ವಿಷಕಾರಿ ಅಣಬೆ ಸೇವಿಸಿ ಹದಿನೈದು ಮಂದಿ ಅಸ್ವಸ್ಥ
Team Udayavani, Jul 21, 2019, 3:00 AM IST
ಶಿವಮೊಗ್ಗ: ವಿಷಪೂರಿತ ಅಣಬೆ ಸೇವಿಸಿ 15 ಮಂದಿ ಅಸ್ವಸ್ಥರಾದ ಘಟನೆ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ವ್ಯಾಪ್ತಿಯ ಸಂತೆಹಕ್ಲು ಎಂಬಲ್ಲಿ ನಡೆದಿದೆ. ಗ್ರಾಮದ ಹರಿಯಪ್ಪ ಎಂಬುವರು ಈಚೆಗೆ ಮೃತಪಟ್ಟಿದ್ದು, ಅವರ ಅಂತ್ಯಸಂಸ್ಕಾರಕ್ಕೆ ಬೆಂಗಳೂರಿನಿಂದ ಬಂದಿದ್ದ ಸಂಬಂಧಿ ಕರು ಗ್ರಾಮದಲ್ಲೇ ಉಳಿದಿದ್ದರು.
ಶುಕ್ರವಾರ ರಾತ್ರಿ 5 ಅಣಬೆಯೊಂದಿಗೆ 2 ವಿಷಯುಕ್ತ ಅಣಬೆಯನ್ನೂ ಬಳಸಿ ಸಾಂಬಾರ್ ತಯಾರಿಸಿ ಊಟ ಮಾಡಿದ್ದಾರೆ. ಆದರೆ ರಾತ್ರಿ 11ರ ಸುಮಾರಿಗೆ ಎಲ್ಲರೂ ವಾಂತಿ ಮಾಡಲಾರಂಭಿಸಿದ್ದಾರೆ. ತಕ್ಷಣ ಜೆಸಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗಿತ್ತು.
ಸೂಕ್ತ ಚಿಕಿತ್ಸೆಯಿಂದ ಎಲ್ಲರೂ ಚೇತರಿಸಿಕೊಂಡಿದ್ದು ಶನಿವಾರ ಬೆಳಗ್ಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಈ ಘಟನೆ ನಡೆದ ಹಿನ್ನೆಲೆಯಲ್ಲಿ ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದ ತಂಡ ಸಂತೆಹಕ್ಲು ಗ್ರಾಮದ 26 ಮನೆಗಳಿಗೆ ತೆರಳಿ ವಿಷಕಾರಿ ಅಣಬೆ ಕುರಿತಂತೆ ಮಾಹಿತಿ ನೀಡಿ ಜಾಗೃತಿ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್