ದಲಿತ ಮಕ್ಕಳಿಗೆ ನಾಲ್ಕು ಸೈನಿಕ ಶಾಲೆ: ಗೋವಿಂದ ಕಾರಜೋಳ


Team Udayavani, Feb 3, 2021, 11:45 PM IST

Four military school for Dalit children: Govinda Karajola

ಬೆಂಗಳೂರು: ಎಸ್ಸಿ, ಎಸ್ಟಿ ಸಮುದಾಯದ ಮಕ್ಕಳಿಗೆ ರಾಜ್ಯದಲ್ಲಿ ನಾಲ್ಕು ಸೈನಿಕ ವಸತಿ ಶಾಲೆಗಳನ್ನು ಸ್ಥಾಪಿಸಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ  ತಿಳಿಸಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ ಎಸ್‌ಸಿಪಿ-ಟಿಎಸ್‌ಪಿ ಯೋಜನೆಯ ಅನುದಾನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಸದಸ್ಯ ಅರವಿಂದ ಕುಮಾರ್‌ ಅರಳಿ ಪ್ರಶ್ನೆಗೆ ಉತ್ತರಿಸಿ, ವಿಜಯಪುರ ಹಾಗೂ ಮಡಿಕೇರಿಯಲ್ಲಿರುವ ಸೈನಿಕ ಶಾಲೆಗಳ ಮಾದರಿಯಲ್ಲಿ ಎಸ್ಸಿ, ಎಸ್ಟಿ ಸಮುದಾಯದ ಮಕ್ಕಳಿಗೆ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ತಲಾ ಒಂದೊಂದು ಸೈನಿಕ ವಸತಿ ಶಾಲೆ ಸ್ಥಾಪಿಸುವ ಚಿಂತನೆಯಿದೆ ಎಂದರು.

ಅನುದಾನ ಮತ್ತು ಭೂಮಿ ರಾಜ್ಯ ಸರ್ಕಾರದ್ದು. ಶೇ.50ರಷ್ಟು ಕರ್ನಾಟಕದ ಎಸ್ಸಿ, ಎಸ್ಟಿ ಮಕ್ಕಳಿಗೆ ಪ್ರವೇಶ ನೀಡಬೇಕು. ಉಳಿದಂತೆ ಅವರ ನಿಯಮಗಳ ಪ್ರಕಾರ ಪ್ರವೇಶಾವಕಾಶಗಳನ್ನು ಕೊಡಬಹುದು. ಈ ಬಗ್ಗೆ ಮಿಲಿಟರಿಯರವನ್ನು ಸಂಪರ್ಕ ಮಾಡುತ್ತೇವೆ ಎಂದರು.

ಇದನ್ನೂ ಓದಿ:ತಲಕಾವೇರಿಯಲ್ಲಿ ಪ್ರವಾಸಿಗರ ಉಪಟಳ ತಡೆಗೆ ಕ್ರಮ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ

ಎಸ್ಸಿ, ಎಸ್ಟಿ ಸಮುದಾಯಗಳಿಗೆ ಮೀಸಲಿಟ್ಟ ಶೇ.24ರಷ್ಟು ಎಸ್‌ಸಿಪಿ, ಟಿಎಸ್‌ಪಿ ಅನುದಾನ ದುರ್ಬಳಕೆ ಆಗಬಾರದು. ಅಂದಾಜು 29 ಸಾವಿರ ಕೋಟಿ ರೂ. ಹಣ ಇದೆ. ಈ ಅನುದಾನವನ್ನು ಹೆಚ್ಚಾಗಿ ಚರಂಡಿ, ರಸ್ತೆಗಳಿಗೆ ಬಳಕೆಯಾಗುತ್ತಿದೆ. ಇದು ಅನೇಕ ವರ್ಷಗಳಿಂದ ನಡೆದುಕೊಂಡು ಬಂದಿದೆ. ನಾನು ಬಂದ ಮೇಲೆ ಈ ಹಣದಲ್ಲಿ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದೇನೆ. ತಲಾ 20-25 ಕೋಟಿ ರೂ. ವೆಚ್ಚದಲ್ಲಿ 173 ವಸತಿ ಶಾಲೆಗಳ ಸಂಕೀರ್ಣ ನಿರ್ಮಾಣಕ್ಕೆ ಯೋಜನೆ ಹಾಕಿಕೊಳ್ಳಲಾಗಿದೆ. ಈಗಾಗಲೇ 68 ಸಂಕೀರ್ಣ ಗಳು ಸ್ವಾಧೀನಾನುಭವಕ್ಕೆ ಸಿದ್ಧಗೊಂಡಿವೆ ಎಂದು ಹೇಳಿದರು.

ಬಿಜೆಪಿ ಸದಸ್ಯ ಎಚ್‌. ವಿಶ್ವನಾಥ್‌, 2014ರಲ್ಲಿ ಕಾಯ್ದೆ ತಂದು ಸಿದ್ದರಾಮಯ್ಯನವರು ಹಣ ಕೊಟ್ಟರು. ಆದರೆ, ಯೋಜನೆಗಳನ್ನು ನೀಡಿಲ್ಲ. ಈಗಿನ ಸಚಿವರು ಯೋಜನೆಗಳನ್ನು ಹೇಳುತ್ತಿದ್ದಾರೆ. ಕಾಯ್ದೆ ಬಹಳ ಸ್ಪಷ್ಟವಾಗಿದೆ. ಆದರೆ, ಕಾರ್ಯಕ್ರಮಗಳೇ ಇಲ್ಲವೆಂದರೆ ಕಾಯ್ದೆ ಇದ್ದರೇನು? ಹಣ ಕೊಟ್ಟರೇನು? ಈವರೆಗೆ 1 ಲಕ್ಷ ಕೋಟಿ ರೂ. ಹಣ ಹರಿದು ಹೋಗಿದೆ. ದಲಿತ ಸಮುದಾಯದ ಶಾಸಕರಿಗೆ ಇದೆಲ್ಲ ಗೊತ್ತಾಗುವುದಿಲ್ಲವೇ? ಅವರಿಗೆ ತಿಳಿವಳಿಕೆ ಇಲ್ಲವೇ? ಅವರನ್ನು ಕರೆದು ಸಭೆಗಳನ್ನು ನಡೆಸಬಹುದಿತ್ತಲ್ಲ ಎಂದರು. ದಲಿತ ಮಕ್ಕಳಿಗೆ ಸೈನಿಕ ಶಾಲೆ ಸ್ಥಾಪಿಸುವ ಉಪಮುಖ್ಯಮಂತ್ರಿಗಳ ಚಿಂತನೆಗೆ ಪ್ರತಿಪಕ್ಷ ನಾಯಕ ಎಸ್‌.ಆರ್‌. ಪಾಟೀಲ್‌ ಮೆಚ್ಚುಗೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.