ಸಾರಿಗೆ ನೌಕರರ 5 ಬೇಡಿಕೆ ಈಡೇರಿಕೆ
Team Udayavani, Feb 13, 2021, 5:30 AM IST
ಬೆಂಗಳೂರು: ಕೆಲವು ದಿನಗಳಿಂದ ನಡೆಸುತ್ತಿರುವ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಅವರು ಮುಂದಿಟ್ಟಿರುವ 9 ಬೇಡಿಕೆಗಳ ಪೈಕಿ ಐದನ್ನು ಈಡೇರಿಸಿ ಸರಕಾರ ಅಧಿಕೃತ ಆದೇಶ ಹೊರಡಿಸಿದೆ. ಆದರೆ, ಪ್ರಮುಖ ಬೇಡಿಕೆಯಾಗಿರುವ ವೇತನ ಪರಿಷ್ಕರಣೆ ಇನ್ನೂ ಬಾಕಿ ಇದೆ.
“ಕೋವಿಡ್-19’ನಿಂದ ಸಾವ ನ್ನಪ್ಪಿದ ನೌಕರರ ಕುಟುಂಬಗಳಿಗೆ ಸರಕಾರಿ ನೌಕರರಿಗೆ ನೀಡು ವಂತೆ ಸಂಸ್ಥೆಯ ಆಂತರಿಕ ಸಂಪ ನ್ಮೂಲಗಳಿಂದ ತಲಾ 30 ಲ. ರೂ. ಪರಿಹಾರವನ್ನು ನೀಡುವುದು, ಸಾರಿಗೆ ನಿಗಮಗಳಲ್ಲಿ ಮಾನವ ಸಂಪನ್ಮೂಲ ನಿರ್ವಹಣೆಗೆ ಎಚ್ಆರ್ಎಂಎಸ್ ವ್ಯವಸ್ಥೆ ಜಾರಿಗೊಳಿಸುವುದು, ಘಟಕದ ವ್ಯಾಪ್ತಿಯಲ್ಲಿ ನೌಕರರಿಗೆ ಕಿರುಕುಳ ತಪ್ಪಿಸಲು ಸೂಕ್ತ ಆಡಳಿತ ವ್ಯವಸ್ಥೆ ರೂಪಿಸುವುದು, ಸಾರಿಗೆ ನೌಕರರಿಗೆ ಉಚಿತ ಆರೋಗ್ಯ ಸೇವೆ ಕಲ್ಪಿಸಲು ಸ್ವಾಯತ್ತ ಅನುದಾನಿತ ಆಸ್ಪತ್ರೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳುವುದು ಹಾಗೂ “ನಾಟ್ ಇಶ್ಯೂಡ್ ನಾಟ್ ಕಲೆಕ್ಟೆಡ್’ ವ್ಯವಸ್ಥೆಗೆ ಪರ್ಯಾಯ ವ್ಯವಸ್ಥೆ ಜಾರಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.
ಒಟ್ಟಾರೆ ಹತ್ತು ಬೇಡಿಕೆಗಳನ್ನು ಮುಂದಿಟ್ಟು ನೌಕರರು ಕಳೆದ ಡಿಸೆಂಬರ್ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದ್ದರು. ಪರಿಣಾಮ ನಾಲ್ಕು ದಿನಗಳ ಕಾಲ ಬಸ್ ಸೇವೆ ಸ್ಥಗಿತಗೊಂಡಿತ್ತು. ಅಂತಿಮವಾಗಿ ಸರಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎನ್ನುವ ಪ್ರಮುಖ ಬೇಡಿಕೆ ಹೊರತುಪಡಿಸಿ, ಉಳಿದವುಗಳ ಈಡೇರಿಕೆಗೆ ಸರಕಾರ ಸಮ್ಮತಿಸಿತ್ತು. ಈ ಪೈಕಿ ಬೇಡಿಕೆ ಈಡೇರಿವೆ. ಉಳಿದಂತೆ 6ನೇ ವೇತನ ಆಯೋಗದ ಶಿಫಾರಸು ಜಾರಿ ಕುರಿತು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರ ನೇತೃತ್ವದಲ್ಲಿ ಸಮಿತಿ ರಚಿಸಿದ್ದು, ಎರಡು ಸುತ್ತಿನ ಮಾತುಕತೆ ನಡೆದಿದೆ. ಈ ಶಿಫಾರಸು ಜಾರಿಯಿಂದ ಆಗಬಹುದಾದ ಸಾಧಕ-ಬಾಧಕಗಳ ಕುರಿತು ಸಮಿತಿ ಅಧ್ಯಯನ ನಡೆಸಿ, ಸರಕಾರಕ್ಕೆ ವರದಿ ಸಲ್ಲಿಸಲಿದ್ದು, ಅನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ