ವನ್ಯಜೀವಿಗಳ ಮೃತದೇಹ ಇನ್ನು ಮುಂದೆ ಸುಡುವಂತಿಲ್ಲ; ಹೂಳುವಂತೆಯೂ ಇಲ್ಲ..!


Team Udayavani, Apr 13, 2022, 6:30 AM IST

ವನ್ಯಜೀವಿಗಳ ಮೃತದೇಹ ಇನ್ನು ಮುಂದೆ ಸುಡುವಂತಿಲ್ಲ; ಹೂಳುವಂತೆಯೂ ಇಲ್ಲ

ಬೆಂಗಳೂರು: ಇನ್ನು ಮುಂದೆ ವನ್ಯಜೀವಿಗಳ ಮೃತದೇಹಗಳನ್ನು ಸುಡುವಂತಿಲ್ಲ. ಹಾಗೆಯೇ ಹೂಳು ವಂತೆಯೂ ಇಲ್ಲ. ವನ್ಯಜೀವಿಗಳ ಮೃತದೇಹಗಳನ್ನು ಕೊಳೆಯಲು ಬಿಟ್ಟು ಇತರ ಪ್ರಾಣಿ-ಪಕ್ಷಿಗಳಿಗೆ ಆಹಾರವಾಗಿಸಬೇಕು. ಏಕೆಂದರೆ, ವನ್ಯಪ್ರಾಣಿಗಳ ಮೃತದೇಹಗಳು ಕೊಳೆತ ಅನಂತರ ಪೋಷಕಾಂಶಗಳಿಂದ ಸಮೃದ್ಧವಾಗುತ್ತವೆ.

ಹೀಗೆಂದು ಅರಣ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ವನ್ಯಜೀವಿ ತಜ್ಞ ಡಾ| ಸಂಜಯ್‌ ಗುಬ್ಬಿ ಅವರ ಮನವಿಯಂತೆ ಅರಣ್ಯ ಇಲಾಖೆ ಈ ನಿರ್ಧಾರಕ್ಕೆ ಬಂದಿದೆ.

ನಿರ್ಣಾಯಕ ಸಂಪನ್ಮೂಲ
ಡಾ| ಸಂಜಯ್‌ ಗುಬ್ಬಿಯವರ ಅಭಿಪ್ರಾಯದಂತೆ ವನ್ಯಜೀವಿಗಳ ಮೃತದೇಹಗಳು ಪರಿಸರ ವ್ಯವಸ್ಥೆ ಕಾರ್ಯನಿರ್ವಹಣೆಗೆ ನಿರ್ಣಾಯಕ ಸಂಪನ್ಮೂಲ ವಾಗಿರುವುದಲ್ಲದೇ ವನ್ಯಜೀವಿಗಳು ತಮ್ಮ ಸಾವಿನ ಅನಂತರವೂ ಪರಿಸರ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಇನ್ನು ಮುಂದೆ ಎಲ್ಲ ವನ್ಯಜೀವಿಗಳ ಮೃತದೇಹಗಳನ್ನು ನೈಸರ್ಗಿಕ ಆವಾಸಸ್ಥಾನಗಳಲ್ಲಿ ಸುಡುವ ಅಥವಾ ಹೂಳುವ ಪದ್ಧತಿಯನ್ನು ತತ್‌ಕ್ಷಣದಿಂದ ನಿಲ್ಲಿಸಿ, ಅರಣ್ಯದೊಳಗೆ ಕೊಳೆಯಲು ಬಿಟ್ಟು, ಮೃತದೇಹ ಅವಲಂಬಿಸಿ ಬದುಕುವ ಪ್ರಾಣಿ-ಪಕ್ಷಿಗಳ ಆಹಾರಕ್ಕೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಅರಣ್ಯ ಇಲಾಖೆ ಸೂಚಿಸಿದೆ. ಈ ಮಾರ್ಗಸೂಚಿಗಳು ರಾಷ್ಟ್ರೀಯ ಪ್ರಾಣಿ ಹುಲಿಗೆ ಅನ್ವಯಿಸುವುದಿಲ್ಲ ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಪರಿಸರ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ
ಸಸ್ಯಹಾರಿ ಮತ್ತು ಮಾಂಸಹಾರಿ ವನ್ಯಪ್ರಾಣಿಗಳು ಸ್ವಾಭಾವಿಕ ಅಥವಾ ಅಸ್ವಾಭಾವಿಕವಾಗಿ ಮೃತಪಟ್ಟರೆ ಅವುಗಳ ಮೃತದೇಹವನ್ನು ಸುಡಲಾಗುತ್ತದೆ. ಆದರೆ, ವನ್ಯಪ್ರಾಣಿಗಳ ಮೃತದೇಹ ಕೊಳೆತ ಅನಂತರ ಪೋಷಕಾಂಶಗಳಿಂದ ಸಮೃದ್ಧವಾಗಿ ಹಲವಾರು ಜಾತಿಯ ಪ್ರಾಣಿ, ಪಕ್ಷಿಗಳಿಗೆ ಆಹಾರವನ್ನು ಒದಗಿಸಿ ಪರಿಸರ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಅದಲ್ಲದೇ, ಪ್ರಮುಖವಾಗಿ ರಣಹದ್ದುಗಳು ವನ್ಯಜೀವಿ ಮೃತದೇಹದ ಶರೀರದ ಆಹಾರವನ್ನು ಸೇವಿಸಿ ಅದರ ನೈಸರ್ಗಿಕ ಸಂಖ್ಯೆ ಹೆಚ್ಚಿಸಿಕೊಳ್ಳುತ್ತದೆ.

 

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.