ಮಾಜಿ ರಾಜ್ಯಸಭಾ ಸದಸ್ಯ, ಗವರ್ನರ್, ನ್ಯಾ. ರಾಮ ಜೋಯಿಸ್ ಇನ್ನಿಲ್ಲ
Team Udayavani, Feb 16, 2021, 8:54 AM IST
ಬೆಂಗಳೂರು: ಜಾರ್ಖಂಡ್ ಮತ್ತು ಬಿಹಾರ ರಾಜ್ಯಗಳ ಮಾಜಿ ರಾಜ್ಯಪಾಲ, ಪಂಜಾಬ್- ಹರ್ಯಾಣ ಹೈಕೋರ್ಟ್ ನ ಮಾಜಿ ಮುಖ್ಯ ನ್ಯಾಯಮೂರ್ತಿ, ಮಾಜಿ ರಾಜ್ಯ ಸಭಾ ಸದಸ್ಯ ರಾಮ ಜೋಯಿಸ್ ಅವರು ಇಂದು ಮುಂಜಾನೆ ನಿಧನ ಹೊಂದಿದರು.
ಮಂಗಳವಾರ ಬೆಳಗ್ಗೆ 7.30ರ ಸುಮಾರಿಗೆ ರಾಮ ಜೋಯಿಸ್ ಅವರು ನಿಧನ ಹೊಂದಿದ್ದಾರೆ ಎಂದು ವರದಿಗಳು ತಿಳಿಸಿದೆ.
ಇದನ್ನೂ ಓದಿ:ಟೂಲ್ಕಿಟ್ ರಚಿಸಿದ್ದೇ ದಿಶಾ, ನಿಕಿತಾ, ಶಂತನು! ಟೆಲಿಗ್ರಾಂ ಮೂಲಕ ಥನ್ಬರ್ಗ್ಗೆ ರವಾನೆ
ಮಂಡಗದ್ದೆ ರಾಮ ಜೋಯಿಸ್ ಅವರು 1932ರ ಜುಲೈ 27ರಂದು ಶಿವಮೊಗ್ಗ ಜಿಲ್ಲೆಯ ಅರಗ ಗ್ರಾಮದಲ್ಲಿ ಜನಿಸಿದ್ದರು. 89 ವರ್ಷದ ಪ್ರಾಯದ ರಾಮ ಜೋಯಿಸ್ ಅವರು ಕೆಲ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
1992ರಲ್ಲಿ ಹರ್ಯಾಣ ಮತ್ತು ಪಂಜಾಬ್ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ರಾಮ ಜೋಯಿಸ್ ಅವರು ಕಾರ್ಯ ನಿರ್ವಹಿಸಿದ್ದರು. 2002ರಲ್ಲಿ ಜಾರ್ಖಂಡ್ ರಾಜ್ಯದ ರಾಜ್ಯಪಾಲರಾಗಿ, 2003ರಲ್ಲಿ ಬಿಹಾರ ರಾಜ್ಯದ ರಾಜ್ಯಪಾಲರಾಗಿ ರಾಮ ಜೋಯಿಸ್ ಅವರು ಸೇವೆ ಸಲ್ಲಿಸಿದ್ದಾರೆ.
ಇದನ್ನೂ ಓದಿ:ವ್ಯಾಪಿಸುತ್ತಿದೆ ವಂಚಕರ ಜಾಲ! ನಕಲಿ ಫೇಸ್ಬುಕ್, ಟ್ವಿಟರ್ ಖಾತೆ ಬಗ್ಗೆ ಇರಲಿ ಎಚ್ಚರ
ನ್ಯಾಯ ಮೂರ್ತಿ
ಮ. ರಾಮಾಜೋಯಿಸ್ ರವರು ಇನ್ನಿಲ್ಲ.ಇಂದು ಬೆಳಿಗ್ಗೆ 7.30 ರ ವೇಳೆಗೆ ಅವರು ಕಾಲವಾದರು.
ಅವರ ಆತ್ಮಕ್ಕೆ ಸದ್ಗತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ.
— S.Suresh Kumar, Minister – Govt of Karnataka (@nimmasuresh) February 16, 2021
1975-77ರ ತುರ್ತು ಪರಿಸ್ಥಿತಿಯ ಸಮಯದಲ್ಲಿ ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿ ಅವರೊಂದಿಗೆ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಸೆರೆಮನೆ ವಾಸ ಅನುಭವಿಸಿದ್ದರು. ಬಿಜೆಪಿ ಪಕ್ಷದತ್ತ ಒಲವು ತೋರಿಸಿದ್ದ ಅವರು, ರಾಜ್ಯಸಭೆಗೆ ಕರ್ನಾಟಕದಿಂದ ಆಯ್ಕೆಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ