲ ಪಡೆದವರಲ್ಲಿ ಹಾಗೂ ಸಾಲ ಮನ್ನಾ
ನಿರೀಕ್ಷೆಯಲ್ಲಿರುವವರಿಗೆ ಕೊಂಚ ನಿರಾಸೆ ಮೂಡಿಸಿದೆ. ಆದರೂ, ಎಚ್ಡಿಕೆ ಸಿಎಂ ಆದ ಮೇಲೆ ರೈತರಿಗೆ, ಮಹಿಳಾ ಸ್ವಸಹಾಯ ಸಂಘಗಳಿಗೆ ನೀಡಿರುವ ಸಾಲವನ್ನು ಮನ್ನಾ ಮಾಡಿಯೇ ಮಾಡುತ್ತಾರೆ ಎಂಬ ವಿಶ್ವಾಸವನ್ನು ಜಿಲ್ಲೆಯ ಮಹಿಳಾ ಸಂಘಗಳ ಪ್ರತಿನಿಧಿಗಳು ವ್ಯಕ್ತಪಡಿಸುತ್ತಿದ್ದಾರೆ.

ಹೊಸ ಸರಕಾರ ಸಾಲಮನ್ನಾ ವಿಚಾರದಲ್ಲಿ ತನ್ನ ನಿಲುವನ್ನು ಸ್ಪಷ್ಟ ಪಡಿಸಿದರೆ ಸಹಕಾರ ಬ್ಯಾಂಕುಗಳ ಆರ್ಥಿಕ ಚಟುವಟಿಕೆಗಳನ್ನು ಬೇಗ ಸ್ಥಿರಪಡಿಸಲು ಸಾಧ್ಯವಾಗುತ್ತದೆ.
● ಬ್ಯಾಲಹಳ್ಳಿ ಗೋವಿಂದಗೌಡ ಅಧ್ಯಕ್ಷರು, ಡಿಸಿಸಿ ಬ್ಯಾಂಕ್‌

ನೂತನ ಸರಕಾರ ಮಹಿಳಾ ಸಂಘಗಳ ಸಾಲವನ್ನು ಸಂಪೂರ್ಣ ಮನ್ನಾ ಮಾಡಿದರೆ ಲಕ್ಷಾಂತರ ಮಹಿಳೆಯರು ಸಾಲದ ಸುಳಿಯಿಂದ ಹೊರಗೆ ಬಂದು ಚೇತರಿಸಿಕೊಳ್ಳಲು ಸಾಧ್ಯವಾಗುತ್ತದೆ.
● ಅರುಣ ಕುಮಾರಿ, ಶ್ರೀ ಲಕ್ಷ್ಮೀ ಸ್ವಸಹಾಯ ಮಹಿಳಾ ಸಂಘ, ಕೋಲಾರ.

ಕುಮಾರಣ್ಣನವರು ಸಿಎಂ ಆಗುತ್ತಿರುವುದರಿಂದ ಮಹಿಳೆಯರ ಸಾಲ ಮನ್ನಾ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ. ಇದಕ್ಕಾಗಿ ಕಾತುರದಿಂದ ಕಾಯುತ್ತಿದ್ದೇವೆ.
● ಅಕ್ಕುಲಮ್ಮ, ಮಹೇಶ್ವರಿ ಸ್ವಸಹಾಯ ಮಹಿಳಾ ಸಂಘ, ಚೋಳಘಟ್ಟ

● ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.