ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆ ಯತ್ನ
Team Udayavani, Sep 10, 2019, 3:00 AM IST
ಹರಪನಹಳ್ಳಿ: ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗೊಲ್ಲರಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಹರಪನಹಳ್ಳಿ ತಾಲೂಕಿನ ಅಣಜಿಗೆರೆ ಗ್ರಾಮದ ನಿವಾಸಿ ಹನುಮಂತಪ್ಪ, ಹನುಮಕ್ಕ, ರಂಗನಾಥ್, ಮಲ್ಲಿಕಾರ್ಜುನ ಆತ್ಮಹತ್ಯೆಗೆ ಯತ್ನಿಸಿದವರು. ಯುವಕ ರಂಗನಾಥ್ ಅದೇ ಗ್ರಾಮದ ಅಂಜಿನಪ್ಪ ಎಂಬುವವರ ಮಗಳನ್ನು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ.
ಈ ವಿಚಾರವಾಗಿ ಯುವತಿ ತಂದೆ ಹುಡುಗನ ಮನೆಯವರಿಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದರಿಂದ ಬೇಸತ್ತ ರಂಗನಾಥ್ ಹಾಗೂ ಪೋಷಕರು ಗೊಲ್ಲರಹಳ್ಳಿಯ ತಮ್ಮ ಸಂಬಂಧಿ ಕರ ಮನೆಯಲ್ಲಿ ಈ ಕೃತ್ಯವೆಸಗಿದ್ದಾರೆ. ಇವರನ್ನು ತಕ್ಷಣ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.