Contractors ಸಂಘದ ಮಾಜಿ ಉಪಾಧ್ಯಕ್ಷ ಅಂಬಿಕಾಪತಿ ನಿಧನ
ಕಳೆದ ತಿಂಗಳು ನಿವಾಸದ ಮೇಲೆ ಐಟಿ ದಾಳಿಯಾದ ವೇಳೆ 42 ಕೋಟಿ ರೂ. ಹಣ ಪತ್ತೆಯಾಗಿತ್ತು
Team Udayavani, Nov 27, 2023, 9:41 PM IST
ಬೆಂಗಳೂರು: ಗುತ್ತಿಗೆದಾರ ಸಂಘದ ಮಾಜಿ ಉಪಾಧ್ಯಕ್ಷ ಅಂಬಿಕಾಪತಿ ಅವರು ಸೋಮವಾರ ಸಂಜೆ ಹೆಬ್ಬಾಳದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
ಕಳೆದ ತಿಂಗಳು ಅಂಬಿಕಾಪತಿ ಅವರ ಬೆಂಗಳೂರಿನ ಮಾನ್ಯತಾ ಟೆಕ್ಪಾರ್ಕ್ನ ನಿವಾಸದ ಮೇಲೆ ಐಟಿ ದಾಳಿ ನಡೆದಿದ್ದ ವೇಳೆ 42 ಕೋಟಿ ರೂ. ಹಣ ಪತ್ತೆಯಾಗಿತ್ತು.
ದಾಳಿ ವೇಳೆ ಸಿಕ್ಕಿದ ಸಾಕ್ಷ್ಯ ಮುಂದಿಟ್ಟು ಅಂಬಿಕಾಪತಿ ಹಾಗೂ ಕುಟುಂಬಸ್ಥರನ್ನು ವಿಚಾರಣೆ ನಡೆಸಲಾಗುತ್ತಿದೆ.
ಏನಿದು ಪ್ರಕರಣ ?
ಐಟಿ ಅಧಿಕಾರಿಗಳು ಕೆಲವು ಚಿನ್ನದ ಅಂಗಡಿಗಳ ಮೇಲೆ ದಾಳಿ ನಡೆಸಿದ್ದರು. ಆ ವೇಳೆ ಪತ್ತೆಯಾದ ಕೆಲವು ದಾಖಲೆಗಳನ್ನು ಪರಿಶೀಲಿಸಿ ಅಂಗಡಿ ಮಾಲಕರಿಂದ ಮಾಹಿತಿ ಕಲೆ ಹಾಕಿದಾಗ ಅಂಬಿಕಾಪತಿ ಹಾಗೂ ಆತನ ಪುತ್ರರ ಬಳಿ ಭಾರೀ ಪ್ರಮಾಣದ ನಗದು ಸಂಗ್ರಹವಾಗಿರುವ ಬಗ್ಗೆ ಸುಳಿವು ಸಿಕ್ಕಿತ್ತು. ಇದರ ಆಧಾರದಲ್ಲಿ ಅಂಬಿಕಾಪತಿ ನಿವಾಸದ ಮೇಲೆ ದಾಳಿ ಮಾಡಿದಾಗ ಮಂಚದ ಕೆಳಗೆ ಬಾಕ್ಸ್ಗಳಲ್ಲಿ ತುಂಬಿ ಇಟ್ಟಿದ್ದ ಕಂತೆ-ಕಂತೆ ಗರಿ ಗರಿ 500 ಮುಖಬೆಲೆಯ ನೋಟುಗಳು ಪತ್ತೆಯಾಗಿದ್ದವು. ರಾತ್ರಿ ಕಾರ್ಪೆಂಟರ್ಗಳನ್ನು ಕರೆತಂದು ಲಾಕರ್ ಒಡೆದಾಗ ಎರಡು ಸೂಟ್ಕೇಸ್ ಪತ್ತೆಯಾಗಿದ್ದು, ಅದನ್ನು ತೆರೆದಾಗ ನಗದು, ಚಿನ್ನಾಭರಣ, ವಿವಿಧ ರಿಯಲ್ ಎಸ್ಟೇಟ್ ಕಾಮಗಾರಿಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ
Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ
Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!
Air India: ಪೈಲಟ್ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್ ಇಂಡಿಯಾ ವಿಮಾನ ಸಂಚಾರ ರದ್ದು
Malpe: ತೊಟ್ಟಂ ಬೀಚ್ನಲ್ಲಿ ಮುಳುಗುತ್ತಿದ್ದವರ ರಕ್ಷಣೆ