ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಪುನರಾರಂಭ

5 ತಿಂಗಳಿನಿಂದ ಸ್ಥಗಿತ; ಅರೆಗತ್ತಲಿನಲ್ಲಿ ಕಾಯುತ್ತಿರುವ ಲಕ್ಷಾಂತರ ಮಂದಿ

Team Udayavani, Aug 27, 2020, 6:17 AM IST

ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಪುನರಾರಂಭ

ಬೆಂಗಳೂರು: ಕೋವಿಡ್‌ ಹಿನ್ನೆಲೆಯಲ್ಲಿ ಸರಕಾರಿ ಆಸ್ಪತ್ರೆಗಳಲ್ಲಿ ಐದು ತಿಂಗಳಿನಿಂದ ಸ್ಥಗಿತಗೊಂಡಿದ್ದ ಉಚಿತ ಕಣ್ಣಿನ ಪೊರೆ (ಕ್ಯಾಟರ್ಯಾಕ್ಟ್) ಶಸ್ತ್ರಚಿಕಿತ್ಸೆಯನ್ನು ಸೆಪ್ಟಂಬರ್‌ನಲ್ಲಿ ಪುನರಾರಂಭಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಇದರಿಂದ ರಾಜ್ಯದ 1 ಲಕ್ಷಕ್ಕೂ ಅಧಿಕ ಬಡ ವಯೋವೃದ್ಧರಿಗೆ ಅನುಕೂಲವಾಗಲಿದೆ.

ರಾಜ್ಯದ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್‌ 2ನೇ ವಾರ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಯುತ್ತಿತ್ತು. ಸರಾಸರಿ 30 ಸಾವಿರ ಫ‌ಲಾನುಭವಿಗಳಿದ್ದರು. ಈಗ ಮತ್ತೆ ಎಲ್ಲ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆ ನಡೆಸಲು ಅಗತ್ಯ ತಯಾರಿ ಮಾಡಿಕೊಳ್ಳಲಾಗುತ್ತಿದೆ’ ಎಂದು ಆರೋಗ್ಯ ಇಲಾಖೆ ಹಿರಿಯ ವೈದ್ಯಾಧಿಕಾರಿ ಡಾ| ಜಿ.ಎನ್‌. ರಜನಿ ತಿಳಿಸಿದ್ದಾರೆ.

ಕಾಯುತ್ತಿದ್ದ ಜನತೆ
ಖಾಸಗಿ ಕಣ್ಣಿನ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆ ಲಭ್ಯವಿದ್ದು, ಕನಿಷ್ಠ 20 ಸಾವಿರದಿಂದ ಗರಿಷ್ಠ 1.5 ಲಕ್ಷ ರೂ. ಶುಲ್ಕವಿದೆ. ಆರ್ಥಿಕವಾಗಿ ಹಿಂದುಳಿದವರಿಗೆ ಇದು ಅಸಾಧ್ಯವಾಗಿದ್ದು, ಸರಕಾರಿ ಆಸ್ಪತ್ರೆಗಳಲ್ಲಿ ಆರಂಭವಾಗುವುದನ್ನೇ ಎದುರು ನೋಡುತ್ತಿದ್ದರು.

ಕಳೆದ ವರ್ಷ ಇದೇ ಅವಧಿಯಲ್ಲಿ 1.61 ಲಕ್ಷ ಶಸ್ತ್ರಚಿಕಿತ್ಸೆ
ರಾಷ್ಟ್ರೀಯ ಅಂಧತ್ವ ನಿವಾರಣೆ ಕಾರ್ಯಕ್ರಮದಡಿ 2019-20ರಲ್ಲಿ ರಾಜ್ಯಾದ್ಯಂತ 3,61,711 ಉಚಿತ ಶಸ್ತ್ರಚಿಕಿತ್ಸೆಗಳು ನಡೆದಿದ್ದವು. 2019ರ ಎಪ್ರಿಲ್‌ನಿಂದ ಆಗಸ್ಟ್‌ ವರೆಗೆ 1,61,067 ಮಂದಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಪ್ರತಿ ತಿಂಗಳು ಸರಾಸರಿ 32 ಸಾವಿರ ಮಂದಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಏನಿದು ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ?
ವಯೋಸಹಜ ಅಥವಾ ದೀರ್ಘ‌ ಕಾಲದ ಮಧುಮೇಹದಿಂದ ಬಳಲು ತ್ತಿರು ವವ ರಿಗೆ ಕಣ್ಣಿನ ಮಸೂರ (ಲೆನ್ಸ್‌) ಮಂಜಾಗುವುದನ್ನೇ ಕಣ್ಣಿಗೆ ಪೊರೆ ಬಂದಿರುವುದು ಎನ್ನುತ್ತಾರೆ. ಶಸ್ತ್ರಚಿಕಿತ್ಸೆ ಮೂಲಕ ಮಸೂರ ಭಾಗವನ್ನು ತೆಗೆದು ಕೃತಕ ಮಸೂರ ಅಳವಡಿಸಲಾಗುತ್ತದೆ. ಇದು ಹೆಚ್ಚು ನೋವಿಲ್ಲದ ಶಸ್ತ್ರಚಿಕಿತ್ಸೆಯಾಗಿದ್ದು, ಒಟ್ಟಾರೆ ಪ್ರಕ್ರಿಯೆಗೆ 3-4 ಗಂಟೆ ಸಾಕು. ಶಸ್ತ್ರಚಿಕಿತ್ಸೆಗೊಳಗಾದವರು ಮರುದಿನ ದಿಂದಲೇ ದೈನಂದಿನ ಚಟುವಟಿಕೆ ಆರಂಭಿಸಬಹುದು ಎನ್ನುತ್ತಾರೆ ಕಣ್ಣಿನ ತಜ್ಞರು.

ಕೇಂದ್ರ ಸರಕಾರ ಚಿಕ್ಕ ಪ್ರಮಾಣದ ಡೇ ಕೇರ್‌ ಶಸ್ತ್ರಚಿಕಿತ್ಸೆಗಳಿಗೆ ಅನುಮತಿ ನೀಡಿದೆ. ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಡೇ ಕೇರ್‌ ವ್ಯಾಪ್ತಿಗೆ ಬರಲಿದ್ದು, ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಸೆಪ್ಟಂಬರ್‌ನಲ್ಲಿ ಪುನರಾರಂಭಿಸ ಲಾಗುವುದು.
– ಡಾ| ಓಂಪ್ರಕಾಶ್‌ ಪಾಟೀಲ್‌,ನಿರ್ದೇಶಕರು, ಆರೋಗ್ಯ ಇಲಾಖೆ

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.