ದೆಹಲಿ, ಮುಂಬೈಯಲ್ಲೂ ಸಿಬಿಐ ದಾಳಿ: ಡಿಕೆಶಿ ವಿರುದ್ಧ ಸಿಬಿಐನಿಂದ ಎಫ್ ಐಆರ್ ದಾಖಲು
Team Udayavani, Oct 5, 2020, 11:04 AM IST
ಬೆಂಗಳೂರು: ಟ್ರಬಲ್ ಶೂಟರ್ ಎಂದೇ ಹೆಸರಾದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಸಹೋದರ ಡಿ ಕೆ ಸುರೇಶ್ ನಿವಾಸಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿರುವ ಸಿಬಿಐ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಬೆಂಗಳೂರಿನ ಸದಾಶಿವ ನಗರದ ನಿವಾಸ, ಕನಕಪುರ ನಿವಾಸ ಮಾತ್ರವಲ್ಲದೆ ದೆಹಲಿಯಲ್ಲಿರುವ ಡಿ ಕೆ ಸುರೇಶ್ ನಿವಾಸ, ಮುಂಬೈ ನಲ್ಲಿ ಕೂಡಾ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಸುಮಾರು 60 ಸಿಬಿಐ ಅಧಿಕಾರಿಗಳ ತಂಡ ಒಟ್ಟು 14 ಕಡೆ ದಾಳಿ ನಡೆಸಿದೆ. ದೆಹಲಿಯ ನಾಲ್ಕು ಕಡೆ, ಮುಂಬೈ ನ ಒಂದು ಕಡೆ ಸಿಬಿಐ ನ ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ಡಿಕೆ ಶಿವಕುಮಾರ್,ಡಿಕೆ ಸುರೇಶ್ ಮನೆ ಮೇಲೆ ಸಿಬಿಐ ದಾಳಿ: ಟ್ರಬಲ್ ಶೂಟರ್ ಗೆ ಮತ್ತೊಂದು ಟ್ರಬಲ್
ಎಫ್ ಐಆರ್ ದಾಖಲು: ಸಿಬಿಐ ದಾಳಿ ಬೆನ್ನಲ್ಲೇ ಡಿ ಕೆ ಶಿವಕುಮಾರ್ ವಿರುದ್ಧ ಸಿಬಿಐ ನ ಬೆಂಗಳೂರು ಘಟಕದಲ್ಲಿ ಎಫ್ ಐಆರ್ ದಾಖಲಾಗಿದೆ.
ದಾಳಿ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಬಿಜೆಪಿ ಸರ್ಕಾರದ ವಿರುದ್ಧ ಟೀಕೆ ಆರಂಭಿಸಿದ್ದು, ತನ್ನ ಕೈಗೊಂಬೆಯಾಗಿರುವ ಸಿಬಿಐ ಮೂಲಕ ಕಾಂಗ್ರೆಸ್ ವಿರುದ್ಧ ದಾಳಿ ನಡೆಸಲಾಗುತ್ತಿದೆ ಎಂದು ಆರೋಪಿಸಿದೆ.
ಇದನ್ನೂ ಓದಿ:ಡಿಕೆ ಸಾಮ್ರಾಜ್ಯದ ಮೇಲೆ ಸಿಬಿಐ ದಾಳಿ: ಬಿಜೆಪಿ ಸರ್ಕಾರದ ವಿರುದ್ಧ ಗರಂ ಆದ ಕೈ ನಾಯಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ