Voters ಪದವೀಧರ, ಶಿಕ್ಷಕರ ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿ ಪ್ರಕಟ
Team Udayavani, Dec 31, 2023, 5:47 AM IST
ಬೆಂಗಳೂರು: ರಾಜ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿ ಶನಿವಾರ ಪ್ರಕಟಗೊಂಡಿದ್ದು, ಒಟ್ಟು ಏಳು ಕ್ಷೇತ್ರಗಳಲ್ಲಿ 4.02 ಲಕ್ಷ ಮತದಾರರಿದ್ದಾರೆ.
ರಾಜ್ಯದ ಈಶಾನ್ಯ, ನೈಋತ್ಯ ಮತ್ತು ಬೆಂಗಳೂರು ಪದವೀಧರರ ಕ್ಷೇತ್ರ ಹಾಗೂ ಆಗ್ನೇಯ, ನೈಋತ್ಯ, ದಕ್ಷಿಣ ಮತ್ತು ಬೆಂಗಳೂರು ಶಿಕ್ಷಣ ಕ್ಷೇತ್ರಗಳಿದ್ದು, ನವೆಂಬರ್ 23ರಂದು ಕರಡು ಮತದಾರರ ಪಟ್ಟಿ ಪ್ರಕಟಗೊಂಡಿತ್ತು. ಆಕ್ಷೇಪಣೆಗಳಿಗೆ ಡಿ. 9 ಕೊನೆ ದಿನವಾಗಿತ್ತು. ಎಲ್ಲವನ್ನೂ ಕ್ರೋಢೀಕರಿಸಿ ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ.
ಒಟ್ಟಾರೆ ಪದವೀಧರರ ಕ್ಷೇತ್ರಗಳಲ್ಲಿ 1.81 ಲಕ್ಷ ಪುರುಷರು, 1.43 ಲಕ್ಷ ಮಹಿಳೆಯರು, 36 ಇತರ ಸಹಿತ 3,24,502 ಮತದಾರರಿದ್ದಾರೆ. ಇನ್ನು ನಾಲ್ಕು ಶಿಕ್ಷಕರ ಕ್ಷೇತ್ರಗಳಲ್ಲಿ 40,094 ಸಾವಿರ ಪುರುಷ, 37,839 ಮಹಿಳೆಯರು, 14 ಇತರ ಸಹಿತ 77,940 ಮತದಾರರಿದ್ದಾರೆ. ಮತದಾರರ ಪಟ್ಟಿಗೆ ಸಂಬಂಧಿಸಿದ ಮಾಹಿತಿಗೆ ಮತದಾರರ ನೋಂದಣಿ ಅಧಿಕಾರಿಗಳು/ ಪ್ರಾದೇಶಿಕ ಆಯುಕ್ತರು, ಸಹಾಯಕ ಮತದಾರರ ನೋಂದಣಿ ಅಧಿಕಾರಿಗಳು/ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ ಅಥವಾ ವೆಬ್ಸೈಟ್ ceo.karnataka.gov.in/341/teachers-and-graduates-constituencies-2024/kn ಸಂಪರ್ಕಿಸಬಹುದು ಎಂದು ಮುಖ್ಯ ಚುನಾವಣಾಧಿಕಾರಿ ಪ್ರಕಟಣೆ ತಿಳಿಸಿದೆ.
ಅರ್ಹ ಪದವೀಧರರು ಮತ್ತು ಶಿಕ್ಷಕರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಕ್ಷೇತ್ರಗಳ ಚುನಾವಣೆಗೆ ನಾಮನಿರ್ದೇಶನದ ಕೊನೆಯ ದಿನಾಂಕದ ಹತ್ತು ದಿನಗಳು ಮೊದಲು ನಿರಂತರ ಪರಿಷ್ಕರಣೆ ಅವಧಿಯಲ್ಲಿ ಅರ್ಜಿ ಸಲ್ಲಿಸಬಹುದು ಎಂದೂ ಪ್ರಕಟನೆ ತಿಳಿಸಿದೆ.
ಏಳೂ ಕ್ಷೇತ್ರಗಳ ಪೈಕಿ ಬೆಂಗಳೂರು ಶಿಕ್ಷಣ ಕ್ಷೇತ್ರ ಹೊರತುಪಡಿಸಿ, ಉಳಿದೆಲ್ಲ ಕ್ಷೇತ್ರಗಳಲ್ಲಿ ಹಾಲಿ ಇರುವ ಸದಸ್ಯರ ಅವಧಿ 2024ರ ಜೂನ್ಗೆ ಮುಕ್ತಾಯವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ