ಜ.15ರಿಂದ ಪ್ರಥಮ ಪಿಯುಸಿ, 9 ನೇ ತರಗತಿ ಆರಂಭಿಸುವ ಸಾಧ್ಯತೆ: ಸುರೇಶ್ ಕುಮಾರ್
Team Udayavani, Dec 31, 2020, 5:21 PM IST
ಬೆಂಗಳೂರು: ಜನವರಿ 15 ರ ನಂತರ ಪ್ರಥಮ ಪಿಯುಸಿ ಹಾಗೂ 9 ನೇತರಗತಿ ಆರಂಭಿಸಲು ತಜ್ಞರ ಸಲಹೆ ಪಡೆದು ತೀರ್ಮಾನ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶಾಲೆ ತೆರೆಯುವುದು ಅಗ್ನಿಪರೀಕ್ಷೆಯಲ್ಲ. ಇದು ನಮ್ಮ ಕರ್ತವ್ಯ. ಇದು ಪ್ರತಿಷ್ಠೆಯಲ್ಲ. ನಮ್ಮ ಜವಾಬ್ದಾರಿಯಾಗಿದೆ ಎಂದರು.
ವಿದ್ಯಾಗಮ ಆರಂಭ ಮಾಡುವ ಬಗ್ಗೆ ಹೈಕೋರ್ಟ್ ಸಲಹೆ ರೂಪದಲ್ಲಿ ಮಾರ್ಗದರ್ಶನ ನೀಡಿದೆ. ಕೋವಿಡ್ ಕಡಿಮೆ ಇರುವ ಜಿಲ್ಲೆಗಳಲ್ಲಿ ತರಗತಿಗಳನ್ನು ತೆರೆಯುವ ಬಗ್ಗೆ ಆಲೋಚಿಸುವಂತೆ ಸೂಚಿಸಿದೆ ಎಂದರು.
ಇದನ್ನೂ ಓದಿ:ಮಕ್ಕಳ ಸುರಕ್ಷತೆ ಜವಾಬ್ದಾರಿ ನಮ್ಮದು, ಧೈರ್ಯವಾಗಿ ಶಾಲೆಗೆ ಕಳಿಸಿ: ಸುರೇಶ್ ಕುಮಾರ್ ಮನವಿ
ಎಸ್ಎಸ್ಎಲ್ ಸಿ -ಪಿಯುಸಿ ಮಕ್ಕಳಿಗೆ ಹಿಂದಿನ ವರ್ಷದ ಬಸ್ ಪಾಸ್ ಬಳಸಲು ಅವಕಾಶವಿದೆ. ಸಾರಿಗೆ ಇಲಾಖೆ ಇದಕ್ಕೆ ಸಹಕಾರ ನೀಡಲಿದೆ ಎಂದರು.
ಖಾಸಗಿ ಶಾಲೆಗಳ ಸಂಘಟನೆಗಳ ಜೊತೆ ಮಾತನಾಡಿದ್ದೆನೆ. ಕ್ಯಾಮ್ಸ್ ಸಂಘಟನೆಯವರು ಪಾಲಕರಿಗೆ ತೊಂದರೆಯಾಗದಂತೆ ರೀತಿಯಲ್ಲಿ ಶುಲ್ಕದ ಬಗ್ಗೆ ತೀರ್ಮಾನಿಸಿದ್ದಾರೆ. ಪಾಲಕರು ಮತ್ತು ಶಾಲಾ ಆಡಳಿಯ ಮಂಡಳಿಗಳ ಸಭೆ ನಡೆಸಿ ಸಹಕಾರ ನೀಡಲಾಗುವುದು. ಖಾಸಗಿ ಶಾಲೆಗಳ ಲೈಸೆನ್ಸ್ ರದ್ದು ಮಾಡುವ ಬಗ್ಗೆ ಆಲೋಚನೆಯಿಲ್ಲ ಎಂದರು.
ಸಿಲೆಬಸ್ ಬಗ್ಗೆ ಯಾವುದೇ ಗೊಂದಲವಿಲ್ಲ. ನಾಳೆಯಿಂದ ತರಗತಿ ಆರಂಭವಾದರೂ ದಿನಕ್ಕೆ ನಾಲ್ಕು ಕ್ಲಾಸ್ ಮಾತ್ರ ನಡೆಯುತ್ತವೆ. ಒಂದು ವಾರದಲ್ಲಿ ಪಿಯುಸಿ, ಎಸ್ ಎಸ್ ಎಲ್ ಸಿ ತಾತ್ಕಾಲಿಕ ವೇಳಾ ಪಟ್ಟಿ ಪ್ರಕಟ ಮಾಡಲಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ