ಭಿನ್ನಮತ ಶಮನಕ್ಕೆ ಸೌಹಾರ್ದದ ಮದ್ದು 


Team Udayavani, Apr 30, 2017, 3:45 AM IST

bsy.jpg

– ಈಶ್ವರಪ್ಪ ತಂಡದ ವಿರುದ್ಧ ತತಕ್ಷಣ ಶಿಸ್ತುಕ್ರಮದ ಸಾಧ್ಯತೆ ಕಡಿಮೆ
– ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್‌ರಾವ್‌ ಆಗಮನ
– ಎರಡೂ ಗುಂಪಿನಿಂದ ಮಾಹಿತಿ ಸಂಗ್ರಹ ಆರಂಭ
– ಶಿಸ್ತುಕ್ರಮದ ಆಗ್ರಹಕ್ಕೆ ಸದ್ಯ ಪರಿಗಣನೆಯಿಲ್ಲ
ಬೆಂಗಳೂರು:
ರಾಜ್ಯ ಬಿಜೆಪಿ ಬಿಕ್ಕಟ್ಟಿಗೆ ಶಿಸ್ತುಕ್ರಮದ ಮೂಲಕ ಪರಿಹಾರ ಕಲ್ಪಿಸುವ ಬದಲು ಸೌಹಾರ್ದಯುತವಾಗಿ ಬಗೆಹರಿಸಲು ಪಕ್ಷದ ವರಿಷ್ಠರು ತೀರ್ಮಾನಿಸಿದ್ದು,  ಪ‌ಕ್ಷದ ವಿರುದ್ಧ ಬಹಿರಂಗವಾಗಿ ತಿರುಗಿ ಬಿದ್ದಿರುವ ಮುಖಂಡರ ಮೇಲೆ ಶಿಸ್ತುಕ್ರಮ ಕೈಗೊಳ್ಳಬೇಕು ಎಂಬ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಒತ್ತಾಯವನ್ನು ಸದ್ಯಕ್ಕೆ ಪರಿಗಣಿಸದಿರಲು ವರಿಷ್ಠರು ನಿರ್ಧರಿಸಿದ್ದಾರೆ.

ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ ಶಿಸ್ತುಕ್ರಮ ಕೈಗೊಂಡರೆ ಸಮಸ್ಯೆ ಉದ್ಭವವಾಗಬಹುದು. ಹೀಗಾಗಿ ಬಿಕ್ಕಟ್ಟಿಗೆ ಕಾರಣವಾದ ಸಮಸ್ಯೆಗಳೇನು ಎಂಬುದನ್ನು ಅರಿತು ಎರಡೂ ಕಡೆಯವರನ್ನು ಕೂರಿಸಿ ಬಿಕ್ಕಟ್ಟು ಶಮನಕ್ಕೆ ವರಿಷ್ಠರು ಮುಂದಾಗಲಿದ್ದಾರೆ. ಒಂದು ವೇಳೆ ಭಿನ್ನಮತ ಬಗೆಹರಿಯುವುದು ಕಷ್ಟಸಾಧ್ಯ ಎಂದಾದಲ್ಲಿ ಮಾತ್ರ ಶಿಸ್ತುಕ್ರಮದ ಅಸ್ತ್ರ ಬಳಸಲು ವರಿಷ್ಠರು ತೀರ್ಮಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಕಾರಣಕ್ಕಾಗಿ ಪಕ್ಷದ ಎರಡೂ ಬಣಗಳ ದೂರು, ಅಹವಾಲು ಮತ್ತು ಸಮಸ್ಯೆಗಳನ್ನು ಆಲಿಸಲು ವರಿಷ್ಠರು ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್‌ ಅವರನ್ನು ಬೆಂಗಳೂರಿಗೆ ಕಳಿಸಿಕೊಟ್ಟಿದ್ದಾರೆ. ಶನಿವಾರ ರಾತ್ರಿ ನಗರಕ್ಕೆ ಆಗಮಿಸಿರುವ ಮುರಳೀಧರ್‌ ರಾವ್‌ ಅವರು, ಎರಡೂ ಗುಂಪಿನ ಮುಖಂಡರಿಂದ ಅಭಿಪ್ರಾಯ ಸಂಗ್ರಹ ಆರಂಭಿಸಿದ್ದಾರೆ.

ಬಿಎಸ್‌ವೈಗೆ ಸಿಗದ ವರಿಷ್ಠರು
ಈ ಮಧ್ಯೆ, ಪಕ್ಷದಲ್ಲಿನ ಬೆಳವಣಿಗೆಯಿಂದ ತೀವ್ರ ಅಸಮಧಾನಗೊಂಡಿದ್ದ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ, ಗುರುವಾರ ಅತೃಪ್ತರು ನಡೆಸಿದ ಸಭೆ, ಅದರ ಹಿಂದಿರುವ ಕಾಣದ ಕೈಗಳು, ಅತೃಪ್ತರಿಗೆ ಬೆಂಬಲ ನೀಡುತ್ತಿರುವ ಬಿ.ಎಲ್‌. ಸಂತೋಷ್‌, ಕೆ.ಎಸ್‌. ಈಶ್ವರಪ್ಪ ವಿರುದ್ಧ ದೂರು ನೀಡಿ ಶಿಸ್ತು ಕ್ರಮಕ್ಕೆ ಆಗ್ರಹಿಸಲು ಶುಕ್ರವಾರ ರಾತ್ರಿಯೇ ದೆಹಲಿಗೆ ತೆರಳಿದ್ದರು.

ಅಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ಶಾ ಅವರನ್ನು ಭೇಟಿ ಮಾಡಿ ಚರ್ಚಿಸುವುದರ ಜೊತೆಗೆ ಆರ್‌ಎಸ್‌ಎಸ್‌ನಿಂದ ನೇಮಕವಾಗಿರುವ ಬಿ.ಎಲ್‌. ಸಂತೋಷ್‌ ವಿರುದ್ಧ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ರಾಮ್‌ಲಾಲ್‌ ಅವರಿಗೆ ದೂರು ನೀಡಲು ನಿರ್ಧರಿಸಿದ್ದರು. ಆದರೆ, ಪಕ್ಷದ ಕಾರ್ಯನಿಮಿತ್ತ ಅಮಿತ್‌ ಶಾ ದೆಹಲಿಯಿಂದ ಹೊರಗಡೆ ಇದ್ದರು.

ರಾಮ್‌ಲಾಲ್‌ ದೆಹಲಿಯಲ್ಲೇ ಇದ್ದರೂ ಯಡಿಯೂರಪ್ಪ ಅವರಿಗೆ ಸಿಕ್ಕಲಿಲ್ಲ. ಈ ಮೂಲಕ ಮೊದಲು ನಿಮ್ಮ ಕಡೆಯಿಂದ ಆಗಿರುವ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳಿ ನಂತರ ಶಿಸ್ತುಕ್ರಮದ ಬಗ್ಗೆ ಒತ್ತಾಯಿಸಿ ಎಂಬ ಸಂದೇಶವನ್ನು ಯಡಿಯೂರಪ್ಪರಿಗೆ ಕಳಿಸಿದ್ದಾರೆ. ಹೀಗಾಗಿ ಯಡಿಯೂರಪ್ಪ ಬರಿಗೈಲಿ ವಾಪಸ್‌ ಆಗುವಂತಾಗಿದೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.