ಪರಿಷತ್ ಪೀಠಕ್ಕಾಗಿ ತಳ್ಳಾಟ, ಗದ್ಗದಿತರಾದ ಹೊರಟ್ಟಿ:’ಚಿಂತಕರ ಚಾವಡಿ’ಯಲ್ಲಿ ನಡೆದಿದ್ದಿಷ್ಟು


Team Udayavani, Dec 15, 2020, 1:05 PM IST

ಪರಿಷತ್ ಪೀಠಕ್ಕಾಗಿ ತಳ್ಳಾಟ, ಗದ್ಗದಿತರಾದ ಹೊರಟ್ಟಿ:’ಚಿಂತಕರ ಚಾವಡಿ’ಯಲ್ಲಿ ನಡೆದಿದ್ದಿಷ್ಟು

ಬೆಂಗಳೂರು: ವಿಧಾನ ಮಂಡಲ ಅಧಿವೇಶನಗಳು ಆಡಳಿತ ಪಕ್ಷ – ವಿರೋಧ ಪಕ್ಷಗಳ ನಡುವಿನ ಮಾತಿನ ಗಲಾಟೆಗೆ ಸಾಕ್ಷಿಯಾಗುವುದು ಸಾಮಾನ್ಯ. ಪರಸ್ಪರ ಆರೋಪ- ಪ್ರತ್ಯಾರೋಪಗಳು ನಡೆಯುತ್ತದೆ. ಆದರೆ ಇಂದು ನಡೆದ ಕಲಾಪದಲ್ಲಿ ಇದಕ್ಕಿಂತ ಭಿನ್ನವಾದ ಪ್ರಸಂಗ ನಡೆಯಿತು.

ಸಭಾಪತಿ ಪೀಠಕ್ಕೆ ಬರುವ ಮೊದಲೇ ಉಪಸಭಾಪತಿ ಧರ್ಮೇಗೌಡ ಅವರು ಪೀಠದಲ್ಲಿ ಬಂದು ಕುಳಿತರು. ಅದನ್ನು ವಿರೋಧಿಸಿದ ಕಾಂಗ್ರೆಸ್ ಸದಸ್ಯರು ಅವರನ್ನು ಪೀಠದಿಂದ ಎಳೆದರು. ಕಿತ್ತಾಟ, ನೂಕಾಟ, ಎಳೆದಾಟಗಳಿಗೆ ಪರಿಷತ್ ಇಂದು ಸಾಕ್ಷಿಯಾಯಿತು.

ಪರಿಷತ್ ಸಂಪ್ರದಾಯದಂತೆ ಬೆಲ್ ಆದ ನಂತರ ಮಾರ್ಷಲ್ ಗಳ ಜೊತೆಗೆ ಸಭಾಪತಿಗಳು ಪೀಠಕ್ಕೆ ಬರಬೇಕು. ಆದರೆ ಇಂದು ಪರಿಷತ್ ಬೆಲ್ ನಿಲ್ಲುವ ಮೊದಲೇ ಉಪಸಭಾಪತಿ ಧರ್ಮೇಗೌಡ ಪೀಠದಲ್ಲಿ ಬಂದು ಕುಳಿತರು. ಇದರ ಮಧ್ಯೆ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿಯವರು ಸದನಕ್ಕೆ ಬಾರದಂತೆ ಬಾಗಿಲನ್ನು ಲಾಕ್ ಮಾಡಲಾಗಿತ್ತು.

ಇದನ್ನೂ ಓದಿ:ಮೇಲ್ಮನೆಯಲ್ಲಿ ಹೊಯ್ ಕೈ, ಎಳೆದಾಟ.. ಪರಿಷತ್ ಪೀಠದ ಮೇಲೆ ಜಂಗೀಕುಸ್ತಿ: ಕಲಾಪ ಮುಂದೂಡಿಕೆ

ಪೀಠದಲ್ಲಿ ಉಪಸಭಾಪತಿ ಬಂದು ಕುಳಿತ ವಿಚಾರವನ್ನು ಆಕ್ಷೇಪಿಸಿದ ಕಾಂಗ್ರೆಸ್ ಮುಖ್ಯ ಸಚೇತಕ ಸೇರಿದಂತೆ ಕಾಂಗ್ರೆಸ್ ಸದಸ್ಯರು ಉಪಸಭಾಪತಿಗಳನ್ನು ಎಳೆದಾಡಿದದರು. ಇತ್ತ ಸಭಾಪತಿ ಬರದಂತೆ ಹಾಕಿದ್ದ ಬಾಗಿಲನ್ನು ಒದ್ದು ತೆಗೆಯಲು ಕಾಂಗ್ರೆಸ್ ನ ನಜೀರ್ ಅಹ್ಮದ್ ಮತ್ತು ಬಿ.ಕೆ ಹರಿಪ್ರಸಾದ್ ಮುಂತಾದವರು ಮುಂದಾದರು.

ಪೀಠದಿಂದ ಉಪಸಭಾಪತಿ ಧರ್ಮೇಗೌಡರನ್ನು ಕಾಂಗ್ರೆಸ್ ಸದಸ್ಯರು ಪೀಠದಿಂದ ಇಳಿಸಿ, ಚಂದ್ರಶೇಖರ್ ಪಾಟೀಲ್ ಅವರನ್ನು ಕೂರಿಸಿ, ಪ್ರತಿಪಕ್ಷದ ಮುಖ್ಯ ಸಚೇತಕ ನಾರಾಯಣಸ್ವಾಮಿ, ಸದಸ್ಯ ಎಸ್.ರವಿ ಪೀಠದ ಎರಡು ಭಾಗದಲ್ಲಿ ನಿಂತು ಯಾರು ಪ್ರವೇಶಿಸದಂತೆ ತಡೆದರು.

ಪರಿಷತ್ ಪೀಠಕ್ಕಾಗಿ ತಳ್ಳಾಟ, ಗದ್ಗದಿತರಾದ ಹೊರಟ್ಟಿ:'ಚಿಂತಕರ ಚಾವಡಿ'ಯಲ್ಲಿ ನಡೆದಿದ್ದಿಷ್ಟು

ವೈ.ಎ ನಾರಾಯಣ ಸ್ವಾಮಿ, ಆಯನೂರು ಮಂಜುನಾಥ್, ಮಹಾಂತೇಶ ಕವಟಗಿ ಮಟ, ಅರುಣ್ ಶಹಾಪೂರ ಸೇರಿದಂತೆ ಸಚಿವರಾದ ಮಾಧುಸ್ವಾಮಿ ಸವದಿ  ಹಾಗೂ ವಿರೋಧಪಕ್ಷದ ಸಚೇತಕ ಎಂ.ನಾರಾಯಣ ಸ್ವಾಮಿ ಸೇರಿದಂತೆ ಸದಸ್ಯರಿಂದ ಎಳೆದಾಟಕ್ಕೆ ಪರಿಷತ್ ಸಾಕ್ಷಿಯಾಯಿತು.

ಗಲಾಟೆ ತಡೆಯಲು ಬಂದ ಮಾರ್ಷಲ್ ಗಳನ್ನೂ ತಳ್ಳಲಾಯಿತು. ಸಭಾಪತಿ ಪೀಠದ ಮುಂಭಾಗದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಅಳವಡಿಸಿದ್ದ ಗಾಜಿನ ಕವಚನ್ನು ಎಳೆದು ಹಾಕಿದರು.

ಇದನ್ನೂ ಓದಿ: ಪರಿಷತ್ ನಲ್ಲಿ ಸದಸ್ಯರ ಹೊಯ್ ಕೈ: ಹಿರಿಯ ಸಚಿವರೊಂದಿಗೆ ಸಿಎಂ ಯಡಿಯೂರಪ್ಪ ಸಭೆ

ನಂತರ ಮಾರ್ಷಗಳ ಭದ್ರತೆಯೊಂದಿಗೆ ಆಗಮಿಸಿದ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಸಭೆಯನ್ನು ಅನಿರ್ಧಿಷ್ಠಾವಧಿಗೆ ಮುಂದೂಡಿದರು. ಆದರೆ ಸಭೆ ಮುಂದೂಡಿದರೂ ಸದಸ್ಯರ ವಾಗ್ವಾದ ಮಾತ್ರ ಮುಂದುವರಿಯಿತು.

ಕುರ್ಚಿಗಾಗಿ ಪರಸ್ಪರ ಸದಸ್ಯರ ವಾಗ್ವಾದ, ಗಲಾಟೆಗಳನ್ನು ಕುಳಿತಲ್ಲೇ ವೀಕ್ಷಿಸಿದ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಗದ್ಗದಿತರಾದರು.

ಒಟ್ಟಾರೆ ಚಿಂತರ ಚಾವಡಿ ಎಂದೇ ಹೆಸರಾದ ವಿಧಾನ ಪರಿಷತ್ ನಲ್ಲಿ ಚಿಂತನೆಗಿಂತ ಶಕ್ತಿ ಪ್ರದರ್ಶನವೇ ನಡೆದಿದ್ದು ಮಾತ್ರ ವಿಪರ್ಯಾಸ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.