ವಲಸೆ ಬಂದವರನ್ನು ಹೇಗೆ ಆಯ್ಕೆ ಮಾಡಿದಿರಿ: ಸಿಪಿವೈ
Team Udayavani, Feb 3, 2023, 6:49 AM IST
ಚನ್ನಪಟ್ಟಣ: ನಾನು ಹಲವು ಬಾರಿ ಈ ಕ್ಷೇತ್ರದ ಶಾಸಕನಾಗಿ ಸಾಕಷ್ಟು ಕೆಲಸ ಮಾಡಿದ್ದೇನೆ. ನೀರಾವರಿ ತಂದವನು ನಾನು. ಆದರೂ, ಸ್ವಾಭಿಮಾನವುಳ್ಳ ಜನತೆ, ನನ್ನನ್ನು ಬಿಟ್ಟು ವಲಸೆ ಬಂದವರನ್ನು ಹೇಗೆ ಆಯ್ಕೆ ಮಾಡಿದಿರಿ ಎಂದು ಮತದಾರರನ್ನು ಪ್ರಶ್ನೆ ಮಾಡಬೇಕಿದೆ. ಹಾಗಾಗಿ ಸ್ವಾಭಿಮಾನಿ ಸಂಕಲ್ಪ ನಡಿಗೆ ಹಮ್ಮಿಕೊಂಡಿದ್ದೇನೆ’ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದರು.
ತಾಲೂಕಿನ ಐತಿಹಾಸಿಕ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸ್ವಾಭಿಮಾನಿ ಸಂಕಲ್ಪ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜನರ ಬಳಿ ಉತ್ತರ ಪಡೆಯಲು ಸ್ವಾಭಿಮಾನಿ ಯಾತ್ರೆ ಕೈಗೊಂಡಿದ್ದೇನೆ. 2 ತಿಂಗಳ ಕಾಲ ಇಡೀ ಕ್ಷೇತ್ರದ ಮನೆಮನೆಗೆ ತೆರಳುತ್ತೇನೆ. ಕುಮಾರಸ್ವಾಮಿ ಅವರ ದುರಾಡಳಿತದ ಬಗ್ಗೆ ಮನವರಿಕೆ ಮಾಡುತ್ತೇನೆ. ಕ್ಷೇತ್ರಕ್ಕೆ ಅವರು ಕೊಟ್ಟ ಕೊಡುಗೆ ಏನು? ಅವರು ಎಷ್ಟು ದಿನ ಕ್ಷೇತ್ರದಲ್ಲಿ ಓಡಾಡಿದ್ದಾರೆ ಎಂಬುದರ ಬಗ್ಗೆ ತಿಳಿಸುತ್ತೇವೆ ಎಂದರು.
ಚನ್ನಪಟ್ಟಣಕ್ಕೆ 1,500 ಕೋಟಿ ರೂ.ಅನುದಾನ ತಂದಿದ್ದೇವೆ ಅಂತ ಎಚ್ಡಿಕೆ ಹೇಳಿದ್ದಾರೆ. ಆದರೆ, ಆ ಹಣ ಏನಾಯಿತು? ಜನರ ಕಣ್ಣಿಗೆ ಕಾಣ್ತಿಲ್ಲ. ತಾಲೂಕಿನಲ್ಲಿ ಕುಮಾರಸ್ವಾಮಿ ಏನು ಅಭಿವೃದ್ಧಿ ಮಾಡಿದ್ದಾರೆ ಎಂಬುದನ್ನು ಅವರನ್ನೇ ಕೇಳಬೇಕು ಎಂದು ವ್ಯಂಗ್ಯವಾಡಿದ ಯೋಗೇಶ್ವರ್, ಈ ಬಾರಿ ಯಾವುದೇ ಪಕ್ಷದ ಜತೆ ಹೊಂದಾಣಿಕೆ ಇಲ್ಲ. ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಇದನ್ನು ಸ್ಪಷ್ಟ ಪಡಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ