ಘಟಾನುಘಟಿಗಳ ಮನವೊಲಿಕೆಗೂ ಬಗ್ಗದ ಎಂಬಿ ಪಾಟೀಲ್, ಆಕ್ರೋಶ!
Team Udayavani, Jun 8, 2018, 1:18 PM IST
ಬೆಂಗಳೂರು: ಸಚಿವ ಸ್ಥಾನ ಕೈತಪ್ಪಿದ್ದಕ್ಕಾಗಿ ತೀವ್ರ ಅಸಮಾಧಾನಗೊಂಡಿರುವ ಮಾಜಿ ಸಚಿವ ಎಂಬಿ ಪಾಟೀಲ್ ಮನವೊಲಿಕೆಗೆ ಕಾಂಗ್ರೆಸ್ ಘಟಾನುಘಟಿ ನಾಯಕರುಗಳು ಪ್ರಯತ್ನಿಸುತ್ತಿದ್ದರೂ ಕೂಡಾ ಯಾವುದಕ್ಕೂ ಜಗ್ಗದ ಹಿನ್ನೆಲೆಯಲ್ಲಿ ಇದೀಗ ಸಿಎಂ ಎಚ್ ಡಿ ಕುಮಾರಸ್ವಾಮಿ ಅಖಾಡಕ್ಕಿಳಿದಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಶುಕ್ರವಾರ ಬೆಳಗ್ಗೆ ಡಿಸಿಎಂ ಪರಮೇಶ್ವರ್, ಡಿಕೆ ಶಿವಕುಮಾರ್ ಹಾಗೂ ಆರ್ ವಿ ದೇಶಪಾಂಡೆ ಸದಾಶಿವನಗರದಲ್ಲಿರುವ ಎಂಬಿ ಪಾಟೀಲ್ ಮನೆಗೆ ಭೇಟಿ ನೀಡಿ ಮನವೊಲಿಕೆಗೆ ಮುಂದಾಗಿದ್ದರು.
ನನ್ನ ಸಚಿವ ಸ್ಥಾನ ತಪ್ಪಿಸಿದ್ದು ಯಾರು?
ನನಗೆ ಯಾಕೆ ಸಚಿವ ಸ್ಥಾನ ಕೊಡಲಿಲ್ಲ ಹೇಳಿ? ಯಾರು ನನಗೆ ಸಚಿವ ಕೊಡಬೇಡಿ ಎಂದು ಹೇಳಿ ಎಂದು ಎಂಬಿ ಪಾಟೀಲ್ ನೇರವಾಗಿ ಪರಮೇಶ್ವರ್ ಅವರನ್ನು ಪ್ರಶ್ನಿಸಿದ್ದಾರೆನ್ನಲಾಗಿದೆ. ನಾನು ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದಿದ್ದೇನೆ. ನನಗೆ 2ನೇ ಹಂತದಲ್ಲಿ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ನೀಡಿದರೆ ನನ್ನ ಹಿರಿತನಕ್ಕೆ ಬೆಲೆ ಎಲ್ಲಿದೆ ಎಂದು ಪ್ರಶ್ನಿಸಿದ್ದಾರೆನ್ನಲಾಗಿದೆ.
ನಿಮ್ಮ ಸಚಿವಗಿರಿ ಯಾರಿಗೆ ಬೇಕು ಎಂದು ಆಕ್ರೋಶ ವ್ಯಕ್ತಪಡಿಸಿರುವ ಎಂಬಿ ಪಾಟೀಲ್ ಮನವೊಲಿಕೆಗೆ ಬಗ್ಗದ ನಿಟ್ಟಿನಲ್ಲಿ ಸಂಧಾನ ವಿಫಲವಾಗಿದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ