ಕೃಷ್ಣೆಯಲ್ಲಿ ಪ್ರವಾಹ
ಕೃಷ್ಣೆ, ಪ್ರವಾಹ, Flooding in Krishna
Team Udayavani, Aug 5, 2019, 3:04 AM IST
ಕೃಷ್ಣಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಆಲಮಟ್ಟಿ ಜಲಾಶಯದಿಂದ 2,49,823 ಕ್ಯೂಸೆಕ್ ನೀರನ್ನು 26 ಕ್ರಸ್ಟ್ಗೇಟ್ಗಳ ಮೂಲಕ ಹೊರ ಬಿಡಲಾಗುತ್ತಿದೆ. ನಡುಗಡ್ಡೆಯಾಗುವ ಮುತ್ತೂರ ಗ್ರಾಮದ 31 ಕುಟುಂಬಗಳ ಪೈಕಿ 25 ಕುಟುಂಬ, 233 ಜಾನುವಾರುಗಳ ಪೈಕಿ 104 ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸಲಾಗಿದೆ.
129 ಜಾನುವಾರು ಹಾಗೂ 6 ಕುಟುಂಬಗಳ ಸ್ಥಳಾಂತರ ನಡೆದಿದೆ. ಭೀಮಾ ನದಿಗೆ 60 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, 8 ಬ್ಯಾರೇಜ್ಗಳು ಭರ್ತಿಯಾಗಿ ಪ್ರವಾಹ ಭೀತಿ ಎದುರಾಗಿದೆ. ವಿಜಯಪುರ ಜಿಲ್ಲೆಯ 19 ಹಳ್ಳಿಗಳ ಜಮೀನಿಗೆ ನೀರು ನುಗ್ಗಿ ಬೆಳೆ ಹಾನಿ ಸಂಭವಿಸಿದೆ. ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯಲ್ಲೂ ಕೃಷ್ಣಾರ್ಭಟ ಜೋರಾಗಿದ್ದು, ಹಲವು ದೇವಸ್ಥಾನಗಳು, ಸೇತುವೆಗಳು ಜಲಾವೃತಗೊಂಡಿವೆ.
3 ಗ್ರಾಮಗಳ ಶಾಲೆಗೆ 3 ದಿನ ರಜೆ: ಘಟಪ್ರಭಾ ನದಿ ನೀರಿನಿಂದ ನಡುಗಡ್ಡೆಯಾಗುವ ಮುಧೋಳ ತಾಲೂಕಿನ ನಂದಗಾಂವ, ಜಮಖಂಡಿ ತಾಲೂಕಿನ ಮುತ್ತೂರ, ತುಬಚಿ ಗ್ರಾಮದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಿಗೆ ಜು.5ರಿಂದ 7ರವರೆಗೆ ರಜೆ ಘೋಷಣೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ