ಮಂಗಳೂರು ವಲಯದ ನೂತನ ಬಿಷಪ್ ವಂ. ಫಾ.ಪೀಟರ್ ಪೌಲ್ ನೇಮಕ
Team Udayavani, Jul 3, 2018, 6:02 PM IST
ಮಂಗಳೂರು: ಮಂಗಳೂರು ಧರ್ಮಪ್ರಾಂತ್ಯದ ವಲಯಕ್ಕೆ ಫಾ.ಪೀಟರ್ ಪೌಲ್ ಸಲ್ಡಾನಾ ಅವರನ್ನು ನೂತನ ಬಿಷಪ್ ಆಗಿ ವ್ಯಾಟಿಕನ್ ಮಂಗಳವಾರ ನೇಮಕ ಮಾಡಿದೆ.
ಇಂದು ವ್ಯಾಟಿಕನ್ ಕೈಗೊಂಡ ನಿರ್ಧಾರವನ್ನು ಬಿಷಪ್ ಅವರ ನಿವಾಸದಲ್ಲಿ ಘೋಷಿಸಲಾಯಿತು ಎಂದು ಮೂಲಗಳು ತಿಳಿಸಿವೆ. ಫಾದರ್ ಪೀಟರ್ ಅವರು ಮಂಗಳೂರು ಪ್ರಾಂತ್ಯದ 14ನೇ ಬಿಷಪ್ ಆಗಿದ್ದಾರೆ.
ರೋಮಿನ ಪೊಂತಿಫಿಕಾಲ್ ಉರ್ಬನ್ ವಿಶ್ವವಿದ್ಯಾಲಯದಲ್ಲಿ ದೇವತಾಶಾಸ್ತ್ರದಲ್ಲಿ ಪ್ರಾಧ್ಯಾಪಕರಾಗಿರುವ ಅತೀ ವಂ.ಡಾ.ಪೀಟರ್ ಸಲ್ಡಾನಾ ಅವರನ್ನು ಮಂಗಳೂರು ಧರ್ಮಪ್ರಾಂತ್ಯದ ನೂತನ ಬಿಷಪ್ ಆಗಿ ವ್ಯಾಟಿಕನ್ ನ ಪರಮೋಚ್ಛ ಧಾರ್ಮಿಕ ಗುರು ಪೋಪ್ ಫ್ರಾನ್ಸಿಸ್ ಅವರು ನೇಮಕ ಮಾಡಿದ್ದಾರೆ.
ಪೂಜ್ಯ ಫಾ.ಪೀಟರ್ ಅವರು 1991ರ ಮೇ 6ರಂದು ಗುರು ದೀಕ್ಷೆ ಪಡೆದು ಉಡುಪಿ ಜಿಲ್ಲೆಯ ಮೂಡುಬೆಳ್ಳೆ ಹಾಗೂ ಮಂಗಳೂರಿನ ಮಿಲಾಗ್ರಿಸ್, ವಿಟ್ಲ್ ಚರ್ಚ್ ಗಳಲ್ಲಿ ಸೇವೆ ಸಲ್ಲಿಸಿದ್ದರು. ತದನಂತರ ಉನ್ನತ ವ್ಯಾಸಂಗಕ್ಕಾಗಿ ರೋಮ್ ಗೆ ತೆರಳಿದ್ದರು. ಅಲ್ಲಿನ ಉರ್ಬನ್ ವಿಶ್ವವಿದ್ಯಾಲಯದಲ್ಲಿ ಡಾಕ್ಟರೇಟ್ ಪದವಿ ಪಡೆದು, ಅಲ್ಲಿಯೇ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ
ಪ್ರವಾಹದ ನೀರಿನಲ್ಲಿ ಪಂಪ್ ಸೆಟ್ ತರಲು ಹೋದ ರೈತರು… ನೀರಿಗಿಳಿಯದಂತೆ ಮನವಿ ಮಾಡಿದ ಸಚಿವರು
ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.