ಕೊನೆಗೂ ನಿಗಮ-ಮಂಡಳಿಗಳ ನೇಮಕಕ್ಕೆ ಮುಂದಾದ ಜೆಡಿಎಸ್
Team Udayavani, Feb 16, 2019, 12:30 AM IST
ಬೆಂಗಳೂರು: ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಸರ್ಕಾರಕ್ಕಿದ್ದ ಕಂಟಕದ ಆತಂಕ ಮರೆಯಾಗುತ್ತಿದ್ದಂತೆ ನಿರಾಳವಾಗಿರುವ ಸಮ್ಮಿಶ್ರ ಸರ್ಕಾರದ ಮಿತ್ರ ಪಕ್ಷ ಜೆಡಿಎಸ್, ತನ್ನ ಪಾಲಿನ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಗಳ ಭರ್ತಿಗೆ ಮುಂದಾಗಿದೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಈ ಸಂಬಂಧ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಜತೆ ಸಮಾಲೋಚನೆ ನಡೆಸಿದ್ದು, ಆದಷ್ಟು ಶೀಘ್ರ ನೇಮಕ ಮಾಡಲು ನಿರ್ಧರಿಸಲಾಗಿದೆ. ಮೊದಲ ಹಂತದಲ್ಲಿ ಜೆಡಿಎಸ್ಗೆ 12 ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕಾತಿ ಮಾಡಲು ಅವಕಾಶವಿದ್ದು, ಆ ಪೈಕಿ 7 ಶಾಸಕರಿಗೆ, ಮೂರು ಮಾಜಿ ಶಾಸಕರಿಗೆ, ಎರಡು ಹಿರಿಯ ಕಾರ್ಯಕರ್ತರಿಗೆ ನೀಡಲಾಗುವುದು ಎಂದು ಹೇಳಲಾಗಿದೆ. ಶಾಸಕರಾದ ಮಂಜುನಾಥ್, ಮಂಜು, ಶಿವಲಿಂಗೇಗೌಡ, ನಾರಾಯಣಗೌಡ, ನಾರಾಯಣಸ್ವಾಮಿ, ಸುರೇಶ್ಗೌಡ, ಮಹದೇವ್, ಅಶ್ವಿನ್ಕುಮಾರ್, ಗೌರಿಶಂಕರ್, ಪರಿಷತ್ ಸದಸ್ಯರಾದ ಬೆಮೆಲ್ ಕಾಂತರಾಜ್, ತೂಪಲ್ಲಿ ಚೌಡರೆಡ್ಡಿ, ಅಪ್ಪಾಜಿಗೌಡ ನಿಗಮ-ಮಂಡಳಿ ಅಧ್ಯಕ್ಷಗಿರಿಯ ಆಕಾಂಕ್ಷಿಗಳಾಗಿದ್ದಾರೆ. ಇದರ ಜತೆಗೆ, ಮಾಜಿ ಶಾಸಕರಾದ ವೆಂಕಟ ಶಿವಾರೆಡ್ಡಿ, ಸುರೇಶ್ಬಾಬು, ಕೋನರೆಡ್ಡಿ, ಮಂಜುನಾಥಗೌಡ, ವಿಧಾನಪರಿಷತ್ನ ಮಾಜಿ ಸದಸ್ಯ ರಮೇಶ್ಬಾಬು ಸಹ ಆಕಾಂಕ್ಷಿಗಳಾಗಿದ್ದಾರೆ.
ಜೆಡಿಎಸ್ ಪಾಲಿನ ಸಂಸದೀಯ ಕಾರ್ಯದರ್ಶಿ ಹುದ್ದೆ ತಕ್ಷಣಕ್ಕೆ ಭರ್ತಿ ಮಾಡುವುದು ಅನುಮಾನ ಎಂದು ತಿಳಿದು ಬಂದಿದೆ. ಆದರೆ, ಸಚಿವ ಸ್ಥಾನ ವಂಚಿತ ಶಾಸಕರಿಗೆ ಅಧಿಕಾರ ನೀಡುವ ನಿಟ್ಟಿನಲ್ಲಿ ಅದನ್ನೂ ಭರ್ತಿ ಮಾಡಿ ಬಿಡಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷರು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಲೋಕಸಭೆ ಚುನಾವಣೆ ನಂತರ ಸಂಪುಟ ಪುನಾರಚನೆ ಸಾಧ್ಯತೆ ಇರುವುದರಿಂದ ಮೊದಲ ಹಂತದಲ್ಲಿ ಸಚಿವ ಸ್ಥಾನ ಸಿಗದ ಹಿರಿಯ ಶಾಸಕರಿಗೆ ಎರಡನೇ ಹಂತದಲ್ಲಿ ನೀಡುವ ಭರವಸೆಯೊಂದಿಗೆ ಕಿರಿಯ ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.
ತಿಪ್ಪೇಸ್ವಾಮಿ ಸಿಎಂ ರಾಜಕೀಯ ಕಾರ್ಯದರ್ಶಿ?
ಇತ್ತೀಚೆಗೆ ವಿಧಾನ ಪರಿಷತ್ ಸದಸ್ಯರಾಗಿರುವ, ದೇವೇಗೌಡರ ಕುಟುಂಬದ ಆಪ್ತರಾಗಿರುವ ತಿಪ್ಪೇಸ್ವಾಮಿ ಅವರನ್ನು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದ ಮಧು ಬಂಗಾರಪ್ಪ, ಸುರೇಶ್ ಬಾಬು, ಕೋನರೆಡ್ಡಿ ಪೈಕಿ ಒಬ್ಬರು ರಾಜಕೀಯ ಕಾರ್ಯದರ್ಶಿಯಾಗಲಿದ್ದಾರೆ ಎಂದು ಹೇಳಲಾಗಿತ್ತು. ಮಧು ಬಂಗಾರಪ್ಪ ಅವರ ಮೇಲೆ ಕುಮಾರಸ್ವಾಮಿಯವರಿಗೆ ಒಲವಿತ್ತು. ಆದರೆ, ಮಧು ಬಂಗಾರಪ್ಪ ಲೋಕಸಭೆ ಚುನಾವಣೆಗೆಸ್ಪರ್ಧಿಸಲು ಸಿದಟಛಿತೆ ನಡೆಸುತ್ತಿರುವುದರಿಂದ ತಿಪ್ಪೇಸ್ವಾಮಿ ಅವರನ್ನು ರಾಜಕೀಯ ಕಾರ್ಯದರ್ಶಿಯಾಗಿ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.
ಚುನಾವಣೆ ನಂತರ ಎರಡನೇ ಹಂತ
ರಾಜ್ಯದಲ್ಲಿ ಒಟ್ಟು 78 ನಿಗಮ-ಮಂಡಳಿಗಳಿದ್ದು, ಆ ಪೈಕಿ ಕಾಂಗ್ರೆಸ್, ಈಗಾಗಲೇ ಮೊದಲ ಹಂತದಲ್ಲಿ 20 ಸ್ಥಾನಗಳನ್ನು ಭರ್ತಿ ಮಾಡಿದೆ. ಜೆಡಿಎಸ್ 12 ಸ್ಥಾನಗಳನ್ನು ಭರ್ತಿ ಮಾಡಿದರೆ ಇನ್ನೂ 46 ನಿಗಮ -ಮಂಡಳಿಗಳಿಗೆ ನೇಮಕ ಮಾಡಬಹುದಾಗಿದೆ. ಲೋಕಸಭೆ ಚುನಾವಣೆ ನಂತರ ಎರಡನೇ
ಹಂತದಲ್ಲಿ ಉಳಿದ ನಿಗಮ-ಮಂಡಳಿಗಳ ಭರ್ತಿ ಮಾಡಲಾಗುವುದು ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ