ಶಾಸಕರ “ಕಬಡ್ಡಿ ಆಟ’ದಲ್ಲಿ ಕಾಲೆಳೆದಾಟ

ಶಾಸಕರು, ಕಬಡ್ಡಿ ಆಟ, ಕಾಲೆಳೆದಾಟ, Fight, MLAs, Kabaddi Game

Team Udayavani, Oct 13, 2019, 3:00 AM IST

Udayavani Kannada Newspaper

ವಿಧಾನ ಪರಿಷತ್‌: ಶಾಸಕರ ಕಬಡ್ಡಿ ಆಟ ಮತ್ತು ಅವರ ರಾಜಕಾರಣ ಒಂದಕ್ಕೊಂದು ತಳುಕುಹಾಕಿಕೊಂಡು ಸ್ವಾರಸ್ಯಕರ ಚರ್ಚೆಗೆ ಶನಿವಾರದ ಸದನ ವೇದಿಕೆಯಾಯಿತು. ಈ “ಕಬಡ್ಡಿ ಆಟ’ದಲ್ಲಿ ಪ್ರತಿಪಕ್ಷದಿಂದ 17 ಜನರನ್ನು ಆಡಳಿತ ಪಕ್ಷ ಎಳೆದುಕೊಂಡರೆ, ಮತ್ತೂಬ್ಬರನ್ನು ಕಳಿಸಿಕೊಡಲು ಸ್ವತಃ ಪ್ರತಿಪಕ್ಷ ತಯಾರಾಯಿತು. ಆದರೆ, ಅವರಿಗೆ ಮಂತ್ರಿಗಿರಿ ನೀಡುವ ಷರತ್ತು ವಿಧಿಸಿತು. ಅವಕಾಶ ಸಿಕ್ಕರೆ, ಕಬಡ್ಡಿ ಆಡದೆ, ಮತ್ತೂಬ್ಬರು ನಮ್ಮ ಕಡೆಗೆ ಬರಲು ತುದಿಗಾಲಲ್ಲಿ ನಿಂತಿದ್ದಾರೆಂಬ ಸುಳಿವು ನೀಡಿ ಆಡಳಿತ ಪಕ್ಷ ಎದುರಾಳಿಗೆ ಚೋಕ್‌ ಕೊಟ್ಟಿತು!

ಈ ಹಿಂದೆ ಶಾಸಕರ ದಿನ ಆಚರಿಸಲಾಗುತ್ತಿತ್ತು. ಅದು ಎಂ.ಪಿ. ಪ್ರಕಾಶ್‌, ಎಂ.ವೀರಪ್ಪ ಮೊಯ್ಲಿ ಸೇರಿ ಅನೇಕ ಶಾಸಕರಲ್ಲಿನ ಸುಪ್ತ ಪ್ರತಿಭೆ ಅನಾವರಣಕ್ಕೆ ವೇದಿಕೆಯೂ ಆಗಿತ್ತು. ನಾವು ಮತ್ತು ನೀವು ಕೂಡ ಕಬಡ್ಡಿ ಆಡಿದ್ದು, ನಿಮಗೆ ನೆನಪಿರಬಹುದು ಎಂದು ಸಭಾಪತಿ ಪ್ರತಾಪ್‌ಚಂದ್ರ ಎದುರು ಜೆಡಿಎಸ್‌ ನಾಯಕ ಬಸವರಾಜ ಹೊರಟ್ಟಿ ಮೆಲುಕುಹಾಕಿ “ಕಬಡ್ಡಿ ಆಟ’ಕ್ಕೆ ಚಾಲನೆ ನೀಡಿದರು. ಆಗ ಕಾಂಗ್ರೆಸ್‌ ಸದಸ್ಯ ಸಿ.ಎಂ.ಇಬ್ರಾಹಿಂ, ಈಗಾಗಲೇ ನೀವು (ಆಡಳಿತ ಪಕ್ಷದವರು) ಕಬಡ್ಡಿ ಆಡಿ, 17 ಜನರನ್ನು ಎಳೆದುಕೊಂಡಿದ್ದೀರಿ.

ಮತ್ತೆ ಕಬಡ್ಡಿ ಆಡಿ ಇನ್ನಷ್ಟು ಜನರನ್ನು ಎಳೆಯುವುದು ಬೇಡ ಎಂದು ಚಟಾಕಿ ಹಾರಿಸಿದರು. ತಕ್ಷಣ ಎದ್ದುನಿಂತ ಸಚಿವ ಅಶೋಕ್‌, ಹೊರಟ್ಟಿಯವರು ಆಗ ಕಬಡ್ಡಿ ಆಡಲಿಲ್ಲ, ಈಗ ಆಡಲು ಶುರುಮಾಡಿದ್ದಾರೆ ಎಂದು ಕಾಲೆಳೆದರು. ಕಾಂಗ್ರೆಸ್‌ ಸದಸ್ಯ ಐವಾನ್‌ ಡಿಸೋಜಾ ಮಧ್ಯ ಪ್ರವೇಶಿಸಿ, ಎಷ್ಟಾದರೂ ಕಬಡ್ಡಿ ರಾಜಕಾರಣಿಗಳಿಗೆ ಪ್ರಿಯವಾದ ಆಟವಲ್ಲವೇ? ಎಂದು ನಕ್ಕರು. ಸಚಿವ ಕೆ.ಎಸ್‌. ಈಶ್ವರಪ್ಪ, ಅಂ.ರಾ. ಬಾಸ್ಕೆಟ್‌ ಬಾಲ್‌ ಸಂಸ್ಥೆ (ಫಿಬಾ)ಯ ಸದಸ್ಯರಾಗಿ ಆಯ್ಕೆಯಾದ ಕೆ. ಗೋವಿಂದರಾಜು ಅವರಿಗೆ ಅಭಿನಂದನೆ ಸಲ್ಲಿಸಿ, ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ಕ್ರೀಡಾ ಖಾತೆ ನೀಡುವಂತೆ ಒತ್ತಾಯಿಸಿದ್ದನ್ನು ನೆನಪಿಸಿದರು.

ಇದಕ್ಕೆ ಪ್ರತಿಪಕ್ಷದ ಸದಸ್ಯರು, ಈಗಲೂ ನೀವು ಕರೆದುಕೊಂಡು ಮಂತ್ರಿಗಿರಿ ಕೊಡಬಹುದು’ ಎಂದು ಕಾಲೆಳೆದರು. “ಧಾರಾಳವಾಗಿ ಬರಲಿ’ ಎಂದು ಆಹ್ವಾನ ನೀಡಿದ ಈಶ್ವರಪ್ಪ, ಅವಕಾಶ ಸಿಕ್ಕರೆ ಕಬಡ್ಡಿ ಆಡದೆ ಸಿ.ಎಂ. ಇಬ್ರಾಹಿಂ ಬರಲು ತಯಾರಾಗಿದ್ದಾರೆಂದು ಹೇಳಿದರು. ಇದಕ್ಕೂ ಮುನ್ನ ಸದನದಲ್ಲಿ ಫಿಬಾಗೆ ಆಯ್ಕೆಯಾದ ಕೆ.ಗೋವಿಂದರಾಜು ಅವರಿಗೆ ಸದಸ್ಯರೆಲ್ಲರೂ ಅಭಿನಂದನೆ ಸಲ್ಲಿಸಿದರು. ಸಭಾಪತಿಗಳು ಅಭಿನಂದನೆ ಸೂಚನೆ ಮಂಡಿಸಿದರು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.