ಶ್ರೀಲಂಕಾದಲ್ಲಿ ಹೃದಯಾಘಾತ; ಕಸ್ತೂರಿರಂಗನ್ ಬೆಂಗಳೂರಿಗೆ ಸ್ಥಳಾಂತರ
Team Udayavani, Jul 10, 2023, 9:13 PM IST
ಬೆಂಗಳೂರು: ಇಸ್ರೋ ಮಾಜಿ ಅಧ್ಯಕ್ಷ ಮತ್ತು ಹೊಸ ಶಿಕ್ಷಣ ನೀತಿಯ ಕರಡು ಸಮಿತಿಯ ಮುಖ್ಯಸ್ಥ ಡಾ.ಕೆ. ಕಸ್ತೂರಿರಂಗನ್ ಅವರು ಶ್ರೀಲಂಕಾದಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದು, ಚಿಕಿತ್ಸೆಗಾಗಿ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ಸೋಮವಾರ ತಿಳಿಸಿವೆ.ಬೊಮ್ಮಸಂದ್ರದ ನಾರಾಯಣ ಹೃದಯಾಲಯದಲ್ಲಿ ಅವರಿಗೆ ಡಾ.ದೇವಿಪ್ರಸಾದ್ ಅವರ ನೇತೃತ್ವದಲ್ಲಿ ಚಿಕಿತ್ಸೆ ಆರಂಭಿಸಲಾಗಿದೆ ಎಂದು ತಿಳಿದು ಬಂದಿದೆ.
83ರ ಹರೆಯದ ಕಸ್ತೂರಿರಂಗನ್ ಅವರು ಈ ಹಿಂದೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕುಲಪತಿಗಳಾಗಿ ಹಾಗೂ ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿದ್ದರು. ಅವರು ರಾಜ್ಯಸಭೆಯ ಮಾಜಿ ಸದಸ್ಯರಾಗಿದ್ದರು (2003-09) ಮತ್ತು ಈಗ ನಿಷ್ಕ್ರಿಯಗೊಂಡಿರುವ ಭಾರತದ ಯೋಜನಾ ಆಯೋಗದ ಮಾಜಿ ಸದಸ್ಯರಾಗಿದ್ದಾರೆ.
ಅವರು ಎಪ್ರಿಲ್ 2004 ರಿಂದ 2009 ರವರೆಗೆ ಬೆಂಗಳೂರಿನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ನ ನಿರ್ದೇಶಕರಾಗಿದ್ದರು.