ಸಿಎಂ ಭೇಟಿ ಮಾಡಿದ ಎಚ್.ಡಿ.ರೇವಣ್ಣ: ಹೆಚ್ಚಿನ ಅನುದಾನಕ್ಕೆ ಭೇಟಿ ನೀಡಿದ ಮಾಜಿ ಸಚಿವರು
Team Udayavani, Apr 15, 2020, 4:41 PM IST
ಬೆಂಗಳೂರು: ಕೋವಿಡ್-19 ಲಾಕ್ಡೌನ್ ಮುಂದುವರಿಕೆ ಹಿನ್ನೆಲೆಯಲ್ಲಿ ಹಾಸನಕ್ಕೆ ಹೆಚ್ಚಿನ ಅನುದಾನ ಕೋರಿ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರು ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪಅವರನ್ನು ಭೇಟಿಯಾಗಿ ಚರ್ಚಿಸಿದರು.
ಲಾಕ್ ಡೌನ್ ಹಿನ್ನಲೆ ಪ್ರತಿ ತಾಲೂಕಿಗೆ ಕೇವಲ 2 ಲಕ್ಷ ಅನುದಾನ ನೀಡಲಾಗಿದೆ. ಬಡವರು, ನಿರ್ಗತಿಕರಿಗೆ ಒಂದು ದಿನದ ಊಟ ನೀಡಲು ಹಣ ಸಾಲುವುದಿಲ್ಲ. ಹೀಗಾಗಿ ಹೆಚ್ಚಿನ ಅನುದಾನದ ಅವಶ್ಯಕತೆ ಇದೆ. ಎಸ್ ಡಿ ಆರ್ ಎಫ್ ನಲ್ಲಿರುವ ಅನುದಾನ ಬಳಕೆಗೆ ಸರ್ಕಾರ ಮಾರ್ಗಸೂಚಿ ಹೊರಡಿಸಬೇಕು ಎಂದಿದ್ದಾರೆ.
ಹಾಸನ ಜಿಲ್ಲೆಯಿಂದ ವಲಸೆ ಹೋಗಿದ್ದ ಕಾರ್ಮಿಕರು ವಾಪಾಸಾಗಿದ್ದಾರೆ. ಜಿಲ್ಲೆಗೆ ವಾಪಸ್ಸಾದ ಕಾರ್ಮಿಕರಿಗೆ ಪಡಿತರ ಚೀಟಿಗಳಿಲ್ಲ. ಇಂತಹ ಕುಟುಂಬಗಳಿಗೆ ಪಡಿತರ ಒದಗಿಸಬೇಕು. ಹಾಸನ ಮೆಡಿಕಲ್ ಕಾಲೇಜಿಗೆ ಟೆಸ್ಟ್ ಕಿಟ್ ಹಾಗೂ ಪಿಪಿ ಕಿಟ್ ಒದಗಿಸಬೇಕು. ಕಬ್ಬು ಬೆಳೆಗಾರರು ಸಂಕಷ್ಟದಲ್ಲಿದ್ದು, ಪ್ರತಿ ಎಕರೆಗೆ 50ಸಾವಿರ ರೂ ಪರಿಹಾರ ನೀಡಿ ಎಂದು ಮನವಿ ಸಲ್ಲಿಸಿದರು.
ಆಲೂಗಡ್ಡೆ ಬಿತ್ತನೆ ಬೀಜದ ಅವಶ್ಯಕತೆ ಇದೆ. 35000 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗತ್ತದೆ. ಬಿತ್ತನೆ ಬೀಜ ಹಾಗೂ ಔಷಧಿಗಾಗಿ 55ಕೋಟಿ ಮೀಸಲಿಡ ಬೇಕೆಂದು ಎಚ್.ಡಿ.ರೇವಣ್ಣ ಅವರುಸಿಎಂಗೆ ಮನವಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ