ಡಿಕೆಶಿ ಸಮ್ಮುಖದಲ್ಲಿ ಕಿಮ್ಮನೆ, ಮಂಜುನಾಥ ಗೌಡ ಸಂಧಾನ
Team Udayavani, Apr 2, 2023, 6:08 AM IST
ಬೆಂಗಳೂರು: ತೀರ್ಥಹಳ್ಳಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾಗಿರುವ ಮಾಜಿ ಸಚಿವ ಕಿಮ್ಮನೆ ರತ್ನಾಕರ ಹಾಗೂ ಮಂಜುನಾಥ ಗೌಡ ಅವರ ನಡುವೆ ಸಂಧಾನ ನಡೆಸಿ ಕಿಮ್ಮನೆ ಅವರ ಪರವಾಗಿ ಕೆಲಸ ಮಾಡುವಂತೆ ಸೂಚಿಸಲಾಗಿದೆ.
ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಿಮ್ಮನೆ ಹಾಗೂ ಮಂಜುನಾಥ ಗೌಡ ಅವರನ್ನು ಜತೆಯಾಗಿ ಕೂರಿಸಿಕೊಂಡು ಇಬ್ಬರು ಮುಖಂಡರ ಬೆಂಬಲಿಗರೊಂದಿಗೆ ಸಭೆ ನಡೆಸಿ ಪಕ್ಷದ ವರಿಷ್ಠರು ಕಿಮ್ಮನೆ ಅವರಿಗೆ ಟಿಕೆಟ್ ಕೊಡಲು ನಿರ್ಧರಿಸಿದ್ದಾರೆ.
ಅದರಂತೆ ಅವರ ಪರವಾಗಿ ಎಲ್ಲರೂ ಕೆಲಸ ಮಾಡಬೇಕು, ಇದು ಪಕ್ಷದ ನಿರ್ಧಾರ. ಮುಂದೆ ಮಂಜುನಾಥ ಗೌಡರಿಗೂ ಪಕ್ಷದಲ್ಲಿ ಒಳ್ಳೆಯ ಭವಿಷ್ಯವಿದೆ. ಜತೆಗೆ ಹಲವು ಅವಕಾಶಗಳು ಸಿಗಲಿವೆ ಎಂದು ಭರವಸೆ ನೀಡಿ ಎಲ್ಲರನ್ನೂ ಸಮಾಧಾನಪಡಿಸಿ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ