ಫೇಸ್ಬುಕ್ ಸರಿಪಡಿಸಿ ಕೊಡುವುದಾಗಿ ವಂಚನೆ
Team Udayavani, Jan 16, 2022, 10:20 PM IST
ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್ಬುಕ್ ಅನ್ನು ರಿಸೆಟ್ ಮಾಡಿಕೊಡುವುದಾಗಿ ಹೇಳಿ ಲಕ್ಷಾಂತರ ರೂ. ದೋಚಿರುವ ಪ್ರಕರಣ ಬೆಳಕಿಗೆ ಬಂದಿದೆ.
ಈ ಸಂಬಂಧ ದೇವರಚಿಕ್ಕನಹಳ್ಳಿ ನಿವಾಸಿ ಮಹತಾಬ್ ಆಲಂ ಅವರು ದೂರು ನೀಡಿದ ಮೇರೆಗೆ ಅಪರಿಚಿತ ವ್ಯಕ್ತಿಯ ವಿರುದ್ಧ ವೈಟ್ಫೀಲ್ಡ್ ವಿಭಾಗ ಸೆನ್ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಮಹತಾಬ್ ಆಲಂ ಅವರ ಸಾಮಾಜಿಕ ಜಾಲತಾಣ ಫೇಸ್ಬುಕ್ ಬ್ಲಾಕ್ ಆಗಿತ್ತು. ಹೀಗಾಗಿ ಗೂಗಲ್ನಲ್ಲಿ ಫೇಸ್ಬುಕ್ ಕಸ್ಟಮರ್ ಕೇರ್ ನಂಬರ್ ಸರ್ಚ್ ಮಾಡಿದಾಗ ಎರಡು ಮೊಬೈಲ್ ನಂಬರ್ಗಳು ಸಿಕ್ಕಿದ್ದು, ಕರೆ ಮಾಡಿದ್ದಾರೆ.
ಇದನ್ನೂ ಓದಿ:ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಸಾಧ್ಯವಿಲ್ಲ: ಡಾ| ಅಶ್ವತ್ಥ ನಾರಾಯಣ
ಕರೆ ಸ್ವೀಕರಿಸಿದ ಅಪರಿಚಿತ ವ್ಯಕ್ತಿ, ಲಿಂಕೊಂದನ್ನು ಕಳುಹಿಸುತ್ತೇನೆ. ಅದಕ್ಕೆ ಎರಡು ರೂ. ವರ್ಗಾವಣೆ ಮಾಡುವಂತೆ ಸೂಚಿಸಿದ್ದಾನೆ. ಅದನ್ನು ನಂಬಿದ ಆಲಂ, ಆರೋಪಿ ಕಳುಹಿಸಿದ ಲಿಂಕ್ ಅನ್ನು ಕ್ಲಿಕ್ ಮಾಡಿ, ತಮ್ಮ ಖಾತೆಗೆ ಲಿಂಕ್ ಇರುವ ಮೊಬೈಲ್ ನಂಬರ್ ಮತ್ತು ಪಿನ್ ಅನ್ನು ಇನಿಷಿಯೇಟ್ ಮಾಡುತ್ತಿದ್ದಂತೆ ಎರಡು ಬ್ಯಾಂಕ್ ಖಾತೆಗಳಿಂದ 1,20 ಲಕ್ಷ ರೂ. ಹಂತ-ಹಂತವಾಗಿ ಕಡಿತಗೊಂಡಿದೆ.
ಈ ಸಂಬಂಧ ಆಲಂ ದೂರು ನೀಡಿದ್ದಾರೆ. ತನಿಖೆ ಮುಂದುವರಿದಿದೆ ಎಂದು ಸೆನ್ ಠಾಣೆ ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ : ಐದು ಮಂದಿ ಪ್ರಾಣಾಪಾಯದಿಂದ ಪಾರು
ಅರ್ಚಕರ ನಿರ್ಲಕ್ಷ್ಯ : ದೇವರ ದರ್ಶಕ್ಕಾಗಿ ಕಾದು ಕಾದು ಸುಸ್ತಾದ ತೆಲುಗು ನಟ ನಾಗಿನೀಡು ಕುಟುಂಬ
ಬಾಗಲಕೋಟೆ : ಗುಂಡು ಹಾರಿಸಿಕೊಂಡು ಕಡ್ಡಾಯ ನಿವೃತ್ತಿ ಹೊಂದಿದ್ದ ನ್ಯಾಯಾಧೀಶ ಆತ್ಮಹತ್ಯೆ
ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಳ : ರೈತರ ಮೊಗದಲ್ಲಿ ಮಂದಹಾಸ
ವಿದ್ಯುತ್ ವ್ಯತ್ಯಯ :ಮೆಸ್ಕಾಂ ಸಿಬ್ಬಂದಿ ಮೇಲೆ ತಂಡದಿಂದ ಹಲ್ಲೆ! ದೃಶ್ಯ ಸಿಸಿಟಿವಿಯಲ್ಲಿ ಸೆರೆ