ಮತದಾರರ ಸಂಖ್ಯೆ: ಪ್ರಮೀಳಾ ಪಾರುಪತ್ಯ


Team Udayavani, Jan 25, 2022, 10:36 AM IST

ಮತದಾರರ ಸಂಖ್ಯೆ: ಪ್ರಮೀಳಾ ಪಾರುಪತ್ಯ

ಬೆಂಗಳೂರು: ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಗಳಲ್ಲಿ ವಿದ್ಯಾರ್ಥಿನಿಯರ ಮೇಲುಗೈ ಎಂಬುದು ಸರ್ವೇಸಾಮಾನ್ಯ. ಆದರೆ, ರಾಜ್ಯದ ಒಟ್ಟು ಮತದಾರರಲ್ಲೂ ಮಹಿಳೆಯರದ್ದೇ ಪಾರುಪಾತ್ಯ ಆಗಿದೆ. ಪರಿಷ್ಕೃತ ಮತದಾರರ ಪಟ್ಟಿಯಂತೆ ಅರ್ಧ ರಾಜ್ಯದಲ್ಲಿ ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು ಇದ್ದಾರೆ.

ರಾಜ್ಯದ ಒಟ್ಟು ಮತದಾರರಲ್ಲಿ ಮಹಿಳೆಯ ಸಂಖ್ಯೆ ಕಡಿಮೆ ಇದ್ದರೂ 15 ಜಿಲ್ಲೆಗಳಲ್ಲಿ ಮಹಿಳಾಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. 2022ರ ಅಂತಿಮ ಮತದಾರರ ಪಟ್ಟಿಪ್ರಕಟವಾಗಿದ್ದು, ಅದರಂತೆ 5.25 ಕೋಟಿಮತದಾರರು ಇದ್ದು, ಅದರಲ್ಲಿ 2.64 ಕೋಟಿ ಪುರುಷರು, 2.60 ಕೋಟಿ ಮಹಿಳೆಯರು ಇದ್ದಾರೆ. ಇತರರು 4,715 ಮತದಾರರು ಇದ್ದಾರೆ.

2021ರ ಅಂತಿಮ ಮತದಾರರ ಪಟ್ಟಿಯಂತೆ 3.27 ಲಕ್ಷ ಮತದಾರರು ಹೆಚ್ಚಾಗಿದ್ದಾರೆ. 4.01ಲಕ್ಷ ಯುವ ಮತದಾರರು ಇದ್ದು, ಅದರಲ್ಲಿ 1.04ಲಕ್ಷ 18 ವರ್ಷದ ಮತದಾರರು ಇದ್ದಾರೆ.ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಪ್ರಕಟಿಸಿರುವ ಮಾಹಿತಿಯಂತೆ ಬಾಗಲಕೋಟೆ,ರಾಯಚೂರು, ಕೊಪ್ಪಳ, ಬಳ್ಳಾರಿ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ,ಕೋಲಾರ, ರಾಮನಗರ, ಮಂಡ್ಯ, ದಕ್ಷಿಣ ಕನ್ನಡ,ಕೊಡಗು, ಮೈಸೂರು ಹಾಗೂ ಚಾಮರಾಜನಗರಜಿಲ್ಲೆಗಳಲ್ಲಿ ಪುರಷರಿಗಿಂತ ಮಹಿಳಾ ಮತದಾರರುಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇದೇ ವೇಳೆ ಗೋಕಾಕ್‌,ವಿಜಯಪುರ ನಗರ, ಸೇಡಂ, ಕೊಪ್ಪಳ, ಕಾರವಾರ, ಭದ್ರಾವತಿ, ಬೈಂದೂರು, ನರಸಿಂಹರಾಜ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಮಹಿಳಾ ಮತದಾರರು ಅಧಿಕವಾಗಿದ್ದಾರೆ.

2022ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ 2021ರ ಆಗಸ್ಟ್‌ನಿಂದ ಆರಂಭವಾಗಿತ್ತು. 2022ರ ಜ.13ರಂದು ಅಂತಿಮ ಮತದಾರರ ಪಟ್ಟಿಪ್ರಕಟಿಸಲಾಗಿದ್ದು, ಮತದಾರರ-ಜನಸಂಖ್ಯಾಅನುಪಾತ ಶೇ.70.76 ಇದೆ. ಈ ಬಾರಿಯ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿಎಪಿಕ್‌ ನಂಬರ್‌ ನೀಡುವ ಮತ್ತು ಫೋಟೋ ಜೋಡಣೆ ಶೇ.100ರಷ್ಟುಆಗಿದೆ. 47,776 ಸೇವಾ ಮತ ದಾರರು(ಸರ್ವಿಸ್‌ ಓಟರ್), 4.23 ಸಾವಿರ ಅಂಗವಿಕಲ ಮತದಾರರು ಇದ್ದಾರೆ.

ಉಡುಪಿ, ತುಮಕೂರು, ಕೋಲಾರ, ಮಂಡ್ಯ ಹಾಗೂ ಹಾಸನ ಜಿಲ್ಲೆಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಉಳಿದ ಜಿಲ್ಲೆಗಳಿಗಿಂತ ಹೆಚ್ಚು ಪರಿಣಾಮ ಕಾರಿಯಾಗಿ ನಡೆದಿದೆ ಎಂದು ಚುನಾವಣಾಆಯೋಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಲಿಂಗಾನುಪಾತ ಕೊಂಚ ಏರಿಕೆ: 2011ರ ಜನಗಣತಿ ಪ್ರಕಾರ ಲಿಂಗಾನುಪಾತ 973 ಇದ್ದರೆ,2022ರ ಅಂತಿಮ ಮತದಾರರ ಪಟ್ಟಿ ಪ್ರಕಾರಲಿಂಗಾನುಪಾತ 984 ಆಗಿದ್ದು, ಕಳೆದ ನಾಲ್ಕುವರ್ಷಗಳಲ್ಲಿ ಲಿಂಗಾನುಪಾತ ಸಣ್ಣ ಪ್ರಮಾಣದಲ್ಲಿಏರಿಕೆ ಕಂಡಿದೆ. 2108ರಲ್ಲಿ ಲಿಂಗಾನುಪಾತ 972,2019ರಲ್ಲಿ 976, 2020ರಲ್ಲಿ 981, 2021ರಲ್ಲಿ 983 ಹಾಗೂ 2022ರಲ್ಲಿ 984 ಆಗಿದೆ. ಈ ವರ್ಷಗಳಲ್ಲಿಮಹಿಳಾ ಮತದಾರರ ನೋಂದಣಿ ಸಹ ಹೆಚ್ಚಾಗಿದೆ.ಅದರ ಪರಿಣಾಮ ಲಿಂಗಾನುಪಾತದಲ್ಲೂ ಕೊಂಏರಿಕೆ ಕಂಡಿದೆ. 2022ರ ಅಂತಿಮ ಪಟ್ಟಿ ಪ್ರಕಾರ ಸಾವಿರ ಪುರಷ ಮತದಾರರಿಗೆ 984 ಮಹಿಳಾ ಮತದಾರರು ಇದ್ದಾರೆ.

ಶೇ.74ರಷ್ಟು ಆನ್‌ಲೈನ್‌ ಅರ್ಜಿ :

ಮತದಾರರ ಪಟ್ಟಿ ಪರಿಷ್ಕರಣೆಗೆ 2021ರ ನ.1ರಿಂದ ಡಿ.8ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿತ್ತು. ಇದೇ ಮೊದಲ ಬಾರಿಗೆ ಗರಿಷ್ಠ ಪ್ರಮಾಣದಲ್ಲಿ ಆನ್‌ಲೈನ್‌ನಲ್ಲಿ ಅರ್ಜಿಗಳು ಸಲ್ಲಿಕೆಯಾಗಿವೆ. ಒಟ್ಟು ಸಲ್ಲಿಕೆಯಾದ 6.12 ಲಕ್ಷಕ್ಕೂ ಹೆಚ್ಚು ಅರ್ಜಿಗಳಲ್ಲಿ 4.61 ಲಕ್ಷಕ್ಕೂ ಹೆಚ್ಚು, ಅಂದರೆ ಶೇ.76ರಷ್ಟು ಅರ್ಜಿಗಳು ಆನ್‌ಲೈನ್‌ ಮೂಲಕ ಸಲ್ಲಿಕೆಯಾಗಿದ್ದು 1.51 ಲಕ್ಷಕ್ಕೂ ಹೆಚ್ಚು ಅರ್ಜಿಗಳು (ಶೇ.24) ಆಫ್ಲೈನ್‌ ಮೂಲಕಸಲ್ಲಿಕೆಯಾಗಿವೆ. ಕಳೆದ ಬಾರಿಗೆ ಹೊಲಿಸಿದರೆ ಆನ್‌ಲೈನ್‌ ಅರ್ಜಿ ಸಲ್ಲಿಕೆಯಲ್ಲಿ ಗಣನೀಯ ಪ್ರಮಾಣದಲ್ಲಿ ಅಂದರೆ ಶೇ.34ರಷ್ಟು ಏರಿಕೆಯಾಗಿದೆ.

ಪುರುಷರ ಮೇಲುಗೈ :  ಅರ್ಧ ರಾಜ್ಯದಲ್ಲಿ ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ದ್ದರೆ, ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯರಿ ಗಿಂತ ಪುರುಮತದಾರರು ಹೆಚ್ಚಿದ್ದಾರೆ. ಬೆಂಗಳೂರು ನಗರ ಸೇರಿಕೊಂಡತೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಕೇಂದ್ರ, ಉತ್ತರ, ದಕ್ಷಿಣ ವಲಯದಲ್ಲೂ  ಮಹಿಳೆಯರಿಗಿಂತ ಪುರುಷ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

 2022ರ ಅಂತಿಮ ಮತದಾರರ ಪಟ್ಟಿ :

ಪುರುಷರು: 2,64,60,225

ಮಹಿಳೆಯರು: 2,60,42,784

ಇತರರು : 4,715

ಒಟ್ಟು : 5,25,07,724

-ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.