ಮಾಜಿ ಲೋಕಾಯುಕ್ತ ಭಾಸ್ಕರ್ರಾವ್ಗೆ ವಾರೆಂಟ್
Team Udayavani, Aug 6, 2017, 8:40 AM IST
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಕ್ಲೀನ್ಚಿಟ್ ಕೊಡಿಸಲು ಸರ್ಕಾರಿ ಅಧಿಕಾರಿಯೊಬ್ಬರಿಂದ
ಲಂಚ ಬೇಡಿಕೆಯಿಟ್ಟ ಆರೋಪ ಪ್ರಕರಣದ ವಿಚಾರಣೆಗೆ ಪದೇಪದೆ ಗೈರು ಹಾಜರಾಗುತ್ತಿದ್ದ ಕಳಂಕಿತ ಮಾಜಿ
ಲೋಕಾಯುಕ್ತ ನ್ಯಾ. ಭಾಸ್ಕರ್ರಾವ್ಗೆ ಲೋಕಾಯುಕ್ತ ನ್ಯಾಯಾಲಯವು ಜಾಮೀನು ಸಹಿತ ವಾರೆಂಟ್ ಜಾರಿಗೊಳಿಸಿದೆ. ಲೋಕಾಯುಕ್ತ ವಿಶೇಷ ನ್ಯಾಯಾಲಯವು ಶನಿವಾರ ಪ್ರಕರಣವನ್ನು ವಿಚಾರಣೆಗೆ ಕೈಗೆತ್ತಿಕೊಂಡಾಗ
ಪ್ರಕರಣದ 5ನೇ ಆರೋಪಿಯಾದ ಭಾಸ್ಕರ್ರಾವ್ ಅಥವಾ ಅವರ ಪರ ವಕೀಲರು ಗೈರು ಹಾಜಗಿದ್ದರು. ಹಲವು ಬಾರಿ
ಸಮನ್ಸ್ ನೀಡಿದ್ದರೂ ವಿಚಾರಣೆ ಗೈರು ಹಾಜರಾಗುತ್ತಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾ. ಗೋಪಾಲ್ ಆರೋಪಿ
ಭಾಸ್ಕರ್ರಾವ್ಗೆ ಜಾಮೀನು ಸಹಿತ ವಾರೆಂಟ್ ಜಾರಿಗೊಳಿಸಿ ವಿಚಾರಣೆಯನ್ನು ಆ.31ಕ್ಕೆ ಮುಂದೂಡಿದರು. 2013ರಲ್ಲಿ
ತುಂಗಾ ಮೇಲ್ದಂಡೆ ಯೋಜನೆ ಕಾರ್ಯಪಾಲಕ ಎಂಜಿನಿಯರ್ ಆಗಿದ್ದ ಪಿ.ಬಿ.ಚನ್ನಬಸಪ್ಪ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದ ದಾವಣಗೆರೆ ಲೋಕಾಯುಕ್ತ ಪೊಲೀಸರು, ಅಧಿಕಾರಿ ಚನ್ನಬಸಪ್ಪ ವಿರುದಟಛಿ ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣ ದಾಖಲಿಸಿಕೊಂಡಿದ್ದರು.
ಈ ನಡುವೆ ಚೆನ್ನಬಸಪ್ಪ ಅವರನ್ನು ಸಂಪರ್ಕಿಸಿದ್ದ ಭಾಸ್ಕರ್ ರಾವ್ ಪುತ್ರ ಅಶ್ವಿನ್ರಾವ್ ಹಾಗೂ ಆತನ ಸಹಚರರು,
ಈ ಪ್ರಕರಣದಲ್ಲಿ ಪೊಲೀಸರಿಂದ “ಬಿ” ರಿಪೋರ್ಟ್ ಸಲ್ಲಿಸುವುದಾಗಿ ತಿಳಿಸಿ ಲಂಚಕ್ಕೆ ಬೇಡಿಕೆಯಿ ಟ್ಟಿದ್ದರು. ಇದರಲ್ಲಿ
ಭಾಸ್ಕರ್ ರಾವ್ ಪಾತ್ರವಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿ ಕೊಂಡಿದ್ದ ಲೋಕಾಯುಕ್ತ ವಿಶೇಷ ತನಿಖಾ ತಂಡ ಭಾಸ್ಕರ್ರಾವ್ ಅವರನ್ನು 5ನೇ ಆರೋಪಿಯನ್ನಾಗಿ ಪರಿಗಣಿಸಿ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಹೆಚ್ಚುವರಿ ಚಾರ್ಜ್ ಶೀಟ್ ದಾಖಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ