ಕಂಪನಿ ವಸ್ತು ಖರೀದಿಸಿದ್ರೆ ಉಚಿತ ಪ್ರವಾಸದ ಆಫರ್‌: ಕೋರ್ಟ್‌ ಮೆಟ್ಟಿಲೇರಿದ ಮಹಿಳೆ

ಟೂರ್‌ ನೆಪದಲ್ಲಿ ವಂಚನೆ: 2.5 ಲಕ್ಷ ಪಾವತಿಗೆ ಆದೇಶ

Team Udayavani, Jun 23, 2022, 10:20 AM IST

2Fraud

ಬೆಂಗಳೂರು: ನಮ್ಮ ಕಂಪನಿಯ ವಸ್ತುವನ್ನು ಖರೀದಿಸಿದವರಿಗೆ ಉಚಿತ ಪ್ರವಾಸದ ಟಿಕೆಟ್‌ ನೀಡುತ್ತಿದ್ದೆವೆ. ದಂಪತಿಗಳು ಬಂದು ಗಿಫ್ಟ್ ಓಚರ್‌ ಪಡೆದುಕೊಳ್ಳಿ ಎಂದು ಕರೆದು ವಂಚಿಸಿರುವ ಬಗ್ಗೆ ಮಹಿಳೆಯೊಬ್ಬರು ಗ್ರಾಹಕ ನ್ಯಾಯಾಲಯದ ಮೆಟ್ಟಿಲೇರಿದ್ದು, ಬಡ್ಡಿ ಸಹಿತ ಪರಿಹಾರ ನೀಡಲು ಆದೇಶಿದೆ.

ಮಹಿಳೆಯೊಬ್ಬರಿಗೆ ನವದೆಹಲಿ ಮೂಲದ ಟೂರ್ ಆ್ಯಂಡ್‌ ಟ್ರಾವಲ್‌ ಸಂಸ್ಥೆಯು ಮೂರು ದಿನದ ದಂಪತಿಗಳ ಉಚಿತ ಪ್ರವಾಸದ ಟಿಕೆಟ್‌ ನೀಡುವುದಾಗಿ ಆಮಿಷವೊಡ್ಡಿ 2.50 ಲಕ್ಷ ರೂ. ಪಡೆದು ವಂಚಿಸಿತ್ತು. 2.50 ಲಕ್ಷ ರೂ.ಗೆ ಶೇ.12 ಬಡ್ಡಿ ಹಾಗೂ ಮಾನಸಿಕ ಕಿರುಕುಳಕ್ಕೆ 10,000 ರೂ. ಹಾಗೂ 5,000 ರೂ.ಪಾವತಿಸುವಂತೆ ತೀರ್ಪು ನೀಡಲಾಗಿದೆ.

ಎಲೆಕ್ಟ್ರಾನಿಕ್‌ ಸಿಟಿ ನಿವಾಸಿ ಶರಣ್ಯ ಹರಿಕೃಷ್ಣ ಅವರಿಗೆ ನವ ದೆಹಲಿ ಮೂಲದ ಟೂರ್ ಆ್ಯಂಡ್‌ ಟ್ರಾವಲ್ಸ್‌ ಕಂಪನಿಯೊಂದರ ಸಿಬ್ಬಂದಿ ಕರೆ ಮಾಡಿ, ಪ್ರವಾಸ ಸಂಬಂಧಿಸಿದ ಸಭೆಯೊಂದು ನಡೆಯಲಿದೆ. ಇದರಲ್ಲಿ ಭಾಗವಹಿಸಿದರೆ 10,000 ರೂ. ವೆಚ್ಚದ ಟೂರ್‌ ಗಿಫ್ಟ್ ಜತೆಗೆ ಜೋಡಿಗೆ ಉಚಿತ ಚಲನಚಿತ್ರದ ಟಿಕೆಟ್‌ ನೀಡಲಾಗುತ್ತದೆ. ಇದರಲ್ಲಿ ಯಾವುದೇ ಒಳ ಷರತ್ತುಗಳಿಲ್ಲ ಎನ್ನುವುದಾಗಿ ತಿಳಿಸಿ, ವಾಟ್ಸಾಪ್‌ ಮೂಲಕ ವಿಳಾಸ ನೀಡಿದ್ದರು.

ಇದನ್ನೂ ಓದಿ:  ಕೊಡಗು, ಹಾಸನದ ಹಲವೆಡೆ ಭೂಕಂಪನ: ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆ ದಾಖಲು

ಕಾರ್ಯಕ್ರಮದಲ್ಲಿ ಭಾಗವಹಿಸಿದ ಶರಣ್ಯ ಅವರಿಗೆ ಯಾವುದೇ ರೀತಿಯಾದ ಮಾಹಿತಿ ನೀಡದೆ, ದಾಖಲೆಯನ್ನು ಪರಿಶೀಲಿಸಲು ಅವಕಾಶ ನೀಡದೆ ಒತ್ತಾಯಪೂರ್ವಕವಾಗಿ ಸಹಿ ಪಡೆದುಕೊಂಡಿದ್ದರು. ಸದಸ್ಯತ್ವ ನೀಡುವುದಾಗಿ ಆಮಿಷವೊಡ್ಡಿ ದೂರುದಾರರಿಂದ ಟೂರ್ ಟ್ರಾವೆಲ್ಸ್‌ ಸಂಸ್ಥೆ 2.50 ಲಕ್ಷ ರೂ. ಪಡೆದುಕೊಂಡಿದೆ. ಸದಸ್ಯತ್ವದ ಹಣವನ್ನು ಮರುಪಾವತಿಸುವುದಾಗಿ ಭರವಸೆ ನೀಡುವುದರ ಜತೆಗೆ ಒಪ್ಪಂದ ಪ್ರತಿಯನ್ನು ಇ-ಮೇಲ್‌ ಮೂಲಕ ಕಳುಹಿಸುವುದಾಗಿ ತಿಳಿಸಿದ್ದರು. ಇದಾದ ಬಳಿಕ ಟೂರ್‌ ಟ್ರಾವಲ್ಸ್‌ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಮಹಿಳೆಯು ಗ್ರಾಹಕರ ನ್ಯಾಯಾಲಯದ ಮೆಟ್ಟಿಲೇರಿದ್ದು, ಪ್ರಕರಣವನ್ನು ಸ್ವತಃ ಮಂಡಿಸಿದ್ದಾರೆ. ವಾದ ವಿವಾದ ಆಲಿಸಿದ ಬೆಂಗಳೂರು ಗ್ರಾಮೀಣ ಹಾಗೂ ನಗರ ಹೆಚ್ಚುವರಿ ಒಂದೇ ನ್ಯಾಯಾಲಯವು ಈ ತೀರ್ಪು ನೀಡಿದೆ.

ಟಾಪ್ ನ್ಯೂಸ್

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.