ಸಿಗಲಿದೆ ಹೊಸ ಪ್ರವೇಶ ಪತ್ರ: ಜೂನ್ 2ನೇ ವಾರ ವಿದ್ಯಾರ್ಥಿಗಳ ಕೈಗೆ?
Team Udayavani, May 20, 2020, 6:08 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆ ಎದುರಿಸುವ 8.40 ಲಕ್ಷ ವಿದ್ಯಾರ್ಥಿಗಳಿಗೆ ಹೊಸದಾಗಿ ಪ್ರವೇಶ ಪತ್ರ ವಿತರಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ಧರಿಸಿದೆ.
ಮಾರ್ಚ್ ತಿಂಗಳಲ್ಲಿ ನಡೆಯಬೇಕಿದ್ದ ಎಸೆಸೆಲ್ಸಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಈಗಾಗಲೇ ಎಲ್ಲ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ವಿತರಿಸಲಾಗಿದ್ದರೂ ಅವು ಈಗ ಮಾನ್ಯತೆ ಕಳೆದುಕೊಂಡಿವೆ.
ಈಗ ಪರೀಕ್ಷೆ ದಿನಾಂಕ ಮತ್ತು ವೇಳಾಪಟ್ಟಿ ಪರಿಷ್ಕರಿಸಿರುವುದರಿಂದ ಹೊಸ ಪ್ರವೇಶ ಪತ್ರ ವಿತರಿಸಲು ನಿರ್ಧರಿಸಲಾಗಿದೆ.
ತಿದ್ದುಪಡಿಗೂ ಅವಕಾಶ
ಈಗಾಗಲೇ ವಿತರಿಸಿರುವ ಪ್ರವೇಶ ಪತ್ರದ ತಿದ್ದುಪಡಿಗೆ ಮಂಡಳಿ ಈ ಹಿಂದೆ ಅವಕಾಶ ನೀಡಿತ್ತು. ಈಗ ಮತ್ತೆ ಹೊಸ ಪ್ರವೇಶ ಪತ್ರ ಸಿದ್ಧಪಡಿಸಲಾಗುತ್ತಿದ್ದು, ಮತ್ತೆ ತಪ್ಪುಗಳು ಸಂಭವಿಸಬಹುದು, ಹೀಗಾಗಿ ಮತ್ತೆ ತಿದ್ದುಪಡಿಗೆ ಅವಕಾಶ ನೀಡಿ, ಸರಿಪಡಿಸಿಯೇ ಪರೀಕ್ಷೆ ಬರೆಯಲು ಅನುವು ಮಾಡಿಕೊಡುತ್ತೇವೆ ಎಂದು ಮಂಡಳಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ವಿವಿಧ ವಸತಿ ಶಾಲೆಗಳಲ್ಲಿದ್ದು ವ್ಯಾಸಂಗ ಮಾಡುತ್ತಿದ್ದ ಮತ್ತು ವಲಸೆ ಕಾರ್ಮಿಕರ ಮಕ್ಕಳಿಗೆ ಪರೀಕ್ಷಾ ಕೇಂದ್ರ ಬದಲಾವಣೆಗೆ ಅವಕಾಶ ನೀಡಲಾಗಿದೆ. ಎಷ್ಟು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ಬದಲಾಯಿಸಿಕೊಳ್ಳಲಿದ್ದಾರೆ ಎಂಬ ಮಾಹಿತಿ ಮೇ ಅಂತ್ಯಕ್ಕೆ ಮಂಡಳಿಗೆ ಸಿಗಲಿದೆ.
ಜೂನ್ ಮೊದಲ ವಾರದಲ್ಲಿ ಪ್ರವೇಶ ಪತ್ರ ಸಿದ್ಧಪಡಿಸುವ ಕಾರ್ಯ ಆರಂಭವಾಗಲಿದೆ ಎಂದು ಮಂಡಳಿಯ ನಿರ್ದೇಶಕಿ ವಿ. ಸುಮಂಗಳಾ ‘ಉದಯವಾಣಿ’ಗೆ ಖಚಿತಪಡಿಸಿದ್ದಾರೆ.
ಮುಖ್ಯ ಶಿಕ್ಷಕರಿಂದ ವಿತರಣೆ
ವಿದ್ಯಾರ್ಥಿಗಳ ಪ್ರವೇಶ ಪತ್ರವನ್ನು ಪರೀಕ್ಷೆಗೆ ಹತ್ತು ದಿನ ಇರುವಾಗಲೇ ಶಾಲೆಗಳಿಗೆ ಆನ್ಲೈನ್ ಮೂಲಕ ದೊರಕುವಂತೆ ಮಾಡುತ್ತೇವೆ. ಶಾಲಾ ಮುಖ್ಯ ಶಿಕ್ಷಕರು ಇವುಗಳನ್ನು ಡೌನ್ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ವಿತರಣೆ ಮಾಡಬಹುದಾಗಿದೆ ಎಂದು ಮಂಡಳಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಹಳೆಯ ಪ್ರವೇಶ ಪತ್ರದಲ್ಲಿ ಪರೀಕ್ಷೆ ಬರೆಸಲು ಸಾಧ್ಯವಿಲ್ಲ. ಹೀಗಾಗಿ ಹೊಸ ಪ್ರವೇಶ ಪತ್ರ ನೀಡಬೇಕು. ಪರೀಕ್ಷಾ ಕೇಂದ್ರ ಬದಲಾವಣೆಯ ಪೂರ್ಣ ಮಾಹಿತಿ ಸಿಗುತ್ತಿದ್ದಂತೆ ಈ ಕಾರ್ಯ ಆರಂಭಿಸುತ್ತೇವೆ.
– ವಿ. ಸುಮಂಗಳಾ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್