ಮಾಸಾಶನಕ್ಕಾಗಿ ಮಣ್ಣು ತಿಂದು ಪ್ರತಿಭಟಿಸಿದ ಮಾಜಿ ಕುಸ್ತಿ ಪಟುಗಳು
Team Udayavani, Jun 6, 2022, 2:51 PM IST
ಗದಗ: ಮಾಸಾಶನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಮಾಜಿ ಕುಸ್ತಿ ಪಟುಗಳು ಮಣ್ಣು ತಿನ್ನುವ ಮೂಲಕ ಜಿಲ್ಲಾಡಳಿತ ಭವನದ ಎದುರು ಸೋಮವಾರ ವಿನೂತನ ಪ್ರತಿಭಟನೆ ನಡೆಸಿದರು.
ಕಳೆದ 8 ತಿಂಗಳಿನಿಂದ ಮಾಸಾಶನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಜಿಲ್ಲಾ ಕುಸ್ತಿ ಪೈಲ್ವಾನರ ಸಂಘದ ನೇತೃತ್ವದಲ್ಲಿ ಮಾಜಿ ಕುಸ್ತಿ ಹಾಗೂ ಕಬಡ್ಡಿ ಪಟುಗಳು ಪ್ರತಿಭಟನೆ ನಡೆಸಿದರಲ್ಲದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ 140ಕ್ಕೂ ಹೆಚ್ಚು ಮಾಜಿ ಕುಸ್ತಿಪಟುಗಳಿದ್ದು ಆರ್ಥಿಕವಾಗಿ ತೊಂದರೆ ಅನುಭವಿಸುತ್ತಿದ್ದಾರೆ. ಪ್ರತಿ ತಿಂಗಳು ದೊರೆಯುತ್ತಿದ್ದ ಮಾಸಾಶನದಲ್ಲಿ ಜೀವನ ನಿರ್ವಹಣೆ ಮಾಡುತ್ತಿದ್ದರು. ಆದರೆ, ಕಳೆದ 8 ತಿಂಗಳಿನಿಂದ ಮಾಸಾಶನ ಬಿಡುಗಡೆಯಾಗದ ಕಾರಣ ತೀವ್ರ ಸಂಕಷ್ಟ ಎದುರಿಸುವಂತಾಗಿದೆ.
ಜಿಲ್ಲೆಯಲ್ಲಿ ಕೆಲ ವಯೋವೃದ್ಧ ಮಾಜಿ ಕುಸ್ತಿಪಟುಗಳ ಆರೋಗ್ಯ ಹದಗೆಟ್ಟಿದ್ದು, ಔಷಧೋಪಚಾರ ಪಡೆಯಲು ಪರದಾಡುವಂತಾಗಿದೆ. ಜಿಲ್ಲಾಡಳಿತ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಕೂಡಲೇ ಮಾಸಾಶನ ಬಿಡುಗಡೆಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಕುಸ್ತಿ ಪೈಲ್ವಾನ್ ಸಂಘದ ಅಧ್ಯಕ್ಷ ದೇವಪ್ಪ ಗುಡೇದ, ಪದಾಧಿಕಾರಿಗಳಾದ ಸುಭಾಷ್ ಕಟಗೇರಿ, ಮೋದಿನಸಾಬ್ ಅಣ್ಣಿಗೇರಿ, ದೇವಪ್ ಯಲಿಗಾರ, ಅಮರಪ್ಪ ಗುಡಗುಂಟಿ ಸೇರಿ ಮಾಸಿ ಕುಸ್ತಿ ಹಾಗೂ ಕಬಡ್ಡಿ ಪಟುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ