ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಉಡುಪಿಯ ಯು.ಆರ್.ರಾವ್ ವಿಧಿವಶ
Team Udayavani, Jul 24, 2017, 8:04 AM IST
ಬೆಂಗಳೂರು: ಅಂತರಾಷ್ಟ್ರೀಯ ಖ್ಯಾತಿಯ ಬಾಹ್ಯಾಕಾಶ ವಿಜ್ಞಾನಿ ಇಸ್ರೋದ ಮಾಜಿ ಮುಖ್ಯಸ್ಥ ಪದ್ಮವಿಭೂಷಣ ಪ್ರೊ. ಯು.ಆರ್.ರಾವ್ (85) ಸೋಮವಾರ ನಸುಕಿನ ಜಾವ 2.55ರ ಸುಮಾರಿಗೆ ವಿಧಿವಶರಾಗಿದ್ದಾರೆ.
ಹೃದಯ ಸಂಬಂಧಿ ಸಮಸ್ಯೆಯಿಂದ ನಗರದ ಇಂದಿರಾನಗರದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು.
ಯು.ಆರ್.ರಾವ್ ಅವರಿಗೆ 1976ರಲ್ಲಿ ಭಾರತ ಸರಕಾರ ಪದ್ಮಭೂಷಣ ಮತ್ತು 2017ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು.
ಯು.ಆರ್.ರಾವ್ ಅವರು ಉಡುಪಿಯ ಅದಮಾರುವಿನಲ್ಲಿ 1932 ರಲ್ಲಿ ಜನಿಸಿದವರು. ಅಂತಾರಾಷ್ಟ್ರೀಯ ಖ್ಯಾತಿಯ ಬಾಹ್ಯಾಕಾಶ ವಿಜ್ಞಾನಿಯಾಗಿರುವ ರಾವ್ ಅವರು ಭಾರತದ ಮೊದಲ ಉಪಗ್ರಹ ‘ಆರ್ಯಭಟ’ದ ರೂವಾರಿ. ಆ ಬಳಿಕ ಭಾಸ್ಕರ, ಆ್ಯಪಲ್, ರೋಹಿಣಿ, ಇನ್ಸಾಟ್–1, ಇನ್ಸಾಟ್–2, ಐಆರ್ಎಸ್–1 ಎ, ಐಆರ್ಎಸ್–1ಬಿ ಸೇರಿದಂತೆ ಒಟ್ಟು 18 ಉಪಗ್ರಹಗಳ ನಿರ್ಮಾಣದಲ್ಲಿ ಮುಖ್ಯ ಮಾರ್ಗದರ್ಶಕರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?