ಲಾಲ್ಬಹಾದ್ದೂರ್ ಶಾಸ್ತ್ರೀ ಜಲಾಶಯ ಭರ್ತಿ
Team Udayavani, Aug 2, 2017, 8:20 AM IST
ಸಮರ್ಪಕವಾಗಿ ಮಳೆಯಾಗದಿದ್ದರೂ ಕೃಷ್ಣೆ ಉಗಮಸ್ಥಾನ ಮಹಾಬಳೇಶ್ವರ ಹಾಗೂ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆ ಸುರಿದ ಪರಿಣಾಮ ಇಲ್ಲಿನ ಲಾಲ್ಬಹಾದ್ದೂರ್ ಶಾಸ್ತ್ರೀ ಜಲಾಶಯ ಮಂಗಳವಾರ ಸಂಪೂರ್ಣ
ಭರ್ತಿಯಾಗಿದೆ. 519.60 ಮೀ. ಎತ್ತರ, ಗರಿಷ್ಠ 123.081 ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಮಂಗಳವಾರ 35,672 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಗರಿಷ್ಠ ಮಟ್ಟದಲ್ಲಿ ನೀರು ಸಂಗ್ರಹವಾಗಿದ್ದು, ಜಲಚರಗಳಿಗಾಗಿ 17.650 ಟಿಎಂಸಿ ಮೀಸಲಿರಿಸಿ, ಉಳಿದ 105.431 ಟಿಎಂಸಿ ಅಡಿ ನೀರನ್ನು ಬಳಸಿಕೊಳ್ಳಬಹುದಾಗಿದೆ. ಕಳೆದ ವರ್ಷವೂ ಇದೇ ದಿನ ಜಲಾಶಯ ಭರ್ತಿಯಾಗಿತ್ತು.
ಮುಂದುವರಿದ ವರುಣನ ಅವಕೃಪೆ
ಬೆಂಗಳೂರು: ರಾಜ್ಯಾದ್ಯಂತ ವರುಣನ ಅವಕೃಪೆ ಮುಂದುವರಿದಿದ್ದು, ಇದೇ ವಾತಾವರಣ ಮುಂದುವರಿದರೆ ಆಗಸ್ಟ್ನಲ್ಲಿ ಕೂಡ ವಾಡಿಕೆ ಮಳೆಯಾಗುವುದು ಅನುಮಾನ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್ ಮತ್ತು ಜುಲೈನಲ್ಲಿ ರಾಜ್ಯದಲ್ಲಿ ಉತ್ತಮ ಮುಂಗಾರು ಮಳೆ ಆಗಬೇಕಿತ್ತು. ಆದರೆ, ನಿರೀಕ್ಷೆ ಹುಸಿಯಾಯಿತು. ಆಗಸ್ಟ್ ಮೊದಲ ವಾರದಲ್ಲೂ ಇದೇ ವಾತಾವರಣ ಮುಂದುವರೆದಿದೆ. ಈ ಸ್ಥಿತಿ ಮುಂದುವರಿದರೆ, ಆಗಸ್ಟ್ನಲ್ಲಿ ಕೂಡ ಮಳೆ ಕೊರತೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿ ನಿರ್ದೇಶಕ ಎಸ್. ಎಂ. ಮೆಟ್ರಿ ತಿಳಿಸಿದ್ದಾರೆ. ಮುಂಗಾರು ಮಾರುತಗಳು ಸದ್ಯಕ್ಕೆ ಕ್ಷೀಣಗೊಂಡಿದ್ದು, ಆಗಸ್ಟ್ 5 ಮತ್ತು 6ರಂದು ಕರಾವಳಿ ಭಾಗದಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನಲ್ಲಿ ಚದುರಿದಂತೆ ಅಥವಾ ಹಗುರವಾದ ಮಳೆ ನಿರೀಕ್ಷಿಸಲಾಗಿದೆ.
ಸಾಮಾನ್ಯವಾಗಿ ಅವಧಿಯಲ್ಲಿ ಅರಬ್ಬಿ ಸಮುದ್ರದ ಆಚೆಗೆ ವಾಯುಭಾರ ಕುಸಿತ ಉಂಟಾಗಬೇಕಿತ್ತು. ಆದರೆ, ಇದು ಆಗಲಿಲ್ಲ. ಹಾಗಾಗಿ ಮಳೆ ಕೊರತೆ ಆಗಿದೆ. ಮುಂದಿನ ದಿನಗಳಲ್ಲಿ ವಾಯುಭಾರ ಕುಸಿತದಂತಹ ಬೆಳವಣಿಗೆಗಳಾದರೂ ಭಾರೀ ಮಳೆಯ ಸಾಧ್ಯತೆಗಳು ಕಡಿಮೆ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.
ಮಂಗಳವಾರ ಬೆಳಗ್ಗೆ 8.30ಕ್ಕೆ ದಕ್ಷಿಣ ಕನ್ನಡ, ಕೊಡಗಿನ ಭಾಗಮಂಡಲ, ಚಿಕ್ಕಮಗಳೂರಿನಲ್ಲಿ ಗರಿಷ್ಠ 5 ಸೆಂ.ಮೀ.ನಿಂದ ಕನಿಷ್ಠ 1 ಸೆಂ.ಮೀ. ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ