ಪರಿಹಾರಕ್ಕಾಗಿ ಕೇಂದ್ರದ ಮೊರೆ; ಪ್ರವಾಹ ಹಾನಿ ಸಮಗ್ರ ವರದಿ ಶೀಘ್ರ ಸಲ್ಲಿಕೆ: ಸಿಎಂ BSY


Team Udayavani, Aug 26, 2020, 6:25 AM IST

ಪರಿಹಾರಕ್ಕಾಗಿ ಕೇಂದ್ರದ ಮೊರೆ; ಪ್ರವಾಹ ಹಾನಿ ಸಮಗ್ರ ವರದಿ ಶೀಘ್ರ ಸಲ್ಲಿಕೆ: ಸಿಎಂ BSY

ಬೆಳಗಾವಿ: ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೆರೆಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದರು.

ಬೆಳಗಾವಿ/ಬಾಗಲಕೋಟೆ/ವಿಜಯಪುರ: ಕಳೆದ ವರ್ಷದ ಪ್ರವಾಹ ಸ್ಥಿತಿಯ ಕಹಿನೆನಪು ಮಾಸುವ ಮುನ್ನವೇ ಮತ್ತೂಂದು ಪ್ರವಾಹ ಎದುರಿಸಿರುವ ಉತ್ತರ ಕರ್ನಾಟಕದಲ್ಲಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಸಂಕಷ್ಟ ಎದುರಿಸುತ್ತಿರುವ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.

ಮಂಗಳವಾರ ಅವರು ಕೃಷ್ಣಾ, ಮಲಪ್ರಭಾ, ಘಟಪ್ರಭಾ, ವೇದಗಂಗಾ, ದೂಧ್‌ಗಂಗಾ ನದಿಗಳ ಆರ್ಭಟಕ್ಕೆ ಕೊಚ್ಚಿಹೋದ ಬದುಕಿನ ಪರಿಶೀಲನೆ ನಡೆಸಿದರು. ಬಾಗಲಕೋಟೆ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಸಭೆ ನಡೆಸಿ ಸಮಗ್ರ ಮಾಹಿತಿ ಪಡೆದರು.

ಹಾನಿಯ ಸಮಗ್ರ ವರದಿಯನ್ನು ಶೀಘ್ರದಲ್ಲೇ ಕೇಂದ್ರಕ್ಕೆ ಕಳುಹಿಸಲಾಗುವುದು. ಅಲ್ಲದೆ ನೆರೆ ನಿರ್ವಹಣೆಗಾಗಿ ಹೆಚ್ಚಿನ ಪರಿಹಾರ ಬಿಡುಗಡೆ ಮಾಡುವಂತೆ ಕೋರಿ ಮುಂದಿನ ವಾರ ದಿಲ್ಲಿಗೆ ತೆರಳಿ ಮನವಿ ಮಾಡಲಾಗುವುದು ಎಂದು ಹೇಳಿದರು.

ಶೀಘ್ರವೇ ಎಲ್ಲ ಶಾಸಕರ ಸಭೆ ಕರೆದು ಅತಿವೃಷ್ಟಿಯಿಂದ ಆಗಿರುವ ಹಾನಿಗೆ ಸಮರ್ಪಕ ಪರಿಹಾರ ನೀಡಲು ಯೋಜನೆ ರೂಪಿಸಲಾಗುವುದು. ಅಲ್ಲದೆ ಎಲ್ಲ ಮಾಹಿತಿಗಳನ್ನು ಕೇಂದ್ರ ಸರಕಾರಕ್ಕೆ ಕಳುಹಿಸಲಾಗುವುದು. ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಬೆಳಗಾವಿ ಜಿಲ್ಲೆಯಲ್ಲಿ ಆಗಿರುವ ಹಾನಿ ಮತ್ತು ಅಗತ್ಯವಿರುವ ಅನುದಾನದ ಮಾಹಿತಿಯನ್ನು ತತ್‌ಕ್ಷಣ ಸರಕಾರಕ್ಕೆ ಕಳುಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಸಿಎಂ, ಪ್ರವಾಹ ನಿರ್ವಹಣೆ ಮತ್ತಿತರ ತುರ್ತು ಕೆಲಸಗಳಿಗೆ ಬೆಳಗಾವಿ ಜಿಲ್ಲೆಯಲ್ಲಿ 412 ಕೋಟಿ ರೂ. ಅನುದಾನ ಲಭ್ಯವಿದೆ. ಜಿಲ್ಲೆಯಲ್ಲಿ ಮನೆ ನಿರ್ಮಾಣಕ್ಕೆ 174 ಕೋಟಿ ರೂ. ಲಭ್ಯವಿದೆ. ಮನೆ ಕಳೆದುಕೊಂಡ 44,156 ಫಲಾನುಭವಿಗಳಿಗೆ 488 ಕೋಟಿ ರೂ. ಪರಿಹಾರ ಬಿಡುಗಡೆಯಾಗಿದೆ. ಇದೇ ರೀತಿ ಉಳಿದ ಜಿಲ್ಲೆಗಳಲ್ಲಿ ಸಾಕಷ್ಟು ಹಣ ಲಭ್ಯವಿದೆ. ಆಯಾ ಜಿಲ್ಲೆಯಲ್ಲಿ ಆಗಿರುವ ಹಾನಿ ಮತ್ತು ಅಗತ್ಯವಿರುವ ಅನುದಾನದ ಮಾಹಿತಿಯನ್ನು ತತ್‌ಕ್ಷಣ ಸರಕಾರಕ್ಕೆ ಕಳುಹಿಸಬೇಕು ಎಂದರು.

2-3 ತಿಂಗಳಲ್ಲಿ ಆರ್ಥಿಕತೆ ಸುಧಾರಣೆ
ಇನ್ನೆರಡು-ಮೂರು ತಿಂಗಳಲ್ಲಿ ರಾಜ್ಯದ ಆರ್ಥಿಕ ಸ್ಥಿತಿ ಸುಧಾರಣೆಯಾಗಲಿದೆ ಎಂದು ಸಿಎಂ ಬಿಎಸ್‌ವೈ ಹೇಳಿದ್ದಾರೆ. ಆರ್ಥಿಕ ಪರಿಸ್ಥಿತಿ ಸರಿಯಿಲ್ಲವಾದರೂ ಯಾವುದೇ ಅಗತ್ಯ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿಲ್ಲ. ಸರಕಾರಿ ನೌಕರರಿಗೆ ವೇತನ ನೀಡಲಾಗಿದೆ ಎಂದು ನೆರೆ ಹಾನಿ ವೀಕ್ಷಣೆಗೆ ಆಗಮಿಸಿದ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಸಿಎಂ ಹೇಳಿದರು. ಕಳೆದ ವರ್ಷ ಪ್ರವಾಹ ಮತ್ತು ಅತಿವೃಷ್ಟಿಯಿಂದ ಹಾನಿಗೆ ಒಳಗಾಗಿರುವ ಮನೆಗಳ ನಿರ್ಮಾಣ ಪೂರ್ಣಗೊಳಿಸಲು ಸಂತ್ರಸ್ತರ ಖಾತೆಗೆ ಹಂತ ಹಂತವಾಗಿ ಪರಿಹಾರ ನೀಡಲಾಗುತ್ತಿದೆ. ಈ ವರ್ಷದ ಹಾನಿ ಸಮೀಕ್ಷೆ ಪ್ರಗತಿಯಲ್ಲಿದೆ. ಈ ಬಾರಿಯೂ ಅತಿವೃಷ್ಟಿಯಿಂದ ರಸ್ತೆ, ಸೇತುವೆ, ಬೆಳೆ ಮತ್ತು ಮನೆಗಳಿಗೆ ಅಪಾರ ಹಾನಿಯಾಗಿದೆ. ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಪ್ರಕಾರ ಬೆಳೆ ಹಾನಿ ಪರಿಹಾರ ಕಲ್ಪಿಸಲಾಗುವುದು. ಈ ಸಂಬಂಧ ಸದ್ಯದಲ್ಲೇ ಬೆಂಗಳೂರಿನಲ್ಲಿ ಹಿರಿಯ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿ ಹಾನಿಯ ಸಂಪೂರ್ಣ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಲಾಗುವುದು ಎಂದರು.

ಸೆಪ್ಟಂಬರ್‌ನಲ್ಲಿ ಮೋದಿ ಭೇಟಿ
ಕೃಷ್ಣಾ ಮೇಲ್ದಂಡೆ ಯೋಜನೆಗೆ ಆರ್ಥಿಕ ನೆರವು ನೀಡುವಂತೆ ಮುಂದಿನ ತಿಂಗಳು ಪ್ರಧಾನಿ ಭೇಟಿ ಮಾಡಿ ಮನವಿ ಮಾಡುತ್ತೇನೆ. ರಾಜ್ಯದ ಪಾಲಿನ ಜಿಎಸ್‌ಟಿ ಹಣ ನೀಡುವಂತೆ ಸಚಿವರಾದ ನಿರ್ಮಲಾ ಸೀತಾರಾಮನ್‌, ಪ್ರಹ್ಲಾದ ಜೋಶಿ ಅವರೊಂದಿಗೆ ಚರ್ಚೆ ಮಾಡಿದ್ದೇನೆ. ಶೀಘ್ರ
ಆ ಹಣ ಬರಲಿದೆ ಎಂದು ಸಿಎಂ ಹೇಳಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.