ಪ್ರಖ್ಯಾತ ಉದ್ಯಾನಗಳ ನಿರ್ವಹಣೆಗೆ ಆರ್ಥಿಕ ಸಂಕಷ್ಟ


Team Udayavani, Aug 29, 2017, 10:50 AM IST

29-STATE-7.jpg

ಬೆಂಗಳೂರು: ವೈವಿಧ್ಯತಾ ಸಸ್ಯ ಪ್ರಭೇದಗಳನ್ನು ತನ್ನೊಡಲಲ್ಲಿ ಇರಿಸಿಕೊಂಡು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರವಾಸಿಗರನ್ನು
ಸೆಳೆಯುವ ರಾಜ್ಯದ ಪ್ರಖ್ಯಾತ ಉದ್ಯಾನಗಳಾದ ಲಾಲ್‌ಬಾಗ್‌, ಕಬ್ಬನ್‌ ಪಾರ್ಕ್‌, ಕೆಆರ್‌ಎಸ್‌ ಸೇರಿದಂತೆ ಪಾರ್ಕ್‌ಗಳ ನಿರ್ವಹಣೆಗೆ ಬಜೆಟ್‌ ನಲ್ಲಿ ನೀಡಿರುವ ಅನುದಾನ ಅತ್ಯಲ್ಪವಾಗಿದ್ದು, ಹೆಚ್ಚುವರಿಯಾಗಿ 30 ಕೋಟಿ ರೂ. ಮಂಜೂರು ಮಾಡುವಂತೆ ತೋಟಗಾರಿಕೆ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಕಳೆದ ಹಣಕಾಸು ವರ್ಷದಲ್ಲಿ ರಾಜ್ಯದ ಪ್ರತಿಷ್ಠಿತ ಉದ್ಯಾನಗಳ ನಿರ್ವಹಣೆಗೆ ರಾಜ್ಯ ಸರ್ಕಾರ ಸುಮಾರು 34 ಕೋಟಿ ರೂ. ಅನುದಾನ ನೀಡಿತ್ತು. ಪ್ರಸಕ್ತ ವರ್ಷದಲ್ಲಿ ಉದ್ಯಾನ, ಗಿರಿಧಾಮಗಳ ನಿರ್ವಹಣೆ ವೆಚ್ಚದಲ್ಲಿ ಏರಿಕೆಯಾಗಿದ್ದು, ಸುಮಾರು 50 ಕೋಟಿ ರೂ.ಗಳಿಗೂ ಅಧಿಕ ಅನುದಾನದ ಅವಶ್ಯಕತೆ ಇದೆ. ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿತ್ತು. ಆದರೆ, ತೋಟಗಾರಿಕೆ ಇಲಾಖೆಗೆ ಈ ಬಾರಿ ಆಯವ್ಯಯದಲ್ಲಿ ಸಿಕ್ಕಿದ 940 ಕೋಟಿ ರೂ. ಗಳಿಗೂ ಅಧಿಕ ಅನುದಾನದಲ್ಲಿ ಉದ್ಯಾನಗಳ ನಿರ್ವಹಣೆಗೆಂದು ಲಭ್ಯವಾಗಿದ್ದು ಕೇವಲ 10 ಕೋಟಿ ರೂ. ಮಾತ್ರ. ರಾಜ್ಯಾದ್ಯಂತ ಇರುವ 31 ಉದ್ಯಾನಗಳ ವಾರ್ಷಿಕ ನಿರ್ವಹಣೆಗೆ 10 ಕೋಟಿ ರೂ. ಯಾವುದಕ್ಕೂ ಸಾಲುವುದಿಲ್ಲ. ಜತೆಗೆ ಈಗಾಗಲೇ ನೀಡಿರುವ ಅನುದಾನವನ್ನು 24 ಜಿಲ್ಲೆಗಳಲ್ಲಿ ಇರುವ ಉದ್ಯಾನಗಳ ನಿರ್ವಹಣೆಗೆ ವಿತರಿಸಲಾಗಿದ್ದು, ಖರ್ಚಾಗಿ ಹೋಗಿದೆ. ಆರ್ಥಿಕ ವರ್ಷದ ಮುಕ್ತಾಯಕ್ಕೆ ಇನ್ನೂ 8 ತಿಂಗಳು ಬಾಕಿ ಇದ್ದು, ನಿರ್ವಹಣೆ ಕಷ್ಟಕರವಾಗಲಿದೆ. ಜತೆಗೆ ಈಗಾಗಲೇ ಪ್ರಗತಿಯಲ್ಲಿರುವ ಹಲವು ಉದ್ಯಾನಗಳ ಅಭಿವೃದ್ಧಿ ಕಾಮಗಾರಿಗಳು ಹಣದ ಕೊರತೆಯಿಂದ ಅರ್ಧಕ್ಕೆ ನಿಂತಿವೆ. ಆ ಕಾರಣದಿಂದ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವಂತೆ ತೋಟಗಾರಿಕೆ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. 

ಅನುದಾನ ಕೊರತೆ: ಬೆಂಗಳೂರಿನ ಲಾಲ್‌ಬಾಗ್‌, ಕಬ್ಬನ್‌ ಪಾರ್ಕ್‌, ಮಂಡ್ಯದ ಬೃಂದಾವನ (ಕೆಆರ್‌ಎಸ್‌), ಮೈಸೂರಿನ ಕರ್ಜನ್‌ ಉದ್ಯಾನವನ, ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗಿರಿಧಾಮ, ಮಡಿಕೇರಿಯ ರಾಜಾಸೀಟ್‌ ಪಾರ್ಕ್‌, ಊಟಿಯ ಫ‌ರ್ನ್ಹಿಲ್‌ ಗಿರಿಧಾಮ, ಕೊಪ್ಪಳದ ಪಂಪಾವನ,
ಚಿಕ್ಕಮಗಳೂರು ಜಿಲ್ಲೆಯ ಕೆಮ್ಮಣ್ಣುಗುಂಡಿ ಗಿರಿಧಾಮ, ಶಿರಸಿ, ಬೆಂಗಳೂರು ಗ್ರಾಮಾಂತರದ ಕನ್ನಮಂಗಲದ ಲಾಲ್‌ಬಾಗ್‌ ಸೇರಿದಂತೆ ಸುಮಾರು 31 ಉದ್ಯಾನಗಳ ಅಭಿವೃದ್ಧಿ ಮತ್ತು ನಿರ್ವಹಣೆಯನ್ನು ಕೈಗೊಳ್ಳಲಾಗುತ್ತಿದೆ. 

ಉದ್ಯಾನಗಳಿಗೆ ಹೊಸ ತಳಿಯ ಸಸ್ಯಗಳನ್ನು ತಂದು ಅಭಿವೃದ್ಧಿಪಡಿಸುವುದು, ಯಂತ್ರೋಪಕರಣಗಳ ಖರೀದಿ, ದುರಸ್ತಿ, ನಿರ್ವಹಣೆ, ಮೂಲಸೌಕರ್ಯ ಒದಗಿಸುವುದು, ಸಮರ್ಪಕ ವಿದ್ಯುತ್‌ ನಿರ್ವಹಣೆ, ನೀರು ಸರಬರಾಜು, ಭದ್ರತಾ ಸೇವೆ, ಸ್ವತ್ಛತಾ ಸೇವೆ ಮಾನವ ದಿನಗಳ ಸೇವೆ ನಿರ್ವಹಣಾ ವೆಚ್ಚ, ಗಿರಿಧಾಮಗಳ ಅತಿಥಿ ಗೃಹಗಳ ಸ್ವತ್ಛತೆ ಮತ್ತು ಊಟೋಪಚಾರ ವ್ಯವಸ್ಥೆ, ಹೊಸ ಭೂದೃಶ್ಯ ವಿನ್ಯಾಸ ಹೀಗೆ ವಿವಿಧ ಕಾಮಗಾರಿಗಳಿಗಾಗಿ ತೋಟಗಾರಿಕೆ ಇಲಾಖೆ ಹಂಚಿಕೆ ಮಾಡಿರುವ 10 ಕೋಟಿ ರೂ.ಗಳ ಅನುದಾನ ಯಾವುದಕ್ಕೂ ಸಾಲುತ್ತಿಲ್ಲ ಎಂದು ಇಲಾಖೆ ಮೂಲಗಳು ತಿಳಿಸಿವೆ.

ಪೂರ್ಣಗೊಳ್ಳದ ಕಾಮಗಾರಿ: 2015-16ನೇ ಸಾಲಿನ ಅಭಿವೃದ್ಧಿ ಕಾರ್ಯಗಳಲ್ಲಿ ಮೈಸೂರಿನಲ್ಲಿ ಗಾಜಿನ ಮನೆ ನಿರ್ಮಾಣ ಮತ್ತು ಸರ್ಕಾರಿ ಅತಿಥಿ ಗೃಹದ ಉದ್ಯಾನವನ ಅಭಿವೃದ್ಧಿ ಪೂರ್ಣಗೊಳ್ಳಬೇಕಿದೆ. ಊಟಿಯ ಫ‌ರ್ನ್ಹಿಲ್‌ ಗಾರ್ಡನ್‌. ಚಿಕ್ಕಮಗಳೂರಿನ ಕೆಮ್ಮಣ್ಣುಗುಂಡಿಯ ಶ್ರೀಕೃಷ್ಣ ರಾಜೇಂದ್ರ ಗಿರಿಧಾಮದ ರಾಜಭವನ ಅತಿಥಿ ಗೃಹ ಮತ್ತು ರಸ್ತೆಗಳು ಹಾಳಾಗಿದ್ದು, ಕಾಮಗಾರಿ ಮುಕ್ತಾಯವಾಗಬೇಕಿದೆ. ಜತೆಗೆ ಬೆಂಗಳೂರಿನ ಇಂದಿರಾಗಾಂಧಿ ಸಂಗೀತ ನೃತ್ಯ ಕಾರಂಜಿಯನ್ನು ಉನ್ನತೀಕರಿಸಿ ಅಭಿವೃದ್ಧಿಪಡಿಸುವ ಕಾರ್ಯ ನಡೆಯಬೇಕಿದ್ದು, ಅನುದಾನದ ಅವಶ್ಯಕತೆ ಇದೆ. ಈ ಎಲ್ಲಾ ಕಾರ್ಯಗಳು ಮುಂದುವರಿದು ಅಭಿವೃದ್ಧಿ ಕೆಲಸ ಪೂರ್ಣಗೊಳ್ಳಲು ಅನುದಾನದ ಅಗತ್ಯವಿದೆ.

ರಾಜ್ಯದ ಪ್ರಖ್ಯಾತ ಉದ್ಯಾನಗಳ ನಿರ್ವಹಣೆಗೆ ಅನುದಾನದ ಅವಶ್ಯಕತೆ ಇತ್ತು. ಈಗಾಗಲೇ ಇಲಾಖೆಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು,
ಪ್ರಕ್ರಿಯೆಯಲ್ಲಿದೆ. ಸರ್ಕಾರವೂ ಕೂಡ ಸಕಾರಾತ್ಮಕವಾಗಿ ಸ್ಪಂದಿಸುವ ನಿರೀಕ್ಷೆ ಇದೆ. 
ಎಸ್‌.ಎಸ್‌.ಮಲ್ಲಿಕಾರ್ಜುನ್‌, ತೋಟಗಾರಿಕಾ ಸಚಿವ

ಸಂಪತ್‌ ತರೀಕೆರೆ 

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.