ಸಿಂಧನೂರು ಬಳಿ ಅಪಘಾತ: ಐವರ ಸಾವು
Team Udayavani, Oct 1, 2017, 7:10 AM IST
ಸಿಂಧನೂರು: ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಹೊರವಲಯದ ಏಳುರಾಗಿ ಕ್ಯಾಂಪ್ ಕ್ರಾಸ್ ಬಳಿ ಶನಿವಾರ ಟಂಟಂ ರಿಕ್ಷಾ – ಐಷರ್ ಮಿನಿ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಹಿತ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಒಂದೇ ಕುಟುಂಬಕ್ಕೆ ಸೇರಿದ ಶಾಮೀದ್ಸಾಬ ಸಬjಲಿಸಾಬ (35), ಸಬjಲಿಸಾಬ ರಂಜಾನಸಾಬ (40), ಖಾಜಮ್ಮ ಸಬjಲಿಸಾಬ (65), ಲಾಲಬಿ ಸಬjಲಿಸಾಬ (12) ಹಾಗೂ ಈರಯ್ಯಸ್ವಾಮಿ ಸಣ್ಣಯ್ಯಸ್ವಾಮಿ (45) ಮೃತರು. ಇವರೆಲ್ಲ ಬೂತಲದಿನ್ನಿ ಕ್ಯಾಂಪ್ ನಿವಾಸಿಗಳು. ಐಷರ್ ಮಿನಿ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಿಂಧನೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಮೊಹರಂ ಸಂತೆಗಾಗಿ ಸಿಂಧನೂರಿಗೆ ಆಗಮಿಸಿದ್ದ ಇವರು, ಸಂತೆ ಮುಗಿಸಿಕೊಂಡು ಮರಳಿ ಟಂಟಂ ರಿಕ್ಷಾದಲ್ಲಿ ಗ್ರಾಮಕ್ಕೆ ತೆರಳುವಾಗ ಏಳುರಾಗಿ ಕ್ಯಾಂಪ್ ಬಳಿ ಮಸ್ಕಿಯಿಂದ ವೇಗವಾಗಿ ಬರುತ್ತಿದ್ದ ಐಷರ್ ಮಿನಿ ಲಾರಿ ಢಿಕ್ಕಿ ಹೊಡೆಯಿತು. ಢಿಕ್ಕಿ ಹೊಡೆದ ರಭಸಕ್ಕೆ ಟಂಟಂ ರಿಕ್ಷಾ ನಜ್ಜುಗುಜ್ಜಾಗಿದ್ದು, ರಿಕ್ಷಾದಲ್ಲೇ ಶವಗಳು ಸಿಕ್ಕಿಹಾಕಿಕೊಂಡಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ