ಮಧ್ಯರಾತ್ರಿಯಿಂದಲೇ ಸರಕು ಸಾಗಣೆದಾರರ ಮುಷ್ಕರ ಆರಂಭ
Team Udayavani, Mar 31, 2017, 7:02 AM IST
ಬೆಂಗಳೂರು: ಕೇಂದ್ರ ಸರ್ಕಾರವು ಸರಕು ಸಾಗಣೆ ವಾಹನಗಳಿಗೆ ಮೂರನೇ ವ್ಯಕ್ತಿ ವಿಮಾ ಮೊತ್ತವನ್ನು ಶೇ.40ರಷ್ಟು ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಸರಕು ಸಾಗಣೆದಾರರು ಗುರುವಾರ ಮಧ್ಯರಾತ್ರಿಯಿಂದ ವಾಹನ ಸಂಚಾರ ಸ್ಥಗಿತಗೊಳಿಸಿ ಮುಷ್ಕರ ಆರಂಭಿಸಿದ್ದಾರೆ.
ಕರ್ನಾಟಕ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿ.ಆರ್. ಷಣ್ಮುಖಪ್ಪ ನೇತೃತ್ವದಲ್ಲಿ ಲಾರಿ ಮಾಲೀಕರು ಗುರುವಾರ
ಮಧ್ಯರಾತ್ರಿಯಿಂದಲೇ ಮುಷ್ಕರ ಆರಂಭಿಸಿದ್ದರೆ, ಚನ್ನಾರೆಡ್ಡಿ ನೇತೃತ್ವದ ಅಖೀಲ ಭಾರತ ಸರಕು ಸಾಗಣೆ ವಾಹನ ಮಾಲೀಕರ
ಸಂಘ ಶುಕ್ರವಾರ ಮಧ್ಯರಾತ್ರಿಯಿಂದ ವಾಹನ ಸಂಚಾರ ಸ್ಥಗಿತಗೊಳಿಸಲಿದೆ. ದಕ್ಷಿಣ ಭಾರತದ ಸರಕು ಸಾಗಣೆದಾರರು ಮುಷ್ಕರ ಆರಂಭಿಸಿರುವುದರಿಂದ ಉತ್ತರ ಭಾರತದ ವಾಹನಗಳು ರಾಜ್ಯ ಪ್ರವೇಶಿಸಲು ಅಡ್ಡಿಯಾಗುವ ಹಿನ್ನೆಲೆಯಲ್ಲಿ ಸರಕು ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.
ಕೇಂದ್ರ ಸರ್ಕಾರವು ವಾಹನಗಳಿಗೆ ಮೂರನೇ ವ್ಯಕ್ತಿ ವಿಮಾ ಶುಲ್ಕವನ್ನು ಶೇ.40ರಷ್ಟು ಹೆಚ್ಚಳ ಮಾಡಿರುವುದನ್ನು ವಿರೋಧಿಸಿ
ಸರಕು ಸಾಗಣೆದಾರರು ಮುಷ್ಕರಕ್ಕೆ ಮುಂದಾಗಿದ್ದಾರೆ. ರಾಜ್ಯ ಸರ್ಕಾರಕ್ಕೆ ಸಂಬಂಧಪಟ್ಟ ವಿಷಯಕ್ಕೆ ಸಂಬಂಧಪಟ್ಟಂತೆ
ಏ.10ರೊಳಗೆ ಸ್ಪಂದಿಸುವುದಾಗಿ ಸಾರಿಗೆ ಸಚಿವರು ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಸರಕು ಸಾಗಣೆದಾರರು ಕೇಂದ್ರ
ಸರ್ಕಾರದ ವಿರುದ್ಧ ಹೋರಾಟ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
MUST WATCH
ಹೊಸ ಸೇರ್ಪಡೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್