ನಾಲ್ಕು ದಿನಗಳ ಹಿಂದೆಯೇ ನಾನು ಸತ್ತು ಹೋಗಿದ್ದೇನೆ..: ಮಾಧ್ಯಮಗಳ ಮೇಲೆ ರಮೇಶ್ ಕುಮಾರ್ ಕೋಪ
Team Udayavani, Dec 20, 2021, 10:14 AM IST
ಸುವರ್ಣಸೌಧ (ಬೆಳಗಾವಿ): “ನೀವು ಜೀವಂತ ಇರುವವರನ್ನು ಮಾತನಾಡಿಸಿ, ನಾನು ಜೀವಂತ ಇಲ್ಲ, ನಾಲ್ಕು ದಿನಗಳ ಹಿಂದೆಯೇ ನಾನು ಸತ್ತು ಹೋಗಿದ್ದೇನೆ” ಇದು ಮಾಜಿ ಸ್ಪೀಕರ್, ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ಮಾತುಗಳು.
ಎಂಇಎಸ್ ಪುಂಡಾಟಿಕೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ರಮೇಶ್ ಕುಮಾರ್ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.
ಮಾಧ್ಯಮಗಳ ಮುಂದೆ ಬಂದು ಕೈ ಮುಗಿದು ಹೋದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು, ಜೀವಂತ ಇರುವವರನ್ನು ಮಾತನಾಡಿಸಿ, ನಾನು ಜೀವಂತ ಇಲ್ಲ, ನಾಲ್ಕು ದಿನಗಳ ಹಿಂದೆಯೇ ನಾನು ಸತ್ತು ಹೋಗಿದ್ದೇನೆ” ಎಂದು ಹೇಳಿ ಕೈಮುಗಿದು ಹೊರಟರು.
ಇದನ್ನೂ ಓದಿ:ಕನ್ನಡ ಬಾವುಟಕ್ಕೆ ಚಪ್ಪಲಿಯಿಂದ ಹೊಡೆದು ಸುಟ್ಟು ಹಾಕಿದ ಕಾಂಗ್ರೆಸ್ ಕಾರ್ಯಕರ್ತರು!
ಆಕ್ಷೇಪಾರ್ಹ ಮಾತುಗಳನ್ನಾಡಿದ್ದ ರಮೇಶ್ ಕುಮಾರ್: ಕಳೆದ ವಾರ ಸದನದಲ್ಲಿ ಬೆಳೆವಿಮೆ ಚರ್ಚೆ ಸಂದರ್ಭದಲ್ಲಿ ಎಲ್ಲರಿಗೂ ಮಾತನಾಡಲು ಅವಕಾಶ ಕೊಟ್ಟ ಸ್ಪೀಕರ್ ನಡೆ ಬಗ್ಗೆ ಮಾತನಾಡುವಾಗ ಅವರು ಆಡಿದ ಮಾತುಗಳು ರಾಷ್ಟ್ರಾದ್ಯಂತ ಆಕ್ರೋಶ ಉಂಟು ಮಾಡಿತ್ತು. ಸದನದಲ್ಲಿ ಎಲ್ಲರೂ ಮಾತನಾಡಲು ಆರಂಭಿಸಿದರೆ ಏನು ಮಾಡುವುದು, ಲೆಟ್ ಅಸ್ ಎಂಜಾಯ್ ದ ಸಿಚುವೇಷನ್ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಹೇಳಿದಾಗ ಎದ್ದು ನಿಂತ ಮಾಜಿ ಸ್ಪೀಕರ್ ರಮೇಶ್ ಕುಮಾರ್ ‘there is a saying, When rape is inevitable, lie down and enjoy it’ (ಅತ್ಯಾಚಾರ ತಡೆಯಲು ಸಾಧ್ಯವಿಲ್ಲವೆಂದರೆ ಮಲಗಿ ಆನಂದಿಸಿ) ಎಂದರು. ರಮೇಶ್ ಕುಮಾರ್ ಅವರ ಹೇಳಿಕೆ ಹೊರಬರುತ್ತಿದ್ದಂತೆ ರಾಷ್ಟ್ರಮಟ್ಟದಲ್ಲಿ ಮಹಿಳೆಯರಿಂದ, ಚಿಂತಕರಿಂದ ತೀವ್ರ ವಿವಾದವುಂಟಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?