ಜನಪ್ರತಿನಿಧಿಗಳ ಮೋಜಿಗೆ ಉಚಿತ ಸದಸ್ಯತ್ವದ ಬೇಡಿಕೆ


Team Udayavani, Feb 8, 2017, 3:45 AM IST

07-STATE-10.jpg

ವಿಧಾನಸಭೆ: ರಾಜ್ಯದಲ್ಲಿರುವ ಖಾಸಗಿ ಕ್ಲಬ್‌ಗಳಲ್ಲಿ ಶಾಸಕರು, ಸಂಸದರು ಹಾಗೂ ವಿಧಾನಪರಿಷತ್‌ ಸದಸ್ಯರಿಗೆ ಉಚಿತವಾಗಿ “ಗೌರವ ಸದಸ್ಯತ್ವ’ ಕೊಡಬೇಕು ಎಂದು ವಿಧಾನಸಭೆಯ ಕ್ಲಬ್‌ ಸದನ ಸಮಿತಿ ಶಿಫಾರಸು ಮಾಡಿದೆ.

ಕ್ಲಬ್‌ಗಳ ನಿಯಂತ್ರಣ ಕುರಿತು ಶಾಸಕ ಎನ್‌.ಎ.ಹ್ಯಾರಿಸ್‌ ಅಧ್ಯಕ್ಷತೆಯಲ್ಲಿ ರಚಿಸಿದ್ದ ಸದನ ಸಮಿತಿ ಮಂಗಳವಾರ ಸದನದಲ್ಲಿ ವರದಿ ಮಂಡಿಸಿದೆ. ರಾಜಧಾನಿ ಬೆಂಗಳೂರಿನ ಕೆಲವು ಕ್ಲಬ್‌ಗಳಲ್ಲಿ ಸದಸ್ಯತ್ವ ಸಿಗುವುದೇ ಕಷ್ಟ. ಉಳಿದಂತೆ ಬೆಂಗಳೂರು ಸೇರಿದಂತೆ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿರುವ ಖಾಸಗಿ ಕ್ಲಬ್‌ಗಳಲ್ಲಿ ಸದಸ್ಯತ್ವ ಪಡೆಯಲು ಕನಿಷ್ಟ 1 ಲಕ್ಷ ರೂ.ನಿಂದ 25 ಲಕ್ಷ ರೂ.ವರೆಗೆ ಸದಸ್ಯತ್ವ ಶುಲ್ಕ ಇದೆ. ಶಾಸಕರು, ಸಂಸದರು ಹಾಗೂ ವಿಧಾನಪರಿಷತ್‌ ಸದಸ್ಯರಿಗೆ ಶುಲ್ಕ ಅನ್ವಯವಾಗಬಾರದು.

ಶಾಸಕರು, ಸಂಸದರು, ವಿಧಾನಪರಿಷತ್‌ ಸದಸ್ಯರಿಗೆ ಖಾಸಗಿ ಕ್ಲಬ್‌ಗಳಲ್ಲಿ ಉಚಿತ ಸದಸ್ಯತ್ವ ಕೊಡಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಆದೇಶ ಹೊರಡಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳಿಗೆ ವಿಶೇಷ ಹಕ್ಕು ಮತ್ತು ವಿನಾಯಿತಿ ಇರುವ ಹಿನ್ನೆಲೆಯಲ್ಲಿ ಆಯಾ ಪ್ರದೇಶಾವಾರು ಜನಪ್ರತಿನಿಧಿಗಳು ಕ್ಲಬ್‌ಗಳಲ್ಲಿ ಸದಸ್ಯರಾಗಬಯಸಿದಲ್ಲಿ ಅಂತವರಿಗೆ ಗೌರವ ಸದಸ್ಯತ್ವ ನೀಡಬೇಕು ಎಂದು ಸಮಿತಿ ಶಿಫಾರಸು ಮಾಡಿದೆ. 

ವಿಧಾನಸಭೆಯ ಹಾಲಿ ಮತ್ತು ಮಾಜಿ ಸದಸ್ಯರ ಉಪಯೋಗಕ್ಕಾಗಿ ಸ್ಥಾಪಿಸುವ ಉದ್ದೇಶದ ಸಾಂವಿಧಾನಿಕ ಕ್ಲಬ್‌ ಆದಷ್ಟು ಶೀಘ್ರ ಕಾರ್ಯ ನಿರ್ವಹಿಸುವಂತಾಗಲು ಜಾಗ ನೀಡುವುದೂ ಸೇರಿದಂತೆ ಇತರ ಕ್ರಮ ಕೈಗೊಳ್ಳಬೇಕು. ಇದೇ ವರ್ಷದಿಂದ ಕ್ಲಬ್‌ ಕಾರ್ಯಾರಂಭ ಮಾಡಲು ಕ್ರಮ ಕೈಗೊಳ್ಳಬೇಕು. ಉಳಿದಂತೆ ಖಾಸಗಿ ಕ್ಲಬ್‌ ಗಳಲ್ಲಿ ಸದಸ್ಯತ್ವ ಶುಲ್ಕ ನಿಗದಿಪಡಿಸುವ ಸಂಬಂಧ  ಸರ್ಕಾರವು ಸೂಕ್ತ ಮಾನದಂಡ ಅಳವಡಿಸಬೇಕು. ಶುಲ್ಕ ನಿಗದಿ ಮುನ್ನ ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಬೇಕು.

ಭಾರತೀಯ ಸಂಪ್ರದಾಯದ ಉಡುಪು ಧರಿಸಿ ಕ್ಲಬ್‌ಗಳ ಪ್ರವೇಶಕ್ಕೆ ಅವಕಾಶ ಮಾಡಿಕೊಡಬೇಕು. ಸರ್ಕಾರಿ ಜಾಗ ಒತ್ತುವರಿ ಮಾಡಿರುವ ಕ್ಲಬ್‌ಗಳನ್ನು ತೆರವಿಗೆ ಕ್ರಮ, ಯಾವ ಚಟುವಟಿಕೆಗಾಗಿ ಕ್ಲಬ್‌ ಗಳು ಮಾನ್ಯತೆ ಪಡೆದಿರುತ್ತವೆಯೋ ಅದರನ್ವಯ ಬಳಕೆಯಾಗುತ್ತಿದೆಯೇ ಎಂಬುದರ ಪರಿಶೀಲನೆಗೆ ಉಸ್ತುವಾರಿ ಸಮಿತಿ ರಚಿಸಬೇಕು. ಸದಸ್ಯತ್ವ ಶುಲ್ಕ ನಿಗದಿಗೆ ಸಂಬಂಧಿಸಿದಂತೆ ಸರ್ಕಾರವೇ ಮಾನದಂಡ ರೂಪಿಸಬೇಕು. ಶುಲ್ಕ ನಿಗದಿಯನ್ನು ಸರ್ಕಾರದ ಗಮನಕ್ಕೆ ತರಬೇಕು. ಈ ಎಲ್ಲಾ ವಿಚಾರಗಳನ್ನು ಕ್ಲಬ್‌ಗಳು ತಮ್ಮ ಬೈಲಾಗಳಲ್ಲಿ ಅಳವಡಿಸಿಕೊಳ್ಳಲು ಸೂಚಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ.

ಶಾಸಕರಿಗೆ ಸದಸ್ಯತ್ವ ನಿರಾಕರಣೆ
ಬೆಂಗಳೂರಿನಲ್ಲಿರುವ ಕೆಲ ಕ್ಲಬ್‌ಗಳಲ್ಲಿ ಶಾಸಕರು ಸೇರಿದಂತೆ ಜನಪ್ರತಿನಿಧಿಗಳ ಸದಸ್ಯತ್ವಕ್ಕೆ ನಿರಾಕರಣೆ ಮತ್ತು ಸಾಂಪ್ರದಾಯಿಕ ಉಡುಪು ಧರಿಸಿದರೆ ಪ್ರವೇಶ ನಿರಾಕರಿಸಿದ್ದರಿಂದ ತೀವ್ರ ವಿವಾದ ಎದ್ದಿತ್ತು. ಇದನ್ನು ಬಗೆಹರಿಸುವ ಸಲುವಾಗಿ ಸರ್ಕಾರವೇ ಈ ಸಮಿತಿ ರಚಿಸಿತ್ತು.

ಟಾಪ್ ನ್ಯೂಸ್

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.