ಬಿಎಸ್ವೈ ವಿರುದ್ಧ ಎಫ್ಐಆರ್: ಬಿಜೆಪಿಯಿಂದ ರಾಜ್ಯಪಾಲರಿಗೆ ದೂರು
Team Udayavani, Aug 21, 2017, 1:20 PM IST
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿರುವ ಎಫ್ಐಆರ್ ತೆರವಿಗೆ ಆಗ್ರಹಿಸಿ ಕೇಂದ್ರ ಸಚಿವ ಅನಂತ ಕುಮಾರ್ ನೇತೃತ್ವದಲ್ಲಿ ಸೋಮವಾರ ರಾಜ್ಯಪಾಲರಿಗೆ ದೂರು ಸಲ್ಲಿಸಿದರು.
ಸೋಮವಾರ ಬೆಳಗ್ಗೆ ಬಿಜೆಪಿ ಮುಖಂಡರಾದ ಜಗದೀಶ ಶೆಟ್ಟರ್, ಕೆ.ಎಸ್. ಈಶ್ವರಪ್ಪ, ಶೋಭಾ ಕರಂದ್ಲಾಜೆ, ಆರ್. ಅಶೋಕ್ ಸಹಿತ ಹಲವು ನಾಯಕರು ಬೆಂಗಳೂರಿನ ವಿಧಾನಸೌಧ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಯಿಂದ ಮೆರವಣಿಗೆ ಹೊರಟು, ರಾಜಭವನಕ್ಕೆ ತೆರಳಿ ರಾಜ್ಯಪಾಲ ವಿ.ಆರ್. ವಾಲಾ ಅವರನ್ನು ಭೇಟಿ ಮಾಡಿ ರಾಜ್ಯ ಸರಕಾರ ಎಸಿಬಿ ದುರ್ಬಳಕೆ ಮಾಡಿಕೊಳ್ಳುವುದರ ವಿರುದ್ಧ ದೂರು ಸಲ್ಲಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅನಂತಕುಮಾರ್ ಬಿಎಸ್ವೈ ವಿರುದ್ದ ಸಿಎಂ ಸಿದ್ದರಾಮಯ್ಯನವರು ಸುಳ್ಳು ಅರೋಪಗಳನ್ನು ಸೃಷ್ಟಿಸಿ ರಾಜಕೀಯ ಸೇಡು ತೀರಿಸಿಕೊಳ್ಳಲು ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಜಗದೀಶ ಶೆಟ್ಟರ್ ಮಾತನಾಡಿ ಸ್ವತಃ ಸಿದ್ದರಾಮಯ್ಯ ಅವರ ವಿರುದ್ಧವೇ ಎಸಿಬಿಯಲ್ಲಿ 25 ದೂರುಗಳಿವೆ. ಅದರಲ್ಲಿ ಎಷ್ಟು ದೂರುಗಳಿಗೆ ಎಫ್ಐಆರ್ ದಾಖಲಿಸಿದ್ದೀರಾ, ಎಷ್ಟು ದೂರುಗಳಿಗೆ ಸಮನ್ಸ್ ಜಾರಿಗೊಳಿಸಿದ್ದೀರಾ ಎಂದು ಎಸಿಬಿಯನ್ನು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ