ಎಸಿಬಿ ಹೆಸರಿನಲ್ಲಿ ವಂಚನೆ: ಬಿಡಿಎ ಅಧಿಕಾರಿಗಳಿಗೆ ವಂಚನೆ; ಮೂವರ ಬಂಧನ


Team Udayavani, Mar 17, 2022, 11:30 PM IST

ಎಸಿಬಿ ಹೆಸರಿನಲ್ಲಿ ವಂಚನೆ: ಬಿಡಿಎ ಅಧಿಕಾರಿಗಳಿಗೆ ವಂಚನೆ; ಮೂವರ ಬಂಧನ

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಅಧಿಕಾರಿಗಳಿಂದ ದಾಳಿಗೊಳಗಾಗಿದ್ದ ಬಿಡಿಎ ಅಧಿಕಾರಿಗಳಿಗೆ ಪ್ರಕರಣದಲ್ಲಿ ಆರೋಪ ಮುಕ್ತಗೊಳಿಸುವುದಾಗಿ ನಂಬಿಸಿ ಹತ್ತು ಲಕ್ಷ ರೂ. ವಂಚಿಸಿದ ಮೂವರು ಹೈಗ್ರೌಂಡ್ಸ್‌ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಬನಶಂಕರಿ ನಿವಾಸಿ ಪ್ರವೀಣ್‌(27), ನಾಗರಭಾವಿ ನಿವಾಸಿ ಚೇತನ್‌(33) ಮತ್ತು ದೊಮ್ಮಲೂರು ನಿವಾಸಿ ಮನೋಜ್‌ ಕುಮಾರ್‌ (46) ಬಂಧಿತರು.

ವಿಜಯ್‌ಕುಮಾರ್‌ ಎಂಬಾತ ತಲೆಮರೆಸಿಕೊಂಡಿದ್ದು, ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.

ಆರೋಪಿಗಳ ಪೈಕಿ ಚೇತನ್‌ ಬಿಡಿಎ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಂಪ್ಯೂಟರ್‌ ಆಪರೇಟರ್‌ ಆಗಿ ಕೆಲಸ ಮಾಡುತ್ತಿದ್ದಾನೆ. ಇತರೆ ಆರೋಪಿಗಳು ರಿಯಲ್‌ ಎಸ್ಟೇಟ್‌ ವ್ಯವಹಾರ ನಡೆಸುತ್ತಿದ್ದಾರೆ.

ಇತ್ತೀಚೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲೆ ಎಸಿಬಿ ಅಧಿಕಾರಿಗಳು,ಮಹದೇವಗೌಡ, ಗೋವಿಂದರಾಜು ಮತ್ತು ಅರವಿಂದ್‌ ಎಂಬವರ ಮೇಲೆ ದಾಳಿ ನಡೆಸಿದ್ದರು.

ಈ ವಿಚಾರ ತಿಳಿದ ಆರೋಪಿ ಚೇತನ್‌, ತನ್ನ ಸಹಚರರಿಗೆ ತಮ್ಮ ಕಚೇರಿಯ ಅಧಿಕಾರಿಗಳ ಮೊಬೈಲ್‌ ನೀಡಿ, ವಂಚನೆಗೆ ಸಂಚು ರೂಪಿಸಿದ್ದ. ಹೀಗಾಗಿ ಆರೋಪಿಗಳು ಕೆಲ ದಿನಗಳ ಹಿಂದೆ ಮೂವರು ದಾಳಿಗೊಳಗಾದ ಬಿಡಿಎ ಅಧಿಕಾರಿಗಳ ಪೈಕಿ ಅರವಿಂದ್‌ರನ್ನು ಸಂಪರ್ಕಿಸಿದ್ದು, ಎಸಿಬಿಯಲ್ಲಿ ಹಿರಿಯ ಅಧಿಕಾರಿಗಳ ಪರಿಚಯವಿದ್ದು, ತಮ್ಮ ಮೇಲಿನ ಆರೋಪ ಮುಕ್ತಗೊಳಿಸುತ್ತೇವೆ. ಅದಕ್ಕಾಗಿ 10 ಲಕ್ಷ ರೂ. ಕೊಡಬೇಕೆಂದು ಬೇಡಿಕೆ ಇಟ್ಟಿದ್ದರು. ಬಳಿಕ ಅರವಿಂದ್‌ ಇತರೆ ಇಬ್ಬರು ಅಧಿಕಾರಿಗಳ ಜತೆ ಚರ್ಚಿಸಿ, ಆರೋಪಿಗಳಿಗೆ ಸದಾಶಿವನಗರದ ಹೋಟೆಲ್‌ವೊಂದರಲ್ಲಿ ಹತ್ತು ಲಕ್ಷ ರೂ. ನೀಡಿದ್ದರು.ಕೆಲ ದಿನಗಳ ನಂತರ ಆರೋಪಿಗಳಿಗೆ ಎಸಿಬಿಯಲ್ಲಿ ಯಾವುದೇ ಅಧಿಕಾರಿಗಳು ಪರಿಚಯವಿಲ್ಲ ಎಂಬುದು ಗೊತ್ತಾಗಿದೆ. ಹಣ ವಾಪಸ್‌ಗೆ ಕರೆ ಮಾಡಿದಾಗ, ಬೆದರಿಕೆ ಹಾಕಿದ್ದಾರೆ. ನಂತರ ಫೋನ್‌ ಸ್ವಿಚ್‌x ಆಫ್ ಮಾಡಿಕೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಅರವಿಂದ್‌ ದೂರು ನೀಡಿದ್ದರು. ಮೂವರ ಬಂಧಿಲಾಗಿದೆ. ಮತ್ತೂಬ್ಬನಿಗಾಗಿ ಶೋಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಕೆಐಎಡಿಬಿ ಅಧಿಕಾರಿಗೆ ವಂಚನೆ :

ಮತ್ತೂಂದು ಪ್ರಕರಣದಲ್ಲಿ ಎಸಿಬಿ ದಾಳಿಗೊಳಗಾಗಿದ್ದ ಕೆಐಎಡಿಬಿ ಅಧಿಕಾರಿಯೊಬ್ಬರಿಗೆ ಪ್ರಕರಣದಲ್ಲಿ ಆರೋಪ ಮುಕ್ತಗೊಳಿಸುವುದಾಗಿ ನಂಬಿಲಿ ಒಂದೂವರೆ ಲಕ್ಷ ರೂ. ಪಡೆದುಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ.

ಸ್ಥಳೀಯ ನಿವಾಸಿ ಧರ್ಮೇಂದ್ರ (35) ಬಂಧಿತ. ಆರೋಪಿ ಇತ್ತೀಚೆಗೆ ಕೆಐಎಡಿಬಿ ಅಧಿಕಾರಿಯೊಬ್ಬರ ಮೇಲೆ ದಾಳಿ ನಡೆಸಲಾಗಿತ್ತು. ಅವರನ್ನು ಸಂಪರ್ಕಿಸಿದ ಧರ್ಮೇಂದ್ರ ಒಂದೂವರೆ ಲಕ್ಷ ರೂ. ನೀಡಿದರೆ ಆರೋಪ ಮುಕ್ತಗೊಳಿಸಲು ಸಹಾಯ ಮಾಡುತ್ತೇನೆ ಎಂದು ಹಣ ಪಡೆದುಕೊಂಡು ವಂಚಿಸಿದ್ದ ಎಂದು ಪೊಲೀಸರು ಹೇಳಿದರು.

ಈ ರೀತಿಯ ವಂಚನೆಗಳ ಬಗ್ಗೆ ಸರ್ಕಾರಿ ಅಧಿಕಾರಿಗಳು ಮತ್ತು ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ಎಸಿಬಿ ಮನವಿ ಮಾಡಿದೆ. ಇತ್ತೀಚೆಗೆ ಎಸಿಬಿ ಹೆಸರಿನಲ್ಲಿ ಕೆಲ ವ್ಯಕ್ತಿಗಳು ಎಸಿಬಿ ದಾಳಿಗೊಳಗಾದ ಅಧಿಕಾರಿಗಳನ್ನು ಸಂಪರ್ಕಿಸಿ, ಪ್ರಕರಣದಲ್ಲಿ ಸಹಾಯ ಮಾಡುವುದಾಗಿ ನಂಬಿಸಿ ವಂಚಿಸುತ್ತಿದ್ದಾರೆ. ಹೀಗಾಗಿ ಸರ್ಕಾರಿ ಅಧಿಕಾರಿಗಳು ಇಂತಹ ವ್ಯಕ್ತಿಗಳ ಬಗ್ಗೆ ಜಾಗೃತರಾಗಿರಬೇಕು. ಯಾರಾದರೂ ಅಪರಿಚಿತ ವ್ಯಕ್ತಿಗಳು ಹಣಕ್ಕೆ ಬೇಡಿಕೆ ಇಟ್ಟರೆ ಕಚೇರಿಗೆ ಮಾಹಿತಿ ನೀಡುವಂತೆ ಎಸಿಬಿ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಕೆಲ ದಿನಗಳ ಹಿಂದೆ ನಿರ್ಮಿತಿ ಕೇಂದ್ರದ ಅಧಿಕಾರಿಯೊಬ್ಬರಿಗೆ ಅಪರಿಚಿತ ವ್ಯಕ್ತಿಯೊಬ್ಬ ಎಸಿಬಿಯಲ್ಲಿ ದೂರು ನೀಡುವುದಾಗಿ ಬ್ಲ್ಯಾಕ್‌ಮೇಲ್‌ ಮಾಡಿದ್ದಾನೆ. ಈ ಸಂಬಂಧ ಹಲಸೂರು ಗೇಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸಿಬಿ ತಿಳಿಸಿದೆ.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.