ವನ್ಯಜೀವಿಗಳ ಮೃತದೇಹ ಇನ್ನು ಮುಂದೆ ಸುಡುವಂತಿಲ್ಲ; ಹೂಳುವಂತೆಯೂ ಇಲ್ಲ..!
Team Udayavani, Apr 13, 2022, 6:30 AM IST
ಬೆಂಗಳೂರು: ಇನ್ನು ಮುಂದೆ ವನ್ಯಜೀವಿಗಳ ಮೃತದೇಹಗಳನ್ನು ಸುಡುವಂತಿಲ್ಲ. ಹಾಗೆಯೇ ಹೂಳು ವಂತೆಯೂ ಇಲ್ಲ. ವನ್ಯಜೀವಿಗಳ ಮೃತದೇಹಗಳನ್ನು ಕೊಳೆಯಲು ಬಿಟ್ಟು ಇತರ ಪ್ರಾಣಿ-ಪಕ್ಷಿಗಳಿಗೆ ಆಹಾರವಾಗಿಸಬೇಕು. ಏಕೆಂದರೆ, ವನ್ಯಪ್ರಾಣಿಗಳ ಮೃತದೇಹಗಳು ಕೊಳೆತ ಅನಂತರ ಪೋಷಕಾಂಶಗಳಿಂದ ಸಮೃದ್ಧವಾಗುತ್ತವೆ.
ಹೀಗೆಂದು ಅರಣ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ವನ್ಯಜೀವಿ ತಜ್ಞ ಡಾ| ಸಂಜಯ್ ಗುಬ್ಬಿ ಅವರ ಮನವಿಯಂತೆ ಅರಣ್ಯ ಇಲಾಖೆ ಈ ನಿರ್ಧಾರಕ್ಕೆ ಬಂದಿದೆ.
ನಿರ್ಣಾಯಕ ಸಂಪನ್ಮೂಲ
ಡಾ| ಸಂಜಯ್ ಗುಬ್ಬಿಯವರ ಅಭಿಪ್ರಾಯದಂತೆ ವನ್ಯಜೀವಿಗಳ ಮೃತದೇಹಗಳು ಪರಿಸರ ವ್ಯವಸ್ಥೆ ಕಾರ್ಯನಿರ್ವಹಣೆಗೆ ನಿರ್ಣಾಯಕ ಸಂಪನ್ಮೂಲ ವಾಗಿರುವುದಲ್ಲದೇ ವನ್ಯಜೀವಿಗಳು ತಮ್ಮ ಸಾವಿನ ಅನಂತರವೂ ಪರಿಸರ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಇನ್ನು ಮುಂದೆ ಎಲ್ಲ ವನ್ಯಜೀವಿಗಳ ಮೃತದೇಹಗಳನ್ನು ನೈಸರ್ಗಿಕ ಆವಾಸಸ್ಥಾನಗಳಲ್ಲಿ ಸುಡುವ ಅಥವಾ ಹೂಳುವ ಪದ್ಧತಿಯನ್ನು ತತ್ಕ್ಷಣದಿಂದ ನಿಲ್ಲಿಸಿ, ಅರಣ್ಯದೊಳಗೆ ಕೊಳೆಯಲು ಬಿಟ್ಟು, ಮೃತದೇಹ ಅವಲಂಬಿಸಿ ಬದುಕುವ ಪ್ರಾಣಿ-ಪಕ್ಷಿಗಳ ಆಹಾರಕ್ಕೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಅರಣ್ಯ ಇಲಾಖೆ ಸೂಚಿಸಿದೆ. ಈ ಮಾರ್ಗಸೂಚಿಗಳು ರಾಷ್ಟ್ರೀಯ ಪ್ರಾಣಿ ಹುಲಿಗೆ ಅನ್ವಯಿಸುವುದಿಲ್ಲ ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.
ಪರಿಸರ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ
ಸಸ್ಯಹಾರಿ ಮತ್ತು ಮಾಂಸಹಾರಿ ವನ್ಯಪ್ರಾಣಿಗಳು ಸ್ವಾಭಾವಿಕ ಅಥವಾ ಅಸ್ವಾಭಾವಿಕವಾಗಿ ಮೃತಪಟ್ಟರೆ ಅವುಗಳ ಮೃತದೇಹವನ್ನು ಸುಡಲಾಗುತ್ತದೆ. ಆದರೆ, ವನ್ಯಪ್ರಾಣಿಗಳ ಮೃತದೇಹ ಕೊಳೆತ ಅನಂತರ ಪೋಷಕಾಂಶಗಳಿಂದ ಸಮೃದ್ಧವಾಗಿ ಹಲವಾರು ಜಾತಿಯ ಪ್ರಾಣಿ, ಪಕ್ಷಿಗಳಿಗೆ ಆಹಾರವನ್ನು ಒದಗಿಸಿ ಪರಿಸರ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಅದಲ್ಲದೇ, ಪ್ರಮುಖವಾಗಿ ರಣಹದ್ದುಗಳು ವನ್ಯಜೀವಿ ಮೃತದೇಹದ ಶರೀರದ ಆಹಾರವನ್ನು ಸೇವಿಸಿ ಅದರ ನೈಸರ್ಗಿಕ ಸಂಖ್ಯೆ ಹೆಚ್ಚಿಸಿಕೊಳ್ಳುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ