Shame:ಬೆಳ್ಳಂಬೆಳಗ್ಗೆ ಯುವತಿಯ ತುಟಿ ಕಚ್ಚಿ ಮುತ್ತಿಟ್ಟು ಕಾಮುಕ ಪರಾರಿ
Team Udayavani, Jan 6, 2017, 4:54 PM IST
ಬೆಂಗಳೂರು : ಹೊಸವರ್ಷಾಚರಣೆ ವೇಳೆ ನಗರದಲ್ಲಿ ಯುವತಿಯರಿಗೆ ಕಾಮಾಂಧರು ನೀಡಿದ ಸಾಮೂಹಿಕ ಲೈಂಗಿಕ ಕಿರುಕುಳ ಪ್ರಕರಣ,ಕಮ್ಮನಹಳ್ಳಿಯಲ್ಲಿ ನಡೆದ ದೌರ್ಜನ್ಯದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಇಂದು ಶುಕ್ರವಾರ ಮತ್ತೆ ಕಾಮುಕರು ಅಟ್ಟಹಾಸ ಮೆರೆದಿದ್ದು, ಬೆಳ್ಳಂಬೆಳಗ್ಗೆ ನಗರದ ಕೆ.ಜಿ.ಹಳ್ಳಿಯಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಹೇಯ ಘಟನೆ ವರದಿಯಾಗಿದೆ.
ಆತಂಕಕಾರಿ ವಿಚಾರವೆಂದರೆ ಬೆಳಗ್ಗೆ 6.30 ರ ವೇಳೆಗೆ ಹೇಯ ಘಟನೆ ನಡೆದಿದ್ದು ಬಸ್ ನಿಲ್ದಾಣಕ್ಕೆ ತೆರಳುತ್ತಿದ್ದ ಯುವತಿಯನ್ನು ಹಿಂಬಾಲಿಸಿದ ಕಾಮುಕ ಆಕೆಯನ್ನು ಅಡ್ಡಗಟ್ಟಿ ತುಟಿಗೆ ಮುತ್ತಿಟ್ಟು ನಾಲಿಗೆ ಕಚ್ಚಿ ಪರಾರಿಯಾಗಿದ್ದಾನೆ.
ಕಾಮುಕ ಎರಗುತ್ತಿದ್ದಂತೆ ಯುವತಿ ಬೊಬ್ಬಿಟ್ಟಿದ್ದು, ಮನೆಯೊಂದರಲ್ಲಿದ್ದ ನಾಯಿ ಜೋರಾಗಿ ಬೊಗಳಿದೆ. ಕೂಡಲೇ ಸಾರ್ವಜನಿಕರು ಬರುವಷ್ಟರಲ್ಲಿ ಕಾಮುಕ ಪರಾರಿಯಾಗಿದ್ದಾನೆ. ಘಟನೆಯ ದೃಶ್ಯಾವಳಿ ಮನೆಯೊಂದರಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕೆ.ಜಿ.ಹಳ್ಳಿ ಪೊಲೀಸರು ಯುವತಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿದ್ದು ,ಕಾಮುಕನಾಗಿ ಶೋಧ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ